ಆ್ಯಪ್ನಗರ

ಸಿಎಂ ಮೇಲೆ ಆರೋಪ: ತಾಯಿ ಹೇಳಿಕೆಗೆ ಜನರ ಕ್ಷಮೆ ಕೇಳಿದ ಡಿಕೆಶಿ

ತಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ನಡೆಸಿದ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಬಹಿರಂಗ ಕ್ಷಮೆಯಾಚಿಸಿದ್ದಾರೆ.

ವಿಕ ಸುದ್ದಿಲೋಕ 5 Aug 2017, 5:43 pm
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ತಮ್ಮ ತಾಯಿ ನಡೆಸಿದ ಆರೋಪಕ್ಕೆ ಇಂಧನ ಸಚಿವ ಡಿ.ಕೆ ಶಿವಕುಮಾರ್‌ ಬಹಿರಂಗ ಕ್ಷಮೆಯಾಚಿಸಿದ್ದಾರೆ.
Vijaya Karnataka Web dk shivakumar apologies on behalf of his mother
ಸಿಎಂ ಮೇಲೆ ಆರೋಪ: ತಾಯಿ ಹೇಳಿಕೆಗೆ ಜನರ ಕ್ಷಮೆ ಕೇಳಿದ ಡಿಕೆಶಿ


'ಆದಾಯ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಸಂದರ್ಭದಲ್ಲಿ ನನ್ನ ತಾಯಿಯವರು ಮಾಧ್ಯಮದೊಂದಿಗೆ ಪುತ್ರಸಹಜ ವಾತ್ಸಲ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಆಡಿದ ಮಾತುಗಳಿಗೆ ನಾನು ಬಹಿರಂಗ ಕ್ಷಮೆಯಾಚಿಸುತ್ತೇನೆ' ಎಂದಿರುವ ಡಿಕೆಶಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ತನ್ನ ತಾಯಿ ಅವಿದ್ಯಾವಂತೆಯಾಗಿದ್ದು ದಾಳಿ ನಡೆಸಿದ ಇಲಾಖೆ ಯಾರ ಅಧೀನದಲ್ಲಿ ಬರುತ್ತದೆ ಎಂಬುದು ಅವರಿಗೆ ತಿಳಿದಿಲ್ಲ. ಅಲ್ಲದೇ ದಾಳಿಯ ವಿಷಯದಿಂದ ಒತ್ತಡಕ್ಕೊಳಗಾಗಿದ್ದ ತಾಯಿ ಹೇಳಿಕೆಯನ್ನು ಮಾಧ್ಯಮಗಳು ದುರುಪಯೋಗಪಡಿಸಿಕೊಂಡು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವಂತೆ ಪ್ರಚೋದಿಸಿದೆ ಎಂದು ಕ್ಷಮಾಪಣಾ ಪತ್ರದಲ್ಲಿ ಡಿಕೆಶಿ ಉಲ್ಲೇಖಿಸಿದ್ದಾರೆ.

'ಮುಖ್ಯಮಂತ್ರಿಗಳು ಎಂದಿಗೂ ನನಗೆ ಬೆಂಬಲವಾಗಿ ನಿಂತು ಪ್ರೋತ್ಸಾಹಿಸಿದ್ದಾರೆ, ಕಷ್ಟಕಾಲದಲ್ಲಿ ನನ್ನ ಹಾಗೂ ಕುಟುಂಬದ ಬೆನ್ನ ಹಿಂದೆ ನಿಂತು ಪಕ್ಷದ ನಾಯಕರು, ಕಾರ್ಯಕರ್ತರು ರಕ್ಷಣೆ ನೀಡಿದ್ದಾರೆ. ಹೀಗಾಗಿ ನನ್ನ ತಾಯಿಯ ಪರವಾಗಿ ಸಿಎಂ ಹಾಗೂ ರಾಜ್ಯದ ಜನತೆ ಬಳಿ ಕ್ಷಮೆ ಕೋರುತ್ತೇನೆ' ಎಂದು ಪತ್ರ ಬರೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ