ಆ್ಯಪ್ನಗರ

ಶಿಕ್ಷಣ ಸಚಿವರ ಹೆಸರಲ್ಲಿ ನಕಲಿ ಟ್ವೀಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂಗೆ ದೂರು

ನಿನ್ನೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವೀಟ್ ರಚಿಸಿ ಅದನ್ನು ಹರಿಯಬಿಟ್ಟಿದ್ದರು. ಹೀಗಾಗಿ ಸಮಾಜದಲ್ಲಿ ತಪ್ಪು ಸಂದೇಶ ರವಾನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Vijaya Karnataka Web 15 Jul 2020, 7:18 pm
ಬೆಂಗಳೂರು: ಶಿಕ್ಷಣ ಸಚಿವರ ಹೆಸರಿನಲ್ಲಿ ನಕಲಿ ಟ್ವೀಟ್ ಮಾಡಿ ತಪ್ಪು ಸಂದೇಶ ರವಾನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ.
Vijaya Karnataka Web S SURESH KUMAR


ಪಿಯುಸಿ ಫಲಿತಾಂಶದಲ್ಲಿ 16 ರಿಂದ 23ನೇ ಸ್ಥಾನಕ್ಕೆ ಕುಸಿದ ತುಮಕೂರು: ಕೊರೊನಾ ಕಾರಣವಂತೆ..!

ನಿನ್ನೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿತ್ತು. ಇದನ್ನೇ ಬಂಡವಾಳವನ್ನಾಗಿಸಿಕೊಂಡ ಕಿಡಿಗೇಡಿಗಳು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವೀಟ್ ತಯಾರಿಸಿ ಅದನ್ನು ಹರಿಯಬಿಟ್ಟಿದ್ದರು. ಹೀಗಾಗಿ ಸಮಾಜದಲ್ಲಿ ತಪ್ಪು ಸಂದೇಶ ರವಾನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಸದ ಭಗವಂತ ಖೂಬಾಗೆ ಕೊರೊನಾ ಪಾಸಿಟಿವ್..! ಸಚಿವ ಪ್ರಭು ಚವ್ಹಾಣ್ ಕ್ವಾರೆಂಟೈನ್‌..!

ನಿನ್ನೆ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಸಚಿವರು ಪ್ರಕಟಪಡಿಸುತ್ತಿದ್ದಂತೆ ಸಚಿವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಟ್ವೀಟ್‌ನ್ನು ಹರಿಯಬಿಟ್ಟಿದ್ದು, ಅದರಲ್ಲಿ ‘ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಅಂಕಗಳನ್ನು ನೀಡುವ ಕುರಿತು ಮೌಲ್ಯ ಮಾಪಕರಿಗೆ ಸೂಚಿಸಲಾಗಿದೆ’ ಎಂದು ಬರೆಯಲಾಗಿತ್ತು. ಈ ನಕಲಿ ಸಂದೇಶ ರಾಜ್ಯಾದ್ಯಂತ ಪೋಷಕರು ಹಾಗೂ ಮಕ್ಕಳಿಗೆ ಗೊಂದಲವನ್ನು ಉಂಟುಮಾಡಿದ್ದು, ಇದರಿಂದ ಇಲಾಖೆಗೆ ಮುಜುಗರ ಉಂಟಾಗಿದೆ ಎಂದು ಆರೋಪಿಸಿ ದೂರಿನಲ್ಲಿ ತಿಳಿಸಲಾಗಿದೆ.

ಕೆಪಿಎಸ್‌ಸಿ ನೇರ ನೇಮಕಾತಿಗೆ ಸಂಬಂಧಿಸಿದ ಗುಡ್‌ ನ್ಯೂಸ್‌ ಇದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ