ಆ್ಯಪ್ನಗರ

ಬೆಂಗಳೂರಲ್ಲಿ ಕೊರೊನಾ ಸೋಂಕಿನಿಂದ ಕಾಂಗ್ರೆಸ್‌ ಮುಖಂಡ ಮೃತ!

ನಗರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ಸೋಂಕಿನಿಂದಾಗಿ ಶುಕ್ರವಾರ ಮೃತರಾಗಿದ್ದಾರೆ. ಮೃತರಿಗೆ 53 ವರ್ಷವಾಗಿತ್ತು. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸರಿಯಾದ ಚಿಕಿತ್ಸೆ ಲಭ್ಯವಾಗದ ಕಾರಣ ಶುಕ್ರವಾರ ನಿಧನರಾಗಿದ್ದಾರೆ ಎನ್ನಲಾಗಿದೆ.

Vijaya Karnataka Web 10 Jul 2020, 4:43 pm
ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ಸೋಂಕಿನಿಂದಾಗಿ ಶುಕ್ರವಾರ ಮೃತರಾಗಿದ್ದಾರೆ. ಮೃತರಿಗೆ 53 ವರ್ಷವಾಗಿತ್ತು. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಲ್ಲಿ ಸೋಂಕು ದೃಢವಾಗಿತ್ತು. ಸರಿಯಾದ ಚಿಕಿತ್ಸೆ ಲಭ್ಯವಾಗದ ಕಾರಣ ಶುಕ್ರವಾರ ನಿಧನರಾಗಿದ್ದಾರೆ ಎನ್ನಲಾಗಿದೆ.
Vijaya Karnataka Web covid -19


ಶಾಸಕ ಜಮೀರ್‌ ಅಹಮದ್‌ ಆಪ್ತರಾಗಿದ್ದರು:
ಮೃತರು ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಆಪ್ತರಾಗಿದ್ದರು. ಬೆಂಗಳೂರಿನ ರಾಯಪುರ ವಾರ್ಡ್‌ನಲ್ಲಿ ಕಾಂಗ್ರೆಸ್‌ ಮುಖಂಡರಾಗಿದ್ದರು. ಆದರೂ, ಇವರಿಗೆ ಸರಿಯಾದ ಚಿಕಿತ್ಸೆ ಲಭ್ಯವಾಗಿಲ್ಲ ಎನ್ನುತ್ತಿರುವುದು ಅಚ್ಚರಿ ಮೂಡಿಸಿದೆ.

ಸಾಮಾನ್ಯರಿಗೆ ಜನನಾಯಕರು ಸಾಮಾನ್ಯರಿಗೆ ವ್ಯವಸ್ಥೆ ಕಲ್ಪಸಿಕೊಡಬೇಕಿದೆ. ಆದರೆ, ರಾಜಕೀಯ ಮುಖಂಡರಿಗೇ ಸರಿಯಾದ ಚಿಕಿತ್ಸೆ ಲಭ್ಯವಿಲ್ಲ ಎನ್ನುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಹೊಸ ನೀತಿ: ಸಚಿವರು, ಐಎಎಸ್‌ ಅಧಿಕಾರಿಗಳಿಗೆ ಉಸ್ತುವಾರಿ!

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯ ಹಂತ ತಲುಪಿರುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಬೆಂಗಳೂರು ಕೊರೊನಾ ಸೋಂಕು ನಿರ್ವಹಣೆಗೆ 8 ವಲಯಗಳ ಉಸ್ತುವಾರಿಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ. ಇವರ ಜತೆಗೆ 8 ವಲಯಗಳಿಗೂ 8 ಐಎಎಸ್‌ ಅಧಿಕಾರಿಗಳನ್ನು ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ