ಆ್ಯಪ್ನಗರ

ಭಕ್ತರಿಗೆ ಸಿಹಿಸುದ್ದಿ; ಬನಶಂಕರಿ ದೇವಿಯ ದರ್ಶನಕ್ಕೆ ಮತ್ತೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ

ಈ ಹಿಂದೆ ಅಮಾವಾಸ್ಯೆ ವಿಶೇಷ ದಿನ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದೇವರ ದರ್ಶನ ಪಡೆಯಲು ಮುಗಿಬಿದ್ದ ಕಾರಣ ಸಾರ್ವಜನಿಕರಿಗೆ ದೇವರ ದರ್ಶನ ಪಡೆಯಲು ನಿರ್ಬಂಧ ಹೇರಲಾಗಿತ್ತು. ಇದೀಗ ನವರಾತ್ರಿ ವಿಶೇಷ ದಿನಗಳಾಗಿರುವುದರಿಂದ ದೇವರ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಭಕ್ತರು ಒತ್ತಾಯಿಸಿದ್ದರು.

Vijaya Karnataka Web 20 Oct 2020, 7:13 am
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ನಗರದ ಬನಶಂಕರಿ ದೇವಾಲಯದಲ್ಲಿ ಭಕ್ತರಿಗೆ ದೇವಿಯ ದರ್ಶನಕ್ಕೆ ನಿರ್ಬಂಧ ವಿಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.
Vijaya Karnataka Web Banashankari
ಸಂಗ್ರಹ ಚಿತ್ರ


ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್‌ ಧರಿಸಿ ದೇವಿಯ ದರ್ಶನ ಪಡೆಯುವುದಕ್ಕೆ ಅನುವು ಮಾಡಿಕೊಡಲಾಗಿದೆ. ನವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಭಕ್ತರು ಬೆಳಗ್ಗೆ 8ರಿಂದ ಮಧ್ಯಾಹ್ನ 1.30 ಹಾಗೂ ಸಂಜೆ 4.30ರಿಂದ ರಾತ್ರಿ 8.30ರವರೆಗೆ ದೇವರ ದರ್ಶನ ಪಡೆದರು. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8.30ರ ವರೆಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿಗರೇ ಇತ್ತ ಗಮನಿಸಿ..! ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ

ಈ ಹಿಂದೆ ಅಮಾವಾಸ್ಯೆ ವಿಶೇಷ ದಿನ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದೇವರ ದರ್ಶನ ಪಡೆಯಲು ಮುಗಿಬಿದ್ದ ಕಾರಣ ಸಾರ್ವಜನಿಕರಿಗೆ ದೇವರ ದರ್ಶನ ಪಡೆಯಲು ನಿರ್ಬಂಧ ಹೇರಲಾಗಿತ್ತು. ಇದೀಗ ನವರಾತ್ರಿ ವಿಶೇಷ ದಿನಗಳಾಗಿರುವುದರಿಂದ ದೇವರ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಭಕ್ತರು ಒತ್ತಾಯಿಸಿದ್ದರು.

ಅನಧಿಕೃತವಾಗಿ ರಸ್ತೆ ಕತ್ತರಿಸುವ ಸಂಸ್ಥೆಗಳಿಗೆ 25 ಲಕ್ಷ ದಂಡ ವಿಧಿಸಲು ಬಿಬಿಎಂಪಿ ಆಯುಕ್ತರ ಸೂಚನೆ

ಹೀಗಾಗಿ, ಸಾರ್ವಜನಿಕರು ಕೊರೊನಾ ನಿಯಮ ಪಾಲನೆಯೊಂದಿಗೆ ದೇವರ ದರ್ಶನ ಪಡೆಯುವಂತೆ ಸೂಚಿಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ