ಆ್ಯಪ್ನಗರ

"ಸದ್ಯಕ್ಕೆ ಲಾಕ್‌ಡೌನ್‌ ಇಲ್ಲ, ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ": ಸಚಿವ ಆರ್‌.ಅಶೋಕ್

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಹೇರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆ ಬೆನ್ನಲ್ಲಿಯೇ ಸಚಿವ ಆರ್‌.ಅಶೋಕ್‌ ಸದ್ಯಕ್ಕೆ ಲಾಕ್‌ಡೌನ್‌ ಇಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಬಳಿಕ ಲಾಕ್‌ಡೌನ್ ಬಗ್ಗೆ‌ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Vijaya Karnataka Web 25 Jun 2020, 4:48 pm
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಹೇರಿಕೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲಿಯೇ ಕಂದಾಯ ಸಚಿವ ಆರ್‌.ಅಶೋಕ್‌ ಸದ್ಯಕ್ಕೆ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್‌ಡೌನ್‌ ಇಲ್ಲ ಎಂದು ಹೇಳಿದ್ದಾರೆ.
Vijaya Karnataka Web coronavirus outbreak for now no lockdown in state says minister r ashok
"ಸದ್ಯಕ್ಕೆ ಲಾಕ್‌ಡೌನ್‌ ಇಲ್ಲ, ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ": ಸಚಿವ ಆರ್‌.ಅಶೋಕ್


ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜೊತೆ ನಡೆದ ಉನ್ನತ ಮಟ್ಟದ ಸಭೆ ಬಳಿಕ ಮಾತನಾಡಿದ ಆರ್‌.ಅಶೋಕ್‌, ಸದ್ಯಕ್ಕೆ ಲಾಕ್‌ಡೌನ್‌ ಇಲ್ಲ, ಭವಿಷ್ಯದಲ್ಲಿ ಏನಾಗುತ್ತದೆ ಎಂದು ಹೇಳಲು ನಾನು ಜ್ಯೋತಿಷಿ ಅಲ್ಲ ಎಂದಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್‌ಡೌನ್‌ನ್ನು ಅಲ್ಲಗಳೆದಿದ್ದಾರೆ.

ಇನ್ನು, ಶುಕ್ರವಾರ ಬೆಂಗಳೂರಿನ ಶಾಸಕರು, ಸಂಸದರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಇದಾದ ನಂತರ ಲಾಕ್‌ಡೌನ್‌ ಬಗ್ಗೆ ನಿರ್ಧರಿಸುವುದಾಗಿ ಸಿಎಂ ಹೇಳಿದ್ದಾರೆ ಎನ್ನಲಾಗಿದೆ. ಆರ್‌.ಅಶೋಕ್‌ ಅಷ್ಟೇ ಅಲ್ಲದೇ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಕೂಡ ಮತ್ತೆ ಲಾಕ್‌ಡೌನ್‌ ಇಲ್ಲವೆಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ತಜ್ಞರ ಸಲಹೆ ಆಧರಿಸಿ ರಾಜ್ಯದಲ್ಲಿ ಲಾಕ್‌ಡೌನ್‌ ನಿರ್ಧಾರ: ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಜ್ಯದಲ್ಲಿ ಅನ್‌ಲಾಕ್‌ ನಂತರ ಕೊರೊನಾ ವೈರಸ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಹೇರಬೇಕೆಂಬ ಒತ್ತಡ ಸರಕಾರದ ಮೇಲೆ ಕೇಳಿಬರುತ್ತಿದೆ. ರಾಜ್ಯಾದ್ಯಂತ ಅಲ್ಲದಿದ್ದರೂ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಹೇರುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಬೆಂಗಳೂರಿನ ಒಂದಿಷ್ಟು ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಮಾತ್ರ ಪರಿಹಾರವಾ..?: ಸಚಿವ ಸಿ.ಟಿ.ರವಿ ಪ್ರಶ್ನೆ

ಲಾಕ್‌ಡೌನ್‌ ಬಗ್ಗೆ ತಜ್ಞರ ಸಲಹೆಯಂತೆ ಸರಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಚಿವರಾದ ಬಿ.ಶ್ರೀರಾಮುಲು, ಆರ್‌.ಅಶೋಕ್‌, ಸಿ.ಟಿ.ರವಿ, ಬಸವರಾಜ್‌ ಬೊಮ್ಮಾಯಿ ಬುಧವಾರ ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಬೆಳಗ್ಗೆ ಜನ ಸಹಕರಿಸದಿದ್ದರೆ ಲಾಕ್‌ಡೌನ್‌ ಕ್ರಮದ ಎಚ್ಚರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೂಡ ನೀಡಿದ್ದರು.

'ಕೇಂದ್ರದ ನಿರ್ದೇಶನವಿಲ್ಲದೇ ಲಾಕ್‌ಡೌನ್‌ ನಿರ್ಧಾರ ಇಲ್ಲ': ಆರ್‌.ಅಶೋಕ್‌ ಸ್ಪಷ್ಟನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ