ಆ್ಯಪ್ನಗರ

ಬೆಂಗಳೂರಲ್ಲಿ 14 ದಿನಗಳ ಲಾಕ್‌ಡೌನ್‌ಗೆ ಪಟ್ಟು ಹಿಡಿದ ಬಿಬಿಎಂಪಿ ಮೇಯರ್‌!

ನಗರದಲ್ಲಿ ಕೊರೊನಾ ಸೋಂಕು ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸಬೇಕು. ಒಟ್ಟು 14 ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಬೇಕು ಎಂದು ಬಿಬಿಎಂಪಿ ಮೇಯರ್‌ ಗೌತಮ್ ಕುಮಾರ್‌ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Vijaya Karnataka Web 17 Jul 2020, 12:22 pm
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸಬೇಕು. ಒಟ್ಟು 14 ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಬೇಕು ಎಂದು ಬಿಬಿಎಂಪಿ ಮೇಯರ್‌ ಗೌತಮ್ ಕುಮಾರ್‌ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
Vijaya Karnataka Web bengaluru lockdown


ಆದರೆ, ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸಲು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನಸಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ, ಅಷ್ಟದಿಕ್ಪಾಲಕ ಉಸ್ತುವಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ಸಭೆಯವ ನಂತರ ಯಡಿಯೂರಪ್ಪ ಅವರು ತಮ್ಮ ನಿರ್ಣಯವನ್ನು ಘೋಷಿಸಲಿದ್ದಾರೆ.

ಬಿಎಸ್‌ವೈ ಸಭೆಗೂ ಮುನ್ನ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು ಮಾತನಾಡಿ, ಬೆಂಗಳೂರಲ್ಲಿ ಲಾಕ್‌ಡೌನ್‌ ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ 10 ಲಕ್ಷ ದಾಟಿದ ಕೊರೊನಾ ಸಂಖ್ಯೆ: ಇದುವರೆಗೆ 25,602 ಮಂದಿ ಮೃತ!

ಇಲ್ಲಿ ಬಿಬಿಎಂ ಮತ್ತು ರಾಜ್ಯ ಸರಕಾರದ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದೆ. ಬಿಬಿಎಂಪಿ ಲಾಕ್‌ಡೌನ್‌ ಮುಂದುವರಿಕೆ ಬೇಕು ಎಂದು ಪಟ್ಟು ಹಿಡಿದಿದೆ. ಆದರೆ, ರಾಜ್ಯ ಸರಕಾರ ಲಾಕ್‌ಡೌನ್‌ ಎಂದರೆ ಮೂಗು ಮುರಿಯುತ್ತಿದೆ.

ಅದೇನೆ ಇದ್ದರೂ, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನೋಡುತ್ತಿದ್ದರೆ ದಿಗಿಲು ಹುಟ್ಟಿಸುವಂತಿದೆ. ಇದು ಮುಂಬೈ ಸೋಂಕನ್ನು ಮೀರಿಸುವಷ್ಟು ಕ್ಷಿಪ್ರವಾಗಿ ಉಲ್ಬಣವಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಇನ್ನೊಂದು ವಾರಗಳ ಕಾಲ ಲಾಕ್‌ಡೌನ್‌ ಮುಂದುವರಿಸುವಂತೆ ಬಿಬಿಎಂಪಿ ಒತ್ತಾಯಿಸುತ್ತಿದೆ. ಬಿಬಿಎಂಪಿ ಆಯುಕ್ತರು ಕೂಡ ಬೆಂಗಳೂರಲ್ಲಿ ಲಾಕ್‌ಡೌನ್‌ ಮುದುವರಿಕೆಗೆ ಒಲವು ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಲಾಕ್‌ಡೌನ್‌ ಮುಂದುವರಿದರೂ ಅಚ್ಚರಿ ಇಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ