ಆ್ಯಪ್ನಗರ

ನನ್ನ ಮನೆಗೆ ರಕ್ಷಣೆ ಕೊಡಲು ಸಾಧ್ಯವಾಗದಿದ್ದರೆ ಕ್ಷೇತ್ರದ ಜನರಿಗೆ ಹೇಗೆ ರಕ್ಷಣೆ ಕೊಡಲಿ! ‘ಅಖಂಡ’ ಪ್ರಶ್ನೆ

ಶಾಸಕನಾಗಿ ನನ್ನ ಮನೆಗೆ ರಕ್ಷಣೆ ನೀಡಲು ಸಾಧ್ಯವಾಗದೆ ಇನ್ನು ಕ್ಷೇತ್ರದ ಜನರಿಗೆ ಹೇಗೆ ರಕ್ಷಣೆ ನೀಡಲು ಸಾಧ್ಯ ಎಂದು ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮಾಧ್ಯಮಗಳ ಮುಂದೆ ತಮ್ಮ ನೋವು ತೋಡಿಕೊಂಡರು.

Vijaya Karnataka Web 13 Aug 2020, 2:16 pm
ಬೆಂಗಳೂರು: ಶಾಸಕನಾಗಿ ನನ್ನ ಮನೆಯನ್ನೇ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ, ಇನ್ನು ಕ್ಷೇತ್ರದ ಜನರಿಗೆ ರಕ್ಷಣೆಯ ಭರವಸೆಯನ್ನು ನಾನು ಹೇಗೆ ಕೊಡಲಿ! ಇದು ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮಾಧ್ಯಮಗಳ ಮುಂದೆ ಕೇಳಿರುವ ಪ್ರಶ್ನೆ.
Vijaya Karnataka Web dj halli


ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಸಂದರ್ಭದಲ್ಲಿ ಕಾವಲ್‌ಭೈರಸಂದ್ರದಲ್ಲಿರುವ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: ಸುಟ್ಟು ಭಸ್ಮವಾದ ಮನೆ ನೋಡಿ ಕಣ್ಣೀರಿಟ್ಟ ಅಖಂಡ ಶ್ರೀನಿವಾಸ್‌ಮೂರ್ತಿ ಪತ್ನಿ

ದಾಳಿಯ ತೀವ್ರತೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಲ್ಲಿರುವ ದಾಖಲೆಗಳು ಸುಟ್ಟು ಹೋಗಿವೆ, ಅಲ್ಲದೆ ಚಿನ್ನಾಭರವಣಗಳನ್ನು ಕಿಡಿಗೇಡಿಗಳು ದೋಚಿದ್ದಾರೆ ಎಂದು ಶಾಸಕರು ಆರೋಪಿಸಿದರು. ಗುರುವಾರ ತಮ್ಮ ಮನೆಗೆ ಭೇಟಿ ನೀಡಿದ ಅವರು ಮನೆಯ ಸ್ಥಿತಿ ಕಂಡು ಮರುಗಿದರು. ಮನೆಯಲ್ಲಿದ್ದ ತಾಯಿಯ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ದೋಚಿಕೊಂಡು ಹೋಗಿದ್ದಾರೆ.

'ಸಿದ್ದರಾಮಯ್ಯನವರೇ ನೀವು ಭಯೋತ್ಪಾದಕರ ಪರವೋ ಅಥವಾ ದಲಿತರ ಪರವೋ?': ನಳೀನ್‌

ಈ ಸ್ಥಿತಿ ಕಂಡು ತುಂಬಾ ದುಖಃ ಆಗಿದೆ. ಈ ತರಾ ಆಗುತ್ತೆ ಎಂದು ಕನಸು ಮನಸ್ಸಿನಲ್ಲಿ ಯೋಚನೆ ಮಾಡಿರಲಿಲ್ಲ ಎಂದು ನೋವು ತೋಡಿಕೊಂಡರು. ಘಟನೆ ನಡೆದ ಬಳಿಕ ಬಿಜೆಪಿ ಕಾಂಗ್ರೆಸ್ ಮುಖಂಡರು ಮನೆಗೆ ಭೇಟಿ ನೀಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸರ್ಕಾರ ನೀಡಿದೆ. ಇದುವರೆಗೆ ದೂರು ನೀಡಿಲ್ಲ. ಆದರೆ ಶೀಘ್ರದಲ್ಲಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುತ್ತೇನೆ ಎಂದರು. ಅಲ್ಲದೆ ಸಿಬಿಐ ತನಿಖೆಗೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಆಗ್ರಹ ಮಾಡಿದ್ದಾರೆ.

ಪೊಲೀಸ್ ಕಮಿಷನರ್‌ ಫೋನ್ ರಿಸೀವ್ ಮಾಡುತ್ತಿಲ್ಲ

ಬೆಂಗಳೂರು ಪೊಲೀಸ್ ಕಮಿಷನರ್‌ ಅವರಿಗೆ ಮಾತನಾಡಲೆಂದು ಫೋನ್ ಮಾಡಿದರೆ ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ನನಗೆ ಮತ್ತು ನನ್ನ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ