ಬೆಂಗಳೂರು: ಪಕ್ಷದ ಶಾಸಕರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಔತಣಕೂಟವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಸಿಎಂ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಬುಧವಾರ ರಾತ್ರಿ ಏಳು ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಚಿವರಿಗಾಗಿ ಔತಣಕೂಟ ಆಯೋಜಿಸಲಾಗಿದೆ.
ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯೇ ಔತಣಕೂಟ ಆಯೋಜನೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಆಪ್ತ ಸ್ನೇಹಿತರೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಔತಣಕೂಟ ರದ್ದಾಗಿತ್ತು.
ಈ ಹಿನ್ನೆಲೆಯಲ್ಲಿ ಬುಧವಾರ ಔತಣಕೂಟವನ್ನು ಸಿಎಂ ಬೊಮ್ಮಾಯಿ ಹಮ್ಮಿಕೊಂಡಿದ್ದಾರೆ. ಈ ಮೂಲಕ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇದರ ಹಿಂದಿನ ಉದ್ದೇಶವಾಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇದು ಮೊದಲನೇ ಬಾರಿ ಶಾಸಕರಿಗೆ, ಸಚಿವರಿಗೆ ಔತಣಕೂಟ ಹಮ್ಮಿಕೊಂಡಿರುವುದು ವಿಶೇಷವಾಗಿದೆ.
ಈ ಮೊದಲು ಸೆ. 16ರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಶಾಸಕರು ಮತ್ತು ಸಚಿವರಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಅವರ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿಧನರಾಗಿದ್ದರು. ಹೀಗಾಗಿ ಗೆಳೆಯನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಪ್ರಯಾಣಿಸಬೇಕಾಗಿತ್ತು. ಇದರಿಂದ ಔತಣಕೂಟವನ್ನು ರದ್ದುಗೊಳಿಸಲಾಗಿತ್ತು.
"ಸಹೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರು ಇಂದು ನಿಧನರಾಗಿದ್ದು, ನಾನು ತುಂಬಾ ದುಃಖಿತನಾಗಿದ್ದೇನೆ. ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜತೆ ಇರುತ್ತಿದ್ದರು.
ಅವರ ಅಗಲಿಕೆಯು ನನಗೆ ಅತೀವ ದುಃಖ ತರಿಸಿದ್ದು. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ" ಎಂದು ಸಂತಾಪ ಸೂಚಿಸಿದ್ದರು.
ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯೇ ಔತಣಕೂಟ ಆಯೋಜನೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಆಪ್ತ ಸ್ನೇಹಿತರೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಔತಣಕೂಟ ರದ್ದಾಗಿತ್ತು.
ಈ ಹಿನ್ನೆಲೆಯಲ್ಲಿ ಬುಧವಾರ ಔತಣಕೂಟವನ್ನು ಸಿಎಂ ಬೊಮ್ಮಾಯಿ ಹಮ್ಮಿಕೊಂಡಿದ್ದಾರೆ. ಈ ಮೂಲಕ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇದರ ಹಿಂದಿನ ಉದ್ದೇಶವಾಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇದು ಮೊದಲನೇ ಬಾರಿ ಶಾಸಕರಿಗೆ, ಸಚಿವರಿಗೆ ಔತಣಕೂಟ ಹಮ್ಮಿಕೊಂಡಿರುವುದು ವಿಶೇಷವಾಗಿದೆ.
ಈ ಮೊದಲು ಸೆ. 16ರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಶಾಸಕರು ಮತ್ತು ಸಚಿವರಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಅವರ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿಧನರಾಗಿದ್ದರು. ಹೀಗಾಗಿ ಗೆಳೆಯನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಪ್ರಯಾಣಿಸಬೇಕಾಗಿತ್ತು. ಇದರಿಂದ ಔತಣಕೂಟವನ್ನು ರದ್ದುಗೊಳಿಸಲಾಗಿತ್ತು.
"ಸಹೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರು ಇಂದು ನಿಧನರಾಗಿದ್ದು, ನಾನು ತುಂಬಾ ದುಃಖಿತನಾಗಿದ್ದೇನೆ. ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜತೆ ಇರುತ್ತಿದ್ದರು.
ಅವರ ಅಗಲಿಕೆಯು ನನಗೆ ಅತೀವ ದುಃಖ ತರಿಸಿದ್ದು. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ" ಎಂದು ಸಂತಾಪ ಸೂಚಿಸಿದ್ದರು.