ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರದಿಂದ (ಏಪ್ರಿಲ್ 7) ಆರಂಭವಾಗಿದೆ.
ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಸಚಿವ ಶ್ರೀರಾಮುಲು ಮೆಟ್ರೋ ರೈಲಿನಲ್ಲಿ ಸಂಚರಿಸಿದರು.
ಸುಮಾರು 5 ತಿಂಗಳ ಬಳಿಕ ಮೆಟ್ರೋ ಸಂಚಾರ ಮತ್ತೆ ಅರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಅವರು ಖುದ್ದು ಮೆಟ್ರೋ ರೈಲಿನಲ್ಲಿ ವಿಧಾನಸೌಧ ಸ್ಟೇಷನ್ನಿಂದ ಮೆಜೆಸ್ಟಿಕ್ ಸ್ಟೇಷನ್ವರೆಗೆ ಸಂಚರಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಭಯ ಬೇಡ ಆದ್ರೆ ಎಚ್ಚರಿಕೆ ಅಗತ್ಯ. ಎಲ್ಲ ಪ್ರಯಾಣಿಕರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದರು.
ಕೊರೊನಾದಿಂದಾಗಿ ಸ್ಥಗತಿಗೊಂಡಿದ್ದ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಜನರು ಹೆಚ್ಚು ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಯಾವುದೇ ಭಯ ಇಲ್ಲ. ಜನರು ಜೀವದ ಜತೆ ಜೀವನ ಕೂಡ ಸಾಗಿಸಬೇಕಾಗಿದೆ. ಮುನ್ನೆಚ್ಚರಿಕೆ ವಹಿಸಿ ಮುಂದುವರಿಯೋಣ ಎಂದು ಸಚಿವ ಶ್ರೀರಾಮುಲು ತಿಳಿಸಿದರು.
ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಸಚಿವ ಶ್ರೀರಾಮುಲು ಮೆಟ್ರೋ ರೈಲಿನಲ್ಲಿ ಸಂಚರಿಸಿದರು.
ಸುಮಾರು 5 ತಿಂಗಳ ಬಳಿಕ ಮೆಟ್ರೋ ಸಂಚಾರ ಮತ್ತೆ ಅರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಅವರು ಖುದ್ದು ಮೆಟ್ರೋ ರೈಲಿನಲ್ಲಿ ವಿಧಾನಸೌಧ ಸ್ಟೇಷನ್ನಿಂದ ಮೆಜೆಸ್ಟಿಕ್ ಸ್ಟೇಷನ್ವರೆಗೆ ಸಂಚರಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಭಯ ಬೇಡ ಆದ್ರೆ ಎಚ್ಚರಿಕೆ ಅಗತ್ಯ. ಎಲ್ಲ ಪ್ರಯಾಣಿಕರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದರು.
ಕೊರೊನಾದಿಂದಾಗಿ ಸ್ಥಗತಿಗೊಂಡಿದ್ದ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಜನರು ಹೆಚ್ಚು ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಯಾವುದೇ ಭಯ ಇಲ್ಲ. ಜನರು ಜೀವದ ಜತೆ ಜೀವನ ಕೂಡ ಸಾಗಿಸಬೇಕಾಗಿದೆ. ಮುನ್ನೆಚ್ಚರಿಕೆ ವಹಿಸಿ ಮುಂದುವರಿಯೋಣ ಎಂದು ಸಚಿವ ಶ್ರೀರಾಮುಲು ತಿಳಿಸಿದರು.