ಆ್ಯಪ್ನಗರ

ಕೋವಿಡ್‌ ಆತಂಕದ ನಡುವೆಯೂ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ಪರಿಶೀಲಿಸಿದ ಸಿ.ಎನ್. ಅಶ್ವತ್ಥನಾರಾಯಣ

ಜುಲೈ 30 ಹಾಗೂ 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಸಿಎನ್‌ ಅಶ್ವತ್ಥನಾರಾಯಣ ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

Vijaya Karnataka Web 29 Jul 2020, 2:14 pm
ಬೆಂಗಳೂರು: ಗುರುವಾರ ಮತ್ತು ಶುಕ್ರವಾರ ನಡೆಯಲಿರುವ ಸಿಇಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
Vijaya Karnataka Web cet


ಪರೀಕ್ಷಾ ಕೇಂದ್ರವನ್ನು ಕೂಲಂಷವಾಗಿ ಪರಿಶೀಲಿಸಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಕೈಗೊಂಡಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಗಮನಿಸಿದರು. ವಿದ್ಯಾರ್ಥಿಗಳು ಕೂರುವ ಅಂತರ, ಕೊಠಡಿಗಳ ಸ್ಯಾನಿಟೈಶೇಷನ್, ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್, ಭದ್ರತೆ, ಸಾರಿಗೆ, ಮೂಲಸೌಕರ್ಯ ಮತ್ತಿತರೆ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿಇಟಿ ಭವಿಷ್ಯ ಬುಧವಾರ ನಿರ್ಧಾರ, ಪರೀಕ್ಷೆ ನಿರ್ಧಾರ ಮರು ಪರಿಶೀಲನೆಗೆ ಹೈಕೋರ್ಟ್ ಸೂಚನೆ‌

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ, ಸಿಇಟಿ ಪರೀಕ್ಷೆ ಬಗ್ಗೆ ಸರಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಕೋವಿಡ್ ಹಿನ್ನೆಲೆಯಲ್ಲೂ ನಿರಾತಂಕವಾಗಿ ಪರೀಕ್ಷೆ ನಡೆಸಲು ಸರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೋವಿಡ್ ಸವಾಲಿನ ನಡುವೆಯೂ ನಾವು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಅದೇ ರೀತಿ ದ್ವಿತೀಯ ಪಿಯುಸಿಯ ಒಂದು ವಿಷಯದ ಪರೀಕ್ಷೆಯನ್ನು ಕೂಡ ನಿರಾತಂಕವಾಗಿ ನಡೆಸಿದ್ದೇವೆ. ಈ ಪರೀಕ್ಷೆಯನ್ನೂ ಯಾವುದೇ ತೊಂದರೆ ಇಲ್ಲದೆ ನಡೆಸಲು ಸರಕಾರಕ್ಕೆ ಸಾಧ್ಯವಿದೆ ಹಾಗೂ ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಹೇಳಿದರು.

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: IPS ಡಿ. ರೂಪಾ ತಂಡದ ಸಾರ್ಥಕ ಕಾರ್ಯ

ಏಪ್ರಿಲ್ 23-24ಕ್ಕೇ ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕೋವಿಡ್ ಲಾಕ್’ಡೌನ್ ಇದ್ದ ಕಾರಣಕ್ಕೆ ಮುಂದೂಡಲಾಯಿತು. ಮೇ 12ರಂದು ಜುಲೈ 30-31ರಂದು ಪರೀಕ್ಷೆ ನಡೆಸುವುದು ಎಂದು ನಿರ್ಧರಿಸಲಾಯಿತು. ಆ ಕ್ಷಣದಿಂದಲೇ ಸರಕಾರವೂ ಕೋವಿಡ್ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಸಾರಿಗೆ, ವೈದ್ಯಕೀಯ, ರಕ್ಷಣೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಯಿತು.

ಕೋವಿಡ್ ಪಾಸಿಟೀವ್ ಬಂದಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ಝೋನ್’ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಪೋಷಕರೊಬ್ಬರ ಜತೆ ಹೊರಬಂದು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸೇಷನ್, ದೈಹಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ