ಪ್ರತಿ ಕೆಲಸ ಕೋರ್ಟ್ನಿಂದ ಹೇಳಿಸಿಕೊಂಡು ಕೆಲಸ ಮಾಡಬೇಕೆ ?
'ಪ್ರತಿಯೊಂದು ಕೆಲಸವನ್ನು ನ್ಯಾಯಾಲಯದಿಂದ ಹೇಳಿಸಿಕೊಂಡು ಮಾಡಬೇಕಾ. ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತುಕೊಂಡು ಕೆಲಸ ಮಾಡುತ್ತಿರುವುದು ಸರಿಯಲ್ಲ. ನಿಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಸಮಸ್ಯೆ ಏನು?'' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Vijaya Karnataka 27 Sep 2018, 5:00 am
ಬೆಂಗಳೂರು: ''ಪ್ರತಿಯೊಂದು ಕೆಲಸವನ್ನು ನ್ಯಾಯಾಲಯದಿಂದ ಹೇಳಿಸಿಕೊಂಡು ಮಾಡಬೇಕಾ. ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತುಕೊಂಡು ಕೆಲಸ ಮಾಡುತ್ತಿರುವುದು ಸರಿಯಲ್ಲ. ನಿಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಸಮಸ್ಯೆ ಏನು?'' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
''ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆ ವಿಚಾರದಲ್ಲೂ ನ್ಯಾಯಾಲಯದಿಂದ ನಿರ್ದೇಶನ ಪಡೆದುಕೊಂಡು ಕೆಲಸ ಮಾಡಬೇಕೇ? ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಜನರು ನಿದ್ದೆಗೆಡುವಂತಾಗಿದೆ. ಮಕ್ಕಳು ಮನೆಯಲ್ಲಿ ತುಂಬಿರುವ ನೀರನ್ನು ಹೊರ ಚೆಲ್ಲುವ ಕಷ್ಟವೂ ನಿಮಗೆ ತಿಳಿಯುದಿಲ್ಲವೇ? ಹೈಕೋರ್ಟ್ನಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ,'' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
''ಬೆಂಗಳೂರಿಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರಿದೆ. ಭಾರತ ಎಂದರೆ ಬೆಂಗಳೂರು ಎನ್ನುವ ಮಟ್ಟಕ್ಕೆ ಬೆಳೆದಿದೆ. ಇಂಥಹ ನಗರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಎಂಜಿನಿಯರ್ಗಳು ಮತ್ತು ಇತರೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು,'' ಎಂದು ತಾಕೀತು ಮಾಡಿದರು.
ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಮಾತನಾಡಿ, ''ನ್ಯಾಯಾಲಯವೇ ಗುಂಡಿ ಮುಚ್ಚಲು ಆದೇಶಿಸಿರುವುದು ಪಾಲಿಕೆಯ ಆಡಳಿತ ವೈಖರಿ ಹೇಗಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಈ ಪ್ರವೃತ್ತಿ ದೂರವಾಗಬೇಕು. ನಗರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಇದರ ಉಪಯೋಗ ಜನರು ಪಡೆಯುವಂತಾಗಬೇಕು,'' ಎಂದರು.
''ನಗರದಲ್ಲಿ 380ಕ್ಕೂ ಅಧಿಕ ಕೆರೆಗಳಿದ್ದವು. ರಿಯಲ್ ಎಸ್ಟೇಟ್ ಮಾಫಿಯಾದಿಂದ ಹಲವು ಕೆರೆಗಳು ಮಾಯವಾಗಿವೆ. ಉಳಿದ ಕೆರೆಗಳನ್ನು ಅಭಿವೃದ್ಧಿಪಡಿಸಲು ಕಾರ್ಪೋರೇಟ್ ಕಂಪೆನಿಗಳು ಮುಂದಾಗಬೇಕು. ಬಿಬಿಎಂಪಿ ಶಾಲೆಗಳು ಕಷ್ಟದ ಸ್ಥಿತಿಯಲ್ಲಿವೆ. ಬಡತನ ರೇಖೆಗಿಂತ ಕೆಳಗಿರುವ ಮಕ್ಕಳು ಹೆಚ್ಚಿದ್ದಾರೆ. ವಿಶ್ವದಲ್ಲೇ ಮೊದಲ ಬಾರಿಗೆ ಮೈಕ್ರೋಸಾಫ್ಟ್ ಕಂಪೆನಿ ಸಹಯೋಗದಲ್ಲಿ 'ರೋಶಿನಿ' ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಯಶಸ್ವಿಯಾಗುವ ವಿಶ್ವಾಸವಿದೆ,'' ಎಂದು ಹೇಳಿದರು.
ಶಾಸಕರಾದ ಉದಯ್ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಂಜುನಾಥ್, ಮೇಯರ್ ಆರ್.ಸಂಪತ್ರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಜೆಡಿಎಸ್ ಪಕ್ಷದ ನಾಯಕಿ ನೇತ್ರಾ ನಾರಾಯಣ್, ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
''ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆ ವಿಚಾರದಲ್ಲೂ ನ್ಯಾಯಾಲಯದಿಂದ ನಿರ್ದೇಶನ ಪಡೆದುಕೊಂಡು ಕೆಲಸ ಮಾಡಬೇಕೇ? ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಜನರು ನಿದ್ದೆಗೆಡುವಂತಾಗಿದೆ. ಮಕ್ಕಳು ಮನೆಯಲ್ಲಿ ತುಂಬಿರುವ ನೀರನ್ನು ಹೊರ ಚೆಲ್ಲುವ ಕಷ್ಟವೂ ನಿಮಗೆ ತಿಳಿಯುದಿಲ್ಲವೇ? ಹೈಕೋರ್ಟ್ನಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ,'' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
''ಬೆಂಗಳೂರಿಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರಿದೆ. ಭಾರತ ಎಂದರೆ ಬೆಂಗಳೂರು ಎನ್ನುವ ಮಟ್ಟಕ್ಕೆ ಬೆಳೆದಿದೆ. ಇಂಥಹ ನಗರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಎಂಜಿನಿಯರ್ಗಳು ಮತ್ತು ಇತರೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು,'' ಎಂದು ತಾಕೀತು ಮಾಡಿದರು.
ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಮಾತನಾಡಿ, ''ನ್ಯಾಯಾಲಯವೇ ಗುಂಡಿ ಮುಚ್ಚಲು ಆದೇಶಿಸಿರುವುದು ಪಾಲಿಕೆಯ ಆಡಳಿತ ವೈಖರಿ ಹೇಗಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಈ ಪ್ರವೃತ್ತಿ ದೂರವಾಗಬೇಕು. ನಗರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಇದರ ಉಪಯೋಗ ಜನರು ಪಡೆಯುವಂತಾಗಬೇಕು,'' ಎಂದರು.
''ನಗರದಲ್ಲಿ 380ಕ್ಕೂ ಅಧಿಕ ಕೆರೆಗಳಿದ್ದವು. ರಿಯಲ್ ಎಸ್ಟೇಟ್ ಮಾಫಿಯಾದಿಂದ ಹಲವು ಕೆರೆಗಳು ಮಾಯವಾಗಿವೆ. ಉಳಿದ ಕೆರೆಗಳನ್ನು ಅಭಿವೃದ್ಧಿಪಡಿಸಲು ಕಾರ್ಪೋರೇಟ್ ಕಂಪೆನಿಗಳು ಮುಂದಾಗಬೇಕು. ಬಿಬಿಎಂಪಿ ಶಾಲೆಗಳು ಕಷ್ಟದ ಸ್ಥಿತಿಯಲ್ಲಿವೆ. ಬಡತನ ರೇಖೆಗಿಂತ ಕೆಳಗಿರುವ ಮಕ್ಕಳು ಹೆಚ್ಚಿದ್ದಾರೆ. ವಿಶ್ವದಲ್ಲೇ ಮೊದಲ ಬಾರಿಗೆ ಮೈಕ್ರೋಸಾಫ್ಟ್ ಕಂಪೆನಿ ಸಹಯೋಗದಲ್ಲಿ 'ರೋಶಿನಿ' ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಯಶಸ್ವಿಯಾಗುವ ವಿಶ್ವಾಸವಿದೆ,'' ಎಂದು ಹೇಳಿದರು.
ಶಾಸಕರಾದ ಉದಯ್ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಂಜುನಾಥ್, ಮೇಯರ್ ಆರ್.ಸಂಪತ್ರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಜೆಡಿಎಸ್ ಪಕ್ಷದ ನಾಯಕಿ ನೇತ್ರಾ ನಾರಾಯಣ್, ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.