ಬೆಂಗಳೂರು: ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ಸಿಎಲ್ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ವಿಧಾನಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ ಕುರಿತಾಗಿ ಪಕ್ಷದ ನಿರ್ಧಾರ ಏನು ಎಂಬುವುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಪರಿಷತ್ ಗರ್ವಭಂಗ ತಪ್ಪಿಸಿಕೊಳ್ಳುವುದು ಹೇಗೆ ಎಂಬ ಕುರಿತು ನಾಯಕರು ಚಿಂತಿಸುತ್ತಿದ್ದಾರೆ.
ವಿಧಾನಮಂಡಲ ಅಧಿವೇಶನ: ಆಡಳಿತ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಿದ್ಧ
ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಈಗಾಗಲೇ ಅವಿಶ್ವಾಸ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಭಾಪತಿ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿ ಹಾಕಬೇಕಾ ಅಥವಾ ಬೇಡವಾ ಎಂಬ ನಿಟ್ಟಿನಲ್ಲಿ ನಾಐಕರು ಚರ್ಚೆ ನಡೆಸುತ್ತಿದ್ದಾರೆ.
ಇನ್ನು ಅಧಿವೇಶನದಲ್ಲಿ ಯಾವ ವಿಚಾರಗಳನ್ನು ಪ್ರಸ್ತಾಪ ಮಾಡಬೇಕು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಯಾವ ತಂತ್ರಗಳನ್ನು ಪ್ರಯೋಗ ಮಾಡಬೇಕು ಎಂಬ ಕುರಿತೂ ಚರ್ಚೆ ನಡೆಯುತ್ತಿದ್ದು, ಪ್ರಮುಖವಾಗಿ ಆಡಳಿತ ವೈಫಲ್ಯ, ಶಿವಮೊಗ್ಗ ಸ್ಫೋಟ, ಅನುದಾನ ವಿಳಂಬ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಭೆಯಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.
ವಿಧಾನಮಂಡಲ ಅಧಿವೇಶನ: ಆಡಳಿತ ಪಕ್ಷಕ್ಕೆ ಶಾಕ್ ಕೊಡಲು ಕಾಂಗ್ರೆಸ್ ಸಿದ್ಧತೆ
ಸಭೆಯಲ್ಲಿ ಡಿ.ಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಕೆ.ಸಿ ಕೊಂಡಯ್ಯ, ಜಿ. ಪರಮೇಶ್ವರ, ಪರಿಷತ್ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ವಿಧಾನ ಸಭೆ ಪ್ರತಿಪಕ್ಷದ ಮುಖ್ಯಸಚೇತಕ ತುಕಾರಾಂ, ಪ್ರಿಯಾಂಕ್ ಖರ್ಗೆ, ಸೇರಿದಂತೆ ಪ್ರಮುಖರು ಭಾಗಿಯಾಗಿಯಾಗಿದ್ದಾರೆ.
ವಿಧಾನಮಂಡಲ ಅಧಿವೇಶನ: ಆಡಳಿತ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಿದ್ಧ
ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಈಗಾಗಲೇ ಅವಿಶ್ವಾಸ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಭಾಪತಿ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿ ಹಾಕಬೇಕಾ ಅಥವಾ ಬೇಡವಾ ಎಂಬ ನಿಟ್ಟಿನಲ್ಲಿ ನಾಐಕರು ಚರ್ಚೆ ನಡೆಸುತ್ತಿದ್ದಾರೆ.
ಇನ್ನು ಅಧಿವೇಶನದಲ್ಲಿ ಯಾವ ವಿಚಾರಗಳನ್ನು ಪ್ರಸ್ತಾಪ ಮಾಡಬೇಕು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಯಾವ ತಂತ್ರಗಳನ್ನು ಪ್ರಯೋಗ ಮಾಡಬೇಕು ಎಂಬ ಕುರಿತೂ ಚರ್ಚೆ ನಡೆಯುತ್ತಿದ್ದು, ಪ್ರಮುಖವಾಗಿ ಆಡಳಿತ ವೈಫಲ್ಯ, ಶಿವಮೊಗ್ಗ ಸ್ಫೋಟ, ಅನುದಾನ ವಿಳಂಬ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಭೆಯಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.
ವಿಧಾನಮಂಡಲ ಅಧಿವೇಶನ: ಆಡಳಿತ ಪಕ್ಷಕ್ಕೆ ಶಾಕ್ ಕೊಡಲು ಕಾಂಗ್ರೆಸ್ ಸಿದ್ಧತೆ
ಸಭೆಯಲ್ಲಿ ಡಿ.ಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಕೆ.ಸಿ ಕೊಂಡಯ್ಯ, ಜಿ. ಪರಮೇಶ್ವರ, ಪರಿಷತ್ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ವಿಧಾನ ಸಭೆ ಪ್ರತಿಪಕ್ಷದ ಮುಖ್ಯಸಚೇತಕ ತುಕಾರಾಂ, ಪ್ರಿಯಾಂಕ್ ಖರ್ಗೆ, ಸೇರಿದಂತೆ ಪ್ರಮುಖರು ಭಾಗಿಯಾಗಿಯಾಗಿದ್ದಾರೆ.