ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ: ನಿವೃತ್ತ ಅಧಿಕಾರಿಗಳ ಸತ್ಯಶೋಧನಾ ಸಮಿತಿಯಿಂದ ಬಿಎಸ್‌ವೈಗೆ ವರದಿ ಸಲ್ಲಿಕೆ

ಡಿಜೆ ಹಳ್ಳಿ ಗಲಭೆಯ ಸಂಬಂಧಿಸಿದಂತೆ ನಿವೃತ್ತ ಅಧಿಕಾರಿಗಳ ಸತ್ಯಶೋಧನಾ ಸಮಿತಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಕೆ ಮಾಡಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ.

Vijaya Karnataka Web 4 Sep 2020, 10:09 am
ಬೆಂಗಳೂರು: ಪ್ರವಾದಿ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿಯಿಂದ ಶುಕ್ರವಾರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಲಾಯಿತು.
Vijaya Karnataka Web dj halli violence


ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಘಟನೆಯ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದೆ. ಮದನ್ ಗೋಪಾಲ್ ನೇತೃತ್ವದಲ್ಲಿ ಆರು ಮಂದಿಯ ತಂಡ ಖಾಸಗಿಯಾಗಿ ಗಲಭೆಯ ಕುರಿತಾಗಿ ಸತ್ಯಶೋಧನೆ ನಡೆಸಿತ್ತು.

ಡಿಜೆ ಹಳ್ಳಿ ಗಲಭೆ: ಬಿಜೆಪಿ–ಕಾಂಗ್ರೆಸ್‌ಗೆ ಎಚ್‌ಡಿಕೆಯಿಂದ ಹತ್ತು ಪ್ರಶ್ನೆಗಳು!

ಪ್ರವಾದಿ ಕುರಿತಾಗಿ ನಿಂದತಾತ್ಮಕ ಫೇಸ್‌ಬುಕ್ ಕಾಮೆಂಟ್‌ ಮಾಡಿದ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ಹಿಂಸಾಚಾರ ನಡೆದಿತ್ತು. ದುಷ್ಕರ್ಮಿಗಳ ಗುಂಪು ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿತ್ತು. ಠಾಣೆಗೆ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿತ್ತು.

ಅಷ್ಟೇ ಅಲ್ಲದೆ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮನೆಯ ಮೇಲೂ ದಾಳಿ ನಡೆಸಿ ಬೆಂಕಿ ಹಚ್ಚಲಾಗಿತ್ತು. ಗಲಭೆ ನಿಯಂತ್ರಣ ಮಾಡಲು ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ. ಠಾಣೆಯಲ್ಲಿ ಮತ್ತೋರ್ವ ಯುವಕ ಮೃತಪಟ್ಟಿದ್ದಾನೆ.

ಡಿಜೆ ಹಳ್ಳಿ ಗಲಭೆ: ತನಿಖೆಯಿಂದ ಸತ್ಯ ಸಂಗತಿಗಳು ಹೊರಬರುತ್ತಿವೆ, ಬಿಎಸ್‌ವೈ

ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 400 ಕ್ಕೂ ಅಧಿಕ ಮಂದಿಯನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಕಠಿಣ ಸೆಕ್ಷನ್‌ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದೆ. ಈ ಗಲಭೆ ಪ್ರಕರಣ ರಾಜಕೀಯ ವಲಯದಲ್ಲೂ ಭಾರೀ ಚರ್ಚೆ, ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ