ಆ್ಯಪ್ನಗರ

ಸಾಲಮನ್ನಾ ಮಾಡದೇ ರೈತರಿಗೆ 2 ಸಾವಿರ ರೂ. ಲಂಚ ನೀಡುವ ಮೋದಿಗೆ ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಪರಮೇಶ್ವರ್

ಈಗ ರಾಜ್ಯಕ್ಕೆ ಬಂದು ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಬೆಂಗಳೂರಿಗೆ ಸ್ವಚ್ಛತಾ ಅಭಿಯಾನದಲ್ಲಿ ಸ್ಥಾನ ಬರದಿರುವುದರಲ್ಲಿ ರಾಜಕೀಯವಿದೆ ಎಂದು ಡಿಸಿಎಂ ಪರಮೇಶ್ವರ್‌ ತಿಳಿಸಿದರು.

Vijaya Karnataka Web 6 Mar 2019, 4:32 pm
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರಕಾರದ ಬಗ್ಗೆ ಲಘುವಾಗಿ ಮಾತನಾಡಬಾರದು ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
Vijaya Karnataka Web ಪರಮೇಶ್ವರ್‌
ಪರಮೇಶ್ವರ್‌


ಗೊಟ್ಟಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತ ವಿರೋಧಿ ಎಂದು ಪ್ರಧಾನಿ ಹೇಳಿದ್ದಾರೆ. ಇದೆಲ್ಲ ಶುದ್ಧ ಸುಳ್ಳು ಎಂದರು.

ರೈತರು ಸ್ವಾವಲಂಬಿಯಾಗಿ ಬದುಕಲು ನಾವು ನೆರವಾಗುತ್ತಿದ್ದೇವೆಯೇ ಹೊರತು ಇದರಲ್ಲಿ ನಮ್ಮ ಸ್ವಾರ್ಥವೇನೂ ಇಲ್ಲ. ಸಾಲಮನ್ನಾ ಮಾಡುವುದು ಬಿಟ್ಟು ರೈತರಿಗೆ ಲಂಚ ನೀಡುವಂತೆ 2 ಸಾವಿರ ರೂಪಾಯಿ ನೀಡಿದ್ದಾರೆ ಎಂದು ದೂರಿದರು.

ಈಗ ರಾಜ್ಯಕ್ಕೆ ಬಂದು ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿಗೆ ಸ್ವಚ್ಛತಾ ಅಭಿಯಾನದಲ್ಲಿ ಸ್ಥಾನ ಬರದಿರುವುದರಲ್ಲಿ ರಾಜಕೀಯವಿದೆ ಎಂದು ದೂರಿದರು.‌

ಬೆಂಗಳೂರು ಜಲಮಂಡಳಿಯಿಂದ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆಯಲ್ಲಿ ಬುಧವಾರದಿಂದ 21 ಹಳ್ಳಿಗಳಿಗೆ ನೀರು ಪೂರೈಕೆ ಆರಂಭವಾಗಿದೆ. ಉತ್ತರಹಳ್ಳಿ ಹಾಗೂ ಗೊಟ್ಟಿಗೆರೆಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೀರು ಪೂರೈಕೆಗೆ ಚಾಲನೆ ನೀಡಿದರು.

ಉತ್ತರಹಳ್ಳಿಯಲ್ಲಿ 17.84 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ, 24 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಾಗಾರವನ್ನು ಉದ್ಘಾಟಿಸಲಾಯಿತು.

ಇದರಿಂದ 21 ಹಳ್ಳಿಗಳಿಗೆ ನೀರು ನೀಡಲಾಗುತ್ತಿದೆ. ಗೊಟ್ಟಿಗೆರೆಯಲ್ಲಿ 50 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಾಗಾರದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

73 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, 2020 ಸೆಪ್ಟೆಂಬರ್‌ ನಲ್ಲಿ‌ ಮುಗಿಯಲಿದೆ. ಈ ಜಲಾಗಾರದಿಂದ 20 ಹಳ್ಳಿಗಳಿಗೆ ನೀರು ಸರಬರಾಜಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ