ಆ್ಯಪ್ನಗರ

ಕೋವಿಡ್ ಲಸಿಕೆ: ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಬಿಎಸ್‌ವೈ

ರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಶನಿವಾರ ಚಾಲನೆ ನೀಡಿದರು. ಆಸ್ಪತ್ರೆ ಸಿಬ್ಬಂದಿ ಮಹಿಳೆಯೊಬ್ಬರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

Vijaya Karnataka Web 16 Jan 2021, 2:39 pm
ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಅಭಿಯಾನಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿ ಮಹಿಳೆಯೊಬ್ಬರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
Vijaya Karnataka Web covid 19



ಕೋವಿಡ್‌ ಲಸಿಕೆ ಅಭಿಯಾನ: ಸಾಂಕೇತಿಕವಾಗಿ ಜನಪ್ರತಿನಿಧಿಗಳು ಮೊದಲು ಲಸಿಕೆ ಪಡೆದುಕೊಳ್ಳದಿರುವುದಕ್ಕೆ ಕಾರಣ ಏನು?

ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್ ಅಟೆಂಡೆಂಟ್ ನಾಗರತ್ನ ಎಂಬುವವರಿಗೆ ವೈದ್ಯರು ಮೊದಲು ಕೋವಿಡ್‌ ಲಸಿಕೆಯನ್ನು ನೀಡಿದರು. ಈ ವೇಳೆ ಅವರ ಬೆನ್ನುತಟ್ಟಿ ಸಿಎಂ ಬಿಎಸ್‌ ಯಡಿಯೂರಪ್ಪ ಧೈರ್ಯ ತುಂಬಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಶಾಸಕರ ಜಮೀರ್ ಅಹಮ್ಮದ್ ಖಾನ್ ಉಪಸ್ಥಿತರಿದ್ದರು.

ಇನ್ನು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಂದ್ರಶೇಖರ್‌ ರಾವ್ ಎಂಬುವವರಿಗೆ ಮೊದಲು ಲಸಿಕೆ ನೀಡಲಾಯಿತು. ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಗೌರವಿಸಲಾಯಿತು. ಲಸಿಕೆ ಪಡೆದುಕೊಂಡ ಬಳಿಕ ಮಾತನಾಡಿದ ಅವರು, ಮೊದಲು ಲಸಿಕೆ ಪಡೆದುಕೊಂಡಿರುವುದಕ್ಕೆ ಹೆಮ್ಮೆ ಅನ್ನಿಸುತ್ತಿದೆ ಎಂದರು.

ಮೊದಲ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಹೆಸರು ನೊಂದಾಯಿಸಲ್ಪಟ್ಟ ಪೌರಕಾರ್ಮಿಕರಿಗೆ ನೀಡಲಾಗುತ್ತದೆ. ಜೊತೆಗೆ ಆರೋಗ್ಯ ಸಿಬ್ಬಂದಿ, ಪೊಲೀಸರು ಕೋವಿಡ್‌ ಲಸಿಕೆ ಪಡೆಯಲಿದ್ದಾರೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿದ್ದಾರೆ.

ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಸೇರಿದಂತೆ ಒಟ್ಟು 243 ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ