ಆ್ಯಪ್ನಗರ

ಬೌರಿಂಗ್ ಆಸ್ಪತ್ರೆಯ ನಿರ್ದೇಶಕರನ್ನು ರಜೆಗೆ ಕಳುಹಿಸಿದ್ದು ಏಕೆ? ರಾಜ್ಯ ಸರ್ಕಾರಕ್ಕೆ ಈಶ್ವರ್‌ ಖಂಡ್ರೆ ಪ್ರಶ್ನೆ

ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕರನ್ನು ರಜೆಯಲ್ಲಿ ಕಳುಹಿಸಿದ್ದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಶ್ನಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಟ್ವೀಟ್ ಮಾಡಿದ್ದು ಹೀಗೆ

Vijaya Karnataka Web 9 Jul 2020, 4:25 pm
ಬೆಂಗಳೂರು: ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕರನ್ನು ಕೊರೊನಾ ಸಂಕಷ್ಟದ ಕಾಲದಲ್ಲಿ ರಜೆಗೆ ಕಳುಹಿಸಿದ್ದು ಏಕೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಶ್ನಿಸಿದ್ದಾರೆ.
Vijaya Karnataka Web kandre



ಬೆಂಗಳೂರಿನಲ್ಲಿ ಕೋವಿಡ್‌ ನಿರ್ವಹಣೆಗೆ ಪ್ಲ್ಯಾನ್‌, 8 ಸಚಿವರಿಗೆ ಹೊಣೆಗಾರಿಕೆ ಕೊಟ್ಟ ಬಿಎಸ್‌ವೈ

ಕೋವಿಡ್ ಸಾಮಗ್ರಿ ಖರಿದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ರನ್ನ ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನ ನಿರ್ದೇಶಕರನ್ನಾಗಿಸೋ ಪ್ರಯತ್ನ ನಡೆದಿದೆ. ಸ್ವತಹ ಬೌರಿಂಗ್ ಆಸ್ಪತ್ರೆ ವೈದ್ಯರೇ ಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ನಿಮ್ಮ ಮೂಗಿನ ಕೆಳಗೆ ಎಲ್ಲಾ ನಡಿತಾ ಇದ್ರೂ ಏಕೆ ಸುಮ್ಮನಿದ್ದಿರಿ? ಎಂದು ಪ್ರಶ್ನಿಸಿದ್ದಾರೆ.

ನಾಗರಹೊಳೆ, ಬಂಡೀಪುರ ಜಂಗಲ್ ಸಫಾರಿಗೆ ಬ್ರೇಕ್: ಹೊಟೇಲ್ ರೂಂ ಕೂಡಾ ಸಿಗಲ್ಲ

ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಏಕೆ ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಏಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ