ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ: ಕ್ಲೇಮ್‌ ಕಮಿಷನರ್‌ಗೆ ಸಮನ್ಸ್‌, ವಿಚಾರಣೆ ನಡೆಸುವ ಅಧಿಕಾರ

ಗಲಭೆ ಪ್ರಕರಣದಲ್ಲಿ ನಷ್ಟ ವಸೂಲಿಗೆ ನೇಮಕ ಮಾಡಲಾಗಿರುವ ಕ್ಲೇಮ್‌ ಕಮಿಷನರ್‌ಗೆ ಸಾಕ್ಷಿಗಳಿಗೆ ಸಮನ್ಸ್‌ ನೀಡುವ, ವಿಚಾರಣೆ ನಡೆಸುವ ಹೆಚ್ಚಿನ ಅಧಿಕಾರವನ್ನು ಕರ್ನಾಟಕ ಹೈಕೋರ್ಟ್‌ ನೀಡಿದೆ.

Vijaya Karnataka 29 Sep 2020, 10:17 pm
ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ನಷ್ಟ ವಸೂಲಿಗೆ ನೇಮಕ ಮಾಡಲಾಗಿರುವ ಕ್ಲೇಮ್‌ ಕಮಿಷನರ್‌ಗೆ ಹೈಕೋರ್ಟ್‌ ಹೆಚ್ಚಿನ ಅಧಿಕಾರ ನೀಡಿದೆ.
Vijaya Karnataka Web DJ Halli


ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಹಾಗೂ ಸಾರ್ವಜನಿಕ ಆಸ್ತಿ ನಷ್ಟ ಅಂದಾಜು ಮಾಡಲು ಕ್ಲೇಮ್‌ ಕಮಿಷನರ್‌ ನೇಮಕ ಮಾಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಅರ್ಜಿಗಳ ಕುರಿತು ಸಿಜೆ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ಆಲಿಸಿದ ನ್ಯಾಯಪೀಠ, ತನಿಖಾ ಆಯೋಗ ಕಾಯಿದೆ ಅಡಿ ಕ್ಲೇಮ್‌ ಕಮಿಷನರ್‌ಗೆ ಅಧಿಕಾರ ನೀಡಿ ಶೀಘ್ರ ಅಧಿಸೂಚನೆ ಹೊರಡಿಸಲು ಸರಕಾರಕ್ಕೆ ಸೂಚಿಸಿತು.

ಅಲ್ಲದೆ, ಕ್ಲೇಮ್‌ ಕಮಿಷನರ್‌ ಆಗಿ ನೇಮಕಗೊಂಡಿರುವ ನ್ಯಾ.ಎಚ್‌.ಎಸ್‌. ಕೆಂಪಣ್ಣ ಅವರಿಗೆ ಸಾಕ್ಷಿಗಳಿಗೆ ಸಮನ್ಸ್‌ ನೀಡುವ ವಿಚಾರಣೆ ನಡೆಸುವ ಅಧಿಕಾರವಿದೆ. ಅವರು ನಷ್ಟ ಅಂದಾಜಿಸಿ ಹೊಣೆಗಾರಿಕೆ ನಿಗದಿಪಡಿಸಲಿದ್ದಾರೆ ಎಂದು ನ್ಯಾಯಾಲಯ ಹೇಳಿತು.

ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳಿಗೆ ಅಗತ್ಯವಿರುವ ದಾಖಲೆಗಳು, ಮಾಹಿತಿ ಹಾಗೂ ಅಗತ್ಯ ಸಹಕಾರವನ್ನು ರಾಜ್ಯ ಸರಕಾರ ನೀಡಬೇಕು ಎಂದು ಸೂಚಿಸಿತು. ಮುಂದಿನ ವಿಚಾರಣೆ ವೇಳೆ ಗಲಭೆ ಪ್ರಕರಣ ಹಾಗೂ ಪೊಲೀಸ್‌ ಠಾಣೆಗಳ ಮೇಲಿನ ದಾಳಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪೊಲೀಸರು ಹಾಗೂ ಎನ್‌ಐಎಗೆ ಸೂಚಿಸಿ ಅ.20ಕ್ಕೆ ವಿಚಾರಣೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ