ಆ್ಯಪ್ನಗರ

Bengaluru Rains: ಮಳೆ ಹಾನಿಯಿಂದ ಬ್ರಾಂಡ್ ಬೆಂಗಳೂರು ಹೆಸರಿಗೆ ಧಕ್ಕೆ: ಸಿದ್ದರಾಮಯ್ಯ

Bengaluru Rains: ಬೆಂಗಳೂರು ಮಹಾ ನಗರದಲ್ಲಿ ಮಳೆ ಹಾನಿ ಸಮಸ್ಯೆಗೆ ಕಾಂಗ್ರೆಸ್ ಕಾರಣ ಎಂಬ ಸಿಎಂ ಬೊಮ್ಮಾಯಿ‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, 17 ವರ್ಷದಲ್ಲಿ ಐದು ವರ್ಷ ನಾವಿದ್ವಿ, ಉಳಿದ ಕಾಲ ಅವರೇ ಇದ್ದದ್ದು ಅಲ್ವಾ? ಜನರ ದಿಕ್ಕು ತಪ್ಪಿಸಲು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದರು. ಒತ್ತುವರಿ ಆಗಲು ಯಾರು ಕಾರಣ..? ಶಾಸಕರೇ ಅಲ್ವಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಇದನ್ನು ನಾನು ಪ್ರಸ್ತಾಪ ಮಾಡುತ್ತೇನೆ ಎಂದಿದ್ದಾರೆ.

Edited byದಿಲೀಪ್ ಡಿ. ಆರ್. | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 8 Sep 2022, 3:38 pm

ಹೈಲೈಟ್ಸ್‌:

  • ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್
  • ಬೆಳ್ಳಂದೂರು ಹಾಗೂ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ
  • ಈ ಭಾಗದ ಶಾಸಕ ಅರವಿಂದ ಲಿಂಬಾವಳಿ,ಬೈರತಿ ಬಸವರಾಜು, ಸತೀಶ್ ರೆಡ್ಡಿ ಏನು ಮಾಡ್ತಿದ್ದಾರೆ ಎಂದು ಸಿದ್ದು ಪ್ರಶ್ನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web siddu
ಮಳೆ ಹಾನಿಯಿಂದ ಬ್ರಾಂಡ್ ಬೆಂಗಳೂರು ಹೆಸರಿಗೆ ಧಕ್ಕೆ: ಸಿದ್ದರಾಮಯ್ಯ
ಬೆಂಗಳೂರು: ಮಳೆ ಹಾನಿಯಿಂದ ಬ್ರಾಂಡ್ ಬೆಂಗಳೂರು ಹೆಸರಿಗೆ ಧಕ್ಕೆಯಾಗ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಹದೇವಪುರ ಕ್ಷೇತ್ರದ ಬೆಳ್ಳಂದೂರು ಹಾಗೂ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾತನಾಡಿದ ಅವರು, ಮಳೆ ಹಾನಿಯಿಂದಾಗಿ ಇವತ್ತು ನಾಗರಿಕರಿಗೆ ಸಾಕಷ್ಟು ತೊಂದರೆಯಾಗಿದೆ ಎಂದರು.
ಜನರು ಮಳೆ ಹಾನಿಯ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಈ ಭಾಗದ ಶಾಸಕ ಅರವಿಂದ ಲಿಂಬಾವಳಿ ಅವರೇನು ಮಾಡ್ತಿದ್ದಾರೆ? ಬೈರತಿ ಬಸವರಾಜು, ಸತೀಶ್ ರೆಡ್ಡಿ ಏನು ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು.

Bengaluru Rains; ಬೆಂಗಳೂರು ಮಳೆ ಹಾನಿ: ಪರಿಶೀಲನೆ ನಡೆಸಿದ ಸಿದ್ದರಾಮಯ್ಯ
ಮಳೆ ಹಾನಿ ಸಮಸ್ಯೆಗೆ ಕಾಂಗ್ರೆಸ್ ಕಾರಣ ಎಂಬ ಸಿಎಂ ಬೊಮ್ಮಾಯಿ‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, 17 ವರ್ಷದಲ್ಲಿ ಐದು ವರ್ಷ ನಾವಿದ್ವಿ ಉಳಿದ ಕಾಲ ಅವರೇ ಇದ್ದದ್ದು ಅಲ್ವಾ? ಜನರ ದಿಕ್ಕು ತಪ್ಪಿಸಲು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದರು.

ಒತ್ತುವರಿ ಆಗಲು ಯಾರು ಕಾರಣ..? ಶಾಸಕರೇ ಅಲ್ವಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಇದನ್ನು ನಾನು ಪ್ರಸ್ತಾಪ ಮಾಡುತ್ತೇನೆ. ಈ ಬೆಳವಣಿಗೆಯಿಂದಾಗಿ ಬ್ರಾಂಡ್ ಬೆಂಗಳೂರು ಹೆಸರಿಗೆ ಧಕ್ಕೆಯಾಗ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಒಂದು ಖ್ಯಾತಿ ಇದೆ. ಅದನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ನಾವು ಮಾಡಬೇಕು ಎಂದರು.

Bengaluru Rain: ಸಿಲಿಕಾನ್ ಸಿಟಿಗೆ ಬೇಕಿದೆ 'ಬೂಸ್ಟ್‌': ಬ್ರಾಂಡ್‌ ಬೆಂಗಳೂರು ಉಳಿಸಲು ಕಸರತ್ತು
ಐಟಿ ಕಂಪನಿಯಿಂದ ಸಿಎಂಗೆ ಪತ್ರ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಹೌದು ಪತ್ರ ಬರೆದಿದ್ದಾರೆ. ಅದಕ್ಕೂ ಮುಂಚೆ ಕ್ರಮ ತಗೋಬೇಕಲ್ವಾ? ಮೂಲಭೂತ ಸೌಕರ್ಯ ನೀಡಬೇಕಲ್ಲ.. ನಷ್ಟ ಆದರೆ ಅವರು ಯಾಕೆ ಉಳಿಯುತ್ತಾರೆ ಎಂದು ಪ್ರಶ್ನಿಸಿದರು.

ಕೆರೆ ಒತ್ತುವರಿಯ ಬಗ್ಗೆ, ಎಟಿ ರಾಮಸ್ವಾಮಿ ವರದಿ ಮೇಲೆ ಒತ್ತುವರಿ ತೆರವು ಮಾಡಿದ್ವಿ. ಜವಾಬ್ದಾರಿಯಿಂದ ನುಣಚಿಕೊಳ್ಳಲು ಹಿಂದಿನ ಸರ್ಕಾರದ ಬಗ್ಗೆ ಹೇಳ್ತಾರೆ. ಬೆಂಗಳೂರನ್ನು ಅನಗತ್ಯವಾಗಿ ಹೆಚ್ಚು ಮಾಡಿ ಬಿಟ್ರು. 110 ಹಳ್ಳಿಗಳನ್ನು ಸೇರಿಸಿ ಬಿಟ್ರು. ಒಂದೂವರೆ ಕೋಟಿ ಜನಸಂಖ್ಯೆ ಕರ್ನಾಟಕದಲ್ಲಿದೆ. ಒಬ್ಬರೇ ಕಮಿಷನರ್ ಹೇಗೆ ನಿರ್ವಹಣೆ ಮಾಡಲು ಸಾಧ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.


ಹಿಂದಿನ ಸರ್ಕಾರವನ್ನು ದೂರುವುದಲ್ಲ, ನೀವೇನು ಮಾಡಿದ್ದೀರಿ?

ಬೆಂಗಳೂರಿನ ಇಂದಿನ‌ ಸ್ಥಿತಿಗೆ ಹಿಂದಿನ ಸರ್ಕಾರವನ್ನು ದೂರುವುದಲ್ಲ, ನೀವೇನು ಮಾಡಿದ್ದೀರಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸರ್ಕಾರ ಬಂದು ಮೂರು ವರ್ಷ ಆಯ್ತು, ಎಷ್ಟು ಒತ್ತುವರಿ ತೆರವು ಮಾಡಿದ್ದೀರಾ? ಎಷ್ಟು ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದೀರಿ ಅನ್ನೋದರ ಬಗ್ಗೆ ಹೇಳಬಹುದಿತ್ತಲ್ವಾ? ನಾವು ಏನ್ ಕೆಲಸ ಮಾಡಿದ್ದೀವಿ ಅಂತ ಹೇಳಿದ್ದೀವಿ. ಅವರು ಏನು ಮಾಡಿದ್ದಾರೆ ಅಂತಾ ಹೇಳೋದು ಬಿಟ್ಟು, ಹಿಂದಿನ ಸರ್ಕಾರದ ಕಾರಣ ಅಂತಾ ಹೇಳ್ತಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ