ಬೆಂಗಳೂರು: ರವಿ ಪೂಜಾರಿ ಹೆಸರಿನಲ್ಲಿ ತಮಗೆ ಬೆದರಿಕೆ ಕರೆ ಬಂದಿದ್ದು ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಕೋರಿ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಜೀವನ್ಬಿಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಾರ್ಡ್ಮಟ್ಟದ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾಗೆ ಡಿ.10 ರಂದು ಭೂಗತ ರೌಡಿ ರವಿಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ ಹಣ ನೀಡದಿದ್ದರೆ ಜೀವಕ್ಕೆ ತೊಂದರೆ ಆಗಬಹುದು ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪಾಷಾ ಜೆ.ಜೆ.ನಗರ ಠಾಣೆಗೆ ದೂರು ನೀಡಿದ್ದಾರೆ.
'' ಡಿ.10ರ ಸಂಜೆ ಮತ್ತು 11ರ ಬೆಳಗ್ಗೆ ನನ್ನ ಮೊಬೈಲ್ ಫೋನ್ಗೆ ಅನಾಮಧೇಯ ನಂಬರ್ನಿಂದ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿತ್ತು. ಕರೆ ಬಂದ ಬೆನ್ನಲ್ಲೇ ಬೆದರಿಕೆ ಮೆಸೇಜ್ ಕೂಡ ಬಂದಿದೆ. ನನ್ನ ಕುಟುಂಬ ಸದಸ್ಯರು ಆತಂಕದಲ್ಲಿದ್ದಾರೆ,'' ಎಂದು ದೂರಿನಲ್ಲಿ ಅವರು ವಿವರಿಸಿದ್ದಾರೆ.
ಇಮ್ರಾನ್ ಅವರಿಗೆ ಬೆದರಿಕೆ ಕರೆ ಬಂದಿದ್ದ ಬಗ್ಗೆ ದೂರು ಬಂದಿದೆ. ನ್ಯಾಯಾಲಯದ ಅನುಮತಿ ಪಡೆದು ಎಫ್ಐಅರ್ ದಾಖಲಿಸಿ ತನಿಖೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.