ಆ್ಯಪ್ನಗರ

ಡಿಕೆಶಿ ಪುತ್ರಿ ಐಶ್ವರ್ಯ, ಎಸ್‌ಎಂಕೆ ಮೊಮ್ಮಗ ಅಮರ್ಥ್ಯ ವಿವಾಹ ನಿಶ್ಚಯ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರು, ಎಸ್.‌ ಎಂ. ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ಮಂತ್ರಿಯಾಗಿದ್ದರು. ಕೃಷ್ಣ ಅವರ ಜೊತೆಗೆ ಮಾತ್ರವಲ್ಲದೆ, ಅವರ ಅಳಿಯ ಸಿದ್ದಾರ್ಥ ಜೊತೆಗೂ ಡಿಕೆಶಿ ಗೆಳೆತನವಿತ್ತು. ಇದೀಗ ಈ ಗೆಳೆತನ ನೆಂಟಸ್ತಿಕೆಯಲ್ಲಿ ಬದಲಾಗಿದೆ.

Vijaya Karnataka Web 15 Jun 2020, 7:46 pm

ಹೈಲೈಟ್ಸ್‌:

  • ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪುತ್ರಿಯ ವಿವಾಹ ನಿಶ್ಚಯ
  • ಎಸ್‌ಎಂ ಕೃಷ್ಣ ಮೊಮ್ಮಗನ ಜೊತೆ ವಿವಾಹ ನಿಶ್ಚಯ
  • ಆಗಸ್ಟ್‌ನಲ್ಲಿ ನಿಶ್ಚಿತಾರ್ಥ, ಡಿಸೆಂಬರ್‌ನಲ್ಲಿ ಮದುವೆ ಸಾಧ್ಯತೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಸೋಮವಾರ ಡಿಕೆಶಿ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಾರ ಬದಲಿಸಿಕೊಳ್ಳುವ ಮೂಲಕ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ತೆರಳಿತ್ತು. ಇದೀಗ ಗುರು-ಹಿರಿಯರ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯ ಹಾಗೂ ಡಿಕೆಶಿ ಪುತ್ರಿ ಐಶ್ವರ್ಯ ವಿವಾಹ ನಿಶ್ಚಯಿಸಿಕೊಳ್ಳಲಾಗಿದೆ.

ಎಸ್‌ಎಂ ಕೃಷ್ಣ ಮೊಮ್ಮಗ ಹಾಗೂ ಡಿಕೆಶಿ ಪುತ್ರಿ ವಿವಾಹಕ್ಕೆ ತಾಂಬೂಲ ಶಾಸ್ತ್ರ

ಇದೇ ತಿಂಗಳ 12ರಂದು ಡಿ.ಕೆ.ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ಕಳೆದ ಒಂದು ತಿಂಗಳಿಂದಲೂ ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಉದ್ಯಮಿ ಸಿದ್ದಾರ್ಥ್ ಪುತ್ರ ಅಮರ್ಥ್ಯ ಸುಬ್ರಮಣ್ಯ ವಿವಾಹ ಸಂಬಂಧ ಎರಡು ಕುಟುಂಬಗಳು ಮಾತುಕತೆ ನಡೆಸುತ್ತಲೇ ಇದ್ದವು. ಆದರೆ ಸೋಮವಾರ ಡಿಕೆಶಿ ನಿವಾಸದಲ್ಲೇ ನಡೆದ ಸರಳ ಕಾರ್ಯಕ್ರಮದಲ್ಲಿ ಹಾರವನ್ನು ಬದಲಿಸುವ ಮೂಲಕ ಮದುವೆ ನಿಶ್ಚಯ ಮಾಡಿಕೊಂಡಿದ್ದಾರೆ.

ಡಿಕೆಶಿ ಪುತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ, ವರ ಎಸ್ಎಂ ಕೃಷ್ಣ ಮೊಮ್ಮಗ!

ಈಗ ಕೇವಲ ಮದುವೆ ನಿಶ್ಚಯವಾಗಿದ್ದು, ಎರಡು ಕುಟುಂಬಗಳು ತಾಂಬೂಲ ಬದಲಿಸಿಕೊಂಡಿವೆ. ಆಷಾಢ ಕಳೆದ ನಂತರ ಆಗಸ್ಟ್ ತಿಂಗಳಲ್ಲಿ ನಿಶ್ಚಿತಾರ್ಥ ನಡೆಸುವ ಸಂಬಂಧ ಮಾತುಕತೆ ನಡೆದಿದೆ. ಆಗಸ್ಟ್ ತಿಂಗಳಿನಲ್ಲಿ ಒಳ್ಳೆಯ ದಿನ ನೋಡಿ ನಿಶ್ಚಿತಾರ್ಥದ ದಿನಾಂಕ ನಿಗದಿ ಆಗಲಿದೆ. ಬಹುತೇಕ ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಎಸ್‌ಎಂ ಕೃಷ್ಣ ಮೊಮ್ಮಗನ ಜೊತೆ ಡಿಕೆ ಶಿವಕುಮಾರ್‌ ಪುತ್ರಿ ವಿವಾಹ ಮಾತುಕತೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ