ಆ್ಯಪ್ನಗರ

ಕೊರೊನಾ ಭೀತಿ: 818 ಬಸ್‌ ಸಂಚಾರ ರದ್ದು, ಸಂಸ್ಥೆಗೆ 5.30 ಕೋಟಿ ರೂ. ನಷ್ಟ

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇದುವರೆಗೂ ಸುಮಾರು 5.30 ಕೋಟಿ ರೂ.ನಷ್ಟ ಸಂಭವಿಸಿದೆ. ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ವಿವಿಧ ಭಾಗಗಳಿಗೆ ತೆರಳುವ ಸುಮಾರು 818 ಬಸ್‌ಗಳ ಸಂಚಾರವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರದ್ದುಪಡಿಸಿದೆ.

Vijaya Karnataka Web 18 Mar 2020, 7:04 am
ಬೆಂಗಳೂರು: ಕೊರೊನಾ ಸೋಂಕಿನ ಭೀತಿಯಿಂದಾಗಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೇ ಇದೆ. ಕೆಎಸ್‌ಆರ್‌ಟಿಸಿಯ 818 ಬಸ್‌ಗಳ ಸಂಚಾರವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರದ್ದುಪಡಿಸಿದೆ. ಮಾ. 1ರಿಂದ 16ರವರೆಗೆ ಸಂಸ್ಥೆಗೆ 5.30 ಕೋಟಿ ರೂ. ನಷ್ಟ ಉಂಟಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಕೂಡ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಅವತಾರ್‌ ಟಿಕೇಟ್‌ ಬುಕ್ಕಿಂಗ್‌ (ಆನ್‌ ಲೈನ್‌) 5,500ಕ್ಕೆ ಕುಸಿದಿದೆ. ಈ ಹಿಂದೆ ನಿತ್ಯ 22 ರಿಂದ 23 ಸಾವಿರ ಮಂದಿ ಮುಂಗಡ ಟಿಕೆಟ್‌ ಕಾಯ್ದಿರಿಸುತ್ತಿದ್ದರು.
Vijaya Karnataka Web bus


ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಈಗಾಗಲೇ ಹಲವು ರೀತಿಯ ಕಟ್ಟೆಚ್ಚರಗಳನ್ನು ವಹಿಸಿದ್ದಾರೆ. ಸಂಸ್ಥೆಯ ಪ್ರತಿಷ್ಠಿತ ಬಸ್‌ಗಳಲ್ಲಿ ಪ್ರಯಾಣಿಕರಿಗೆ ನೀಡಲಾಗುತ್ತಿದ್ದ ಬ್ಲಾಂಕೆಟ್‌ ಮತ್ತು ಹೊದಿಕೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಪ್ರಯಾಣಿಕರೇ ಮನೆಯಿಂದ ಸ್ವಂತ ಹೊದಿಕೆ, ಬೆಡ್‌ಶೀಟ್‌ಗಳನ್ನು ಕೊಂಡೊಯ್ಯಬೇಕೆಂದು ಸೂಚನೆ ನೀಡಲಾಗಿದೆ. ಮಾ.31ರ ತನಕ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಪ್ರದೇಶಗಳಿಂದ ಊಟಿಗೆ ಸಂಚರಿಸುತ್ತಿದ್ದ ಬಸ್‌ ಸೇವೆಯನ್ನು ರದ್ದುಗೊಳಿಸಲಾಗಿದೆ.

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಚಾಲನಾ ಸಿಬ್ಬಂದಿಯ ಆರೋಗ್ಯದ ಬಗ್ಗೆ ಎಚ್ಚರ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿಗಮದ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಮಾಸ್ಕ್ ನೀಡುವಂತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊರೊನಾ ಪರಿಣಾಮ: 25 ಐಷಾರಾಮಿ ಬಸ್‌ ಸೇವೆ ರದ್ದು, ಪ್ರಯಾಣಿಕರ ಸಂಖ್ಯೆ ಭಾರಿ ಇಳಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ