ಆ್ಯಪ್ನಗರ

ಬಿಎಸ್‌ವೈ ಮನೆಯಲ್ಲಿ ಸ್ವಾಮೀಜಿಗಳಿಗೆ ಕವರ್‌ ನೀಡಿದ್ದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಕೊಟ್ಟ ಸ್ಪಷ್ಟನೆ ಏನು ಗೊತ್ತಾ?

ಸಮಾಜದಲ್ಲಿ‌ ಗೊಂದಲವಾದಾಗ ಜನ ಮಠಕ್ಕೆ ಭೇಟಿ ನೀಡ್ತಾರೆ ಹಾಗೂ ಮಠಾಧೀಶರ ಸಲಹೆಗಳನ್ನು ಕೇಳ್ತಾರೆ. ಸಮಾಜದ ಅಂಕುಡೊಂಕು ಸರಿಮಾಡಬೇಕು 25 ರಂದು ಮಠಾಧೀಶರ ಸಭೆ ನಡೆಸುತ್ತಿದ್ದೇವೆ. ಅರಮನೆ ಮೈದಾನದಲ್ಲಿ ಸಭೆ ನಡೆಸುತ್ತೇವೆ. ಎಲ್ಲ ಮಠಾಧೀಶರು ಭಾಗವಹಿಸುತ್ತಾರೆ

Vijaya Karnataka Web 23 Jul 2021, 4:54 pm
ಬೆಂಗಳೂರು: ಕಾಣಿಕೆ ಕೊಡುವ ಸಂಸ್ಕೃತಿ ಭಕ್ತರಲ್ಲಿದೆ, ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ! ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ‌ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಮಠಾಧೀಶರಿಗೆ ಸಿಎಂ ನಿವಾಸದಲ್ಲಿ ಕವರ್ ಕೊಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಚಿವರು ಕಾಗದ ತೋರಿಸಿದ್ದಕ್ಕೆ ಅಷ್ಟು ಸುದ್ದಿಯಾಯ್ತು. ನಂತರ ಅದರಲ್ಲಿರುವುದು ಏನು ಎಂದು ಗೊತ್ತಾದಾಗ ನಂತರ ಸುಮ್ಮನಾದ್ರಿ ಎಂದರು.
Vijaya Karnataka Web ಬಿಎಸ್‌ವೈ ಮನೆಯಲ್ಲಿ ಮಠಾಧೀಶರು
ಬಿಎಸ್‌ವೈ ಮನೆಯಲ್ಲಿ ಮಠಾಧೀಶರು


ಸಿಎಂ ನಿವಾಸದಲ್ಲಿ ಮಠಾಧೀಶರಿಗೂ ಪತ್ರ ಕೊಟ್ಟಿದ್ದಾರೆ. ಇದನ್ನೇ ಬೇರೆ ರೀತಿಯಲ್ಲಿ‌ ತೋರಿಸಿದ್ದು ವಿಕೃತಿ.
ಅದನ್ನು ತೋರಿಸುವವರ ಮನಸ್ಸಿನ ವಿಕೃತಿ ತೋರಿಸುತ್ತದೆ. ಮಠಾಧೀಶರು ಹೋದಾಗ ಹಣ್ಣುಹಂಪಲು ಕೊಡ್ತಾರೆ.‌
ಮನೆಗಳಿಗೆ ಬಂದಾಗ ಭಕ್ತರು ನೀವೇ ಕೊಡ್ತೀರಿ. ಅದನ್ನೇ ಬೇರೆ ರೀತಿ ತೋರಿಸಿದರೆ ಏನು ಮಾಡುವುದು? ಎಂದು ಪ್ರಶ್ನಿಸಿದ ಅವರು, ಕೊಟ್ಟ ಕವರ್ ನಲ್ಲಿ ಏನೂ ಇರಲಿಲ್ಲ, ಕಾಣಿಕೆ ಕೊಡುವ ಸಂಸ್ಕೃತಿ ಭಕ್ತರಲ್ಲಿದೆ. ಅದಕ್ಕೆ ಬೇರೆ ಅರ್ಥ ಮಾಡಿಕೊಳ್ಳುವುದು ಸರಿಯಲ್ಲ ಎಂದರು.‌

ಪತ್ರಿಕಾಗೋಷ್ಠಿಯಲ್ಲಿ ತಿಪಟೂರಿನ ರುದ್ರಮುನಿ‌ ಶ್ರೀಗಳು ಮಾತನಾಡಿ, ಮಠಗಳು ಸಮಾಜಕ್ಕೆ ತಮ್ಮದೇ ಕೊಡುಗೆ ಕೊಟ್ಟಿವೆ. ಮಠಾಧಿಪತಿಗಳಿಗೆ ವಿಶಿಷ್ಟ ಸ್ಥಾನಮಾನವಿದೆ, ಸಮಾಜದಲ್ಲಿ‌ ಗೊಂದಲವಾದಾಗ ಜನ ಮಠಕ್ಕೆ ಭೇಟಿ ನೀಡ್ತಾರೆ ಹಾಗೂ ಮಠಾಧೀಶರ ಸಲಹೆಗಳನ್ನು ಕೇಳ್ತಾರೆ. ಸಮಾಜದ ಅಂಕುಡೊಂಕು ಸರಿಮಾಡಬೇಕು ಹೀಗಾಗಿ 25 ರಂದು ಮಠಾಧೀಶರ ಸಭೆ ನಡೆಸುತ್ತಿದ್ದೇವೆ ಎಂದರು.‌ ಅರಮನೆ ಮೈದಾನದಲ್ಲಿ ಸಭೆ ನಡೆಸುತ್ತೇವೆ. ಎಲ್ಲ ಮಠಾಧೀಶರು ಅದರಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಬಾಳೆಹೊಸೂರಿನ ದಿಂಗಾಲೇಶ್ವರ ಶ್ರೀ ಮಾತನಾಡಿ, ವರ್ತಮಾನದ ವಿಚಾರಗಳ ಚರ್ಚೆಗೆ ಸಮಾವೇಶ ನಡೆಸಲಾಗುವುದು. ಇದೇ 25 ರಂದು ಮಠಾಧಿಪತಿಗಳ ಸಮಾವೇಶ ಕರೆದಿದ್ದೇವೆ. ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶ ರಾಜ್ಯದ ಹಿತ ರಕ್ಷಣೆ, ಮಠಾಧಿಪತಿಗಳ ಕರ್ತವ್ಯ ಕುರಿತು ಚಿಂತನೆ ಮಾಡಲಿದೆ. ರಾಜ್ಯದ ಅಗ್ರಗಣ್ಯ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಇದು ಸಾರ್ವಜನಿಕ ಸಭೆಯಲ್ಲ, ಮಠಾಧಿಪತಿಗಳ ಸಭೆ ಬದಲಾಗಿ ಒಂದು ಸಮಾಜದ ಸಭೆಯಲ್ಲ ಎಲ್ಲಾ ಸಮಾಜಗಳ ಮಠಾಧೀಶರ ಸಭೆಯಾಗಿದ್ದು ಯಾವುದೇ ವ್ಯಕ್ತಿ ಕುರಿತು ಸಮಾವೇಶ ಮಾಡ್ತಿಲ್ಲ ಹೊರತಾಗಿ ಹಲವು ಧ್ಯೇಯೋದ್ದೇಶಗಳನ್ನ ಕುರಿತು ಚರ್ಚಿಸಲಿದ್ದೇವೆ ಎಂದರು.

ರಾಜ್ಯದ ಎಲ್ಲ ಮಠಾಧಿಪತಿಗಳು ಶನಿವಾರ ಬೆಂಗಳೂರಿಗೆ ಆಗಮಿಸಬೇಕು. ಎಲ್ಲರಿಗೂ ವಸತಿ,ಊಟದ ವ್ಯವಸ್ಥೆ ಮಾಡಲಾಗುತ್ತದೆ ಮಠಾಧೀಶರಿಗೆ ದಿಂಗಾಲೇಶ್ವರ ಶ್ರೀಗಳು ಕರೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ