ಆ್ಯಪ್ನಗರ

ಅರಣ್ಯ ಅಧಿಕಾರಿಗಳು ಹಾಗೂ ಅರಣ್ಯ ರಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ ಪದಕ ವಿತರಣೆ

ಎಲ್ಲಾ ಒತ್ತಡ ಮೀರಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಶ್ರಮ ವಹಿಸುತ್ತಿದೆ. ಇವರ ಪರಿಶ್ರಮದಿಂದ ಕರ್ನಾಟಕಕ್ಕೆ ಉತ್ತಮ ಹೆಸರಿದೆ ಎಂದ ಸಿಎಂ ಬಿಎಸ್‌ ಯಡಿಯೂರಪ್ಪ, ಪದಕ ಪಡೆದವರು ಮುಂದಿನ ದಿನಗಳಲ್ಲಿ ಅರಣ್ಯ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

Vijaya Karnataka Web 23 Nov 2020, 1:39 pm
ಬೆಂಗಳೂರು: ಅರಣ್ಯ ಅಧಿಕಾರಿಗಳು ಹಾಗೂ ಅರಣ್ಯ ರಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ ಪದಕ ವಿತರಣಾ ಕಾರ್ಯಕ್ರಮ ವಿಧಾನಸೌಧದಲ್ಲಿ ಸೋಮವಾರ ನಡೆಯಿತು.
Vijaya Karnataka Web medal of honor to forest officers


ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಭಾಗಿಯಾಗಿ ಅರಣ್ಯ ಅಧಿಕಾರಿಗಳು ಹಾಗೂ ಅರಣ್ಯ ರಕ್ಷಕರಿಗೆ ಗೌರವ ಪದಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಅರಣ್ಯ ಜೀವ ಜಲದ ಆಗರ, ಈ ನೈಸರ್ಗಿಕ ಸಂಪತ್ತನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಪಶ್ಚಿಮ ಘಟ್ಟಗಳ ಬಹುಭಾಗ ನಮ್ಮ ರಾಜ್ಯದಲ್ಲಿ ಇದೆ. ರಾಜ್ಯ ವನ್ಯಜೀವಿ ಸಂರಕ್ಷಣೆಯಲ್ಲಿ ಅಗ್ರಸ್ಥಾನದಲ್ಲಿದೆ. ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿ ಇದ್ದರೆ ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನ ಇದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

‘ಕೆಲ ಬಿಜೆಪಿ ಶಾಸಕರು ಸಣ್ಣಪುಟ್ಟ ಕೆಲಸ ಮುಗಿಸಿ ಕಾಂಗ್ರೆಸ್‌ಗೆ ಬರ್ತಾರೆ’; ಕುತೂಹಲ ಮೂಡಿಸಿದ ಡಿಕೆಶಿ ಹೇಳಿಕೆ..!

ಅಲ್ಲದೇ ಎಲ್ಲಾ ಒತ್ತಡ ಮೀರಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಶ್ರಮ ವಹಿಸುತ್ತಿದೆ. ಇವರ ಪರಿಶ್ರಮದಿಂದ ಕರ್ನಾಟಕಕ್ಕೆ ಉತ್ತಮ ಹೆಸರಿದೆ ಎಂದ ಸಿಎಂ ಬಿಎಸ್‌ ಯಡಿಯೂರಪ್ಪ, ಪದಕ ಪಡೆದವರು ಮುಂದಿನ ದಿನಗಳಲ್ಲಿ ಅರಣ್ಯ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ರಂಗಾಸಕ್ತರಿಗೆ ಸಿಹಿಸುದ್ದಿ; ಬೆಂಗಳೂರಿನಲ್ಲಿ ಇಂದಿನಿಂದ ನ.26ರವರೆಗೆ 'ಶಂಕರ್‌ನಾಗ್‌ ನಾಟಕೋತ್ಸವ’ ಹಬ್ಬ

ಬಳಿಕ ಮಾತನಾಡಿದ ಅರಣ್ಯ ಸಚಿವ ಆನಂದ್ ಸಿಂಗ್, ರಾಜ್ಯದ ಅರಣ್ಯ ಇಲಾಖೆ ದೇಶದಲ್ಲಿ ಗಮನ ಸೆಳೆದಿದೆ. ನಮ್ಮನ್ನು ಮಾದರಿಯಾಗಿ ಇಟ್ಟುಕೊಂಡು ಇತರ ರಾಜ್ಯಗಳು ಕೆಲಸ ಮಾಡುತ್ತಿದೆ. ಅನೇಕ ಅಧಿಕಾರಿಗಳ ಹಾಗೂ ಸಿಬ್ಬಂದಿ ಶ್ರಮದ ಮೇಲೆ ಅರಣ್ಯ ಉಳಿದಿದೆ ಎಂದರು. ಅಲ್ಲದೇ ಒತ್ತಡದಲ್ಲಿ ಇಲಾಖೆ ಕೆಲಸ ಮಾಡುವ ಪರಿಸ್ಥಿತಿ ಇದೆ. ಅರಣ್ಯ ಪರಿಸರ ಉಳಿಸದೆ ಇದ್ದರೆ ನಮಗೆ ಉಳಿಗಾಲ ಇಲ್ಲ. ಅರಣ್ಯ ಪರಿಸರ ಮನುಷ್ಯನ ಜೀವನಾಡಿಯಾಗಿದೆ. ಲಾಕ್‌ಡೌನ್ ಪರಿಣಾಮ ಪರಿಸರ ಸಮೃದ್ಧಿಯಾಗಿದೆ. ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ಅರಣ್ಯ ಇಲಾಖೆಯ ನೌಕರರ ವೇತನ ಕಡಿತ ಮಾಡಿಲ್ಲ ಇದಕ್ಕಾಗಿ ಸಿಎಂ ಅವರನ್ನು ಅಭಿನಂದಿಸುವುದಾಗಿ ಆನಂದ್ ಸಿಂಗ್ ಹೇಳಿದರು.

‘ಸಮಾಜ ಒಡೆಯೋದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಸರಕಾರ ಮಾಡುತ್ತಿದೆ’; ಡಿಕೆಶಿ ಆರೋಪ

ಇದೇ ವೇಳೆ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಪೊಲೀಸ್ ಇಲಾಖೆಗೆ ಸಿಗುವ ಸೌಲಭ್ಯ ನೀಡುವಂತೆ ಸಿಎಂ ಬಿಎಸ್‌ವೈ ಅವರಲ್ಲಿ ಆನಂದ್ ಸಿಂಗ್ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ