ಆ್ಯಪ್ನಗರ

ಶಾಸಕರಿಂದ ಪ್ರಾಣ ಬೆದರಿಕೆ: ರಕ್ಷಣೆ ನೀಡಲು ಒತ್ತಾಯ

ವಿಧಾನಸಭಾ ಕ್ಷೇತ್ರದ ಶಾಸಕರು, ಪಾಲಿಕೆ ಸದಸ್ಯರು ಮತ್ತು ಅವರ ಸಹಚರರಿಂದ ನನಗೆ ಪ್ರಾಣ ಬೆದರಿಕೆ ಬಂದಿದೆ.

Vijaya Karnataka Web 27 Dec 2017, 10:12 am

ಬೆಂಗಳೂರು: ವಿಧಾನಸಭಾ ಕ್ಷೇತ್ರದ ಶಾಸಕರು, ಪಾಲಿಕೆ ಸದಸ್ಯರು ಮತ್ತು ಅವರ ಸಹಚರರಿಂದ ನನಗೆ ಪ್ರಾಣ ಬೆದರಿಕೆ ಬಂದಿದೆ. ಹೀಗಾಗಿ, ನನಗೆ ಮತ್ತು ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು,' ಎಂದು ಪಾಲಿಕೆಯ ಲಗ್ಗೆರೆ ವಾರ್ಡ್‌ನ ಮಾಜಿ ಸದಸ್ಯ ಎಲ್‌. ಶಿವಣ್ಣ ಒತ್ತಾಯಿಸಿದ್ದಾರೆ.

''ವಾರ್ಡ್‌ ನಂ.69 ರಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಮಾಡದೇ ಅಲ್ಲಲ್ಲಿ ಕಳಪೆ ಕಾಮಗಾರಿಗಳನ್ನು ಮಾಡಿ ನಕಲಿ ಬಿಲ್‌ ತೆಗೆದುಕೊಂಡಿದ್ದಾರೆ. ಈ ಕುರಿತು 2015ರ ಏಪ್ರಿಲ್‌ನಲ್ಲಿ ಲೋಕಾಯುಕ್ತ ಹಾಗೂ ಮುಖ್ಯಮಂತ್ರಿಗೆ ದೂರು ನೀಡಿದ್ದೆ. ಹೀಗಾಗಿ, ಶಾಸಕರು ಹಾಗೂ ಅವರ ಸಹಚರರು ನನಗೆ ಕೊಲೆ ಬೆದರಿಕೆಯೊಡ್ಡಿದ್ದಾರೆ,'' ಎಂದು ಎಲ್‌. ಶಿವಣ್ಣ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಹೇಳಿದ್ದಾರೆ.

'ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಅಲ್ಲಿನ ಪೊಲೀಸರು ನಾನು ನೀಡಿದ ದೂರು ಪರಿಗಣಿಸದೇ ಶಾಸಕರ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಾರೆ. ಈ ಸಂಬಂಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅನಂತರ 2016ರ ಡಿಸೆಂಬರ್‌ನಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಎಸಿಬಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿದ್ದೆ.

Vijaya Karnataka Web corporators making serious allegations against mla
ಶಾಸಕರಿಂದ ಪ್ರಾಣ ಬೆದರಿಕೆ: ರಕ್ಷಣೆ ನೀಡಲು ಒತ್ತಾಯ


ಇದು ಮಾಧ್ಯಮಗಳಲ್ಲಿ ವರದಿಯಾದ ನಂತರ ಹತಾಶರಾದ ಶಾಸಕ ಮುನಿರತ್ನ ತಮ್ಮ ತಪ್ಪುಗಳನ್ನು ನನ್ನ ಮೇಲೆ ಹೊರಿಸಿ, ಸುಳ್ಳು ಅಪಾದನೆ ಮಾಡಿದ್ದಾರೆ. ಜತೆಗೆ ನನ್ನ ಮತ್ತು ನಮ್ಮ ಕುಟುಂಬದವರನ್ನು ಹಿಂಬಾಲಿಸುತ್ತಾ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ ನನಗೂ ನಮ್ಮ ಕುಟುಂಬಕ್ಕೂ ರಕ್ಷಣೆ ನೀಡಬೇಕು. ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ಗಳಲ್ಲಿ ನನಗೆ ಯಾವುದೇ ತೊಂದರೆಯಾದರೆ ಅದಕ್ಕೆ ಶಾಸಕ ಮುನಿರತ್ನ ಹೊಣೆಯಾಗುತ್ತಾರೆ,'' ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ