ಆ್ಯಪ್ನಗರ

ಸಿಲಿಂಡರ್‌ ಸ್ಫೋಟ: ಎಂಟು ಮಂದಿಗೆ ಗಂಭೀರ ಗಾಯ

ಟಿ.ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಟ್ಟು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Vijaya Karnataka Web 5 Apr 2018, 1:00 pm
ಬೆಂಗಳೂರು: ಟಿ.ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಟ್ಟು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web blast


ಲಕ್ಷ್ಮಮ್ಮ, ಮಹೇಶಮ್ಮ, ವೆಂಕಟೇಶಪ್ಪ, ಮಗ ಸೋಮಶೇಖರ್, ನಿರಂಜನ್, ಹೊನ್ನೂರಪ್ಪ, ಅಲುವೇಲು, ದೇವಿಕಾ ಗಾಯಗೊಂಡವರು.

ವೆಂಕಟೇಶಪ್ಪ ಮತ್ತು ಪತ್ನಿ ಮಹೇಶಮ್ಮಅವರು ಮಕ್ಕಳಾದ ಅಲುವೇಲು, ದೇವಿಕಾಗೆ ರಜೆ ಇದ್ದ ಹಿನ್ನಲೆಯಲ್ಲಿ ದಾಸರಹಳ್ಳಿಗೆ ಬಂದಿದ್ದರು.

ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದೇವರಾಜ್ ನೈಟ್ ಶಿಪ್ಟ್ ಕೆಲಸಕ್ಕೆ ಹೋಗಿದ್ದರು. ಸಂಬಂಧಿಕರು ಮತ್ತು ಲಕ್ಷ್ಮಮ್ಮ ರೂಂನಲ್ಲಿ, ಉಳಿದವರು ಹಾಲ್‌ನಲ್ಲಿ ಮಲಗಿದ್ದರು.

ಬೆಳಗ್ಗೆ 4.30 ಕ್ಕೆ ಕಾಫಿ ಮಾಡಲು ಎದ್ದು ಲಕ್ಷ್ಮಮ್ಮ ಲೈಟ್ ಹಾಕಿದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಕೂಡಲೇ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ದೇವರಾಜ್ ಅವರಿಗೆ ಪೋನ್ ಮಾಡಿ ಕರೆಸಿಕೊಂಡಿದ್ದಾರೆ. ಗಾಯಾಳುಗಳನ್ನು ರಾಜಾಜಿನಗರದ ಇಎಸ್ ಐ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮಶೇಖರ್‌ಗೆ ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ