ಕೆ.ಎಂ.ಪಂಕಜ ಬೆಂಗಳೂರು
ಲೋಕಸಭಾ ಚುನಾವಣೆ ಕಾರ್ಯಕ್ಕೆ ಸರಕಾರಿ ಆಸ್ಪತ್ರೆಗಳ ನರ್ಸ್ ಸಹಿತ ಸಿಬ್ಬಂದಿ ವರ್ಗದವರನ್ನು ನಿಯೋಜನೆ ಮಾಡಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.
ರಾಜ್ಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ನಿತ್ಯ ಪರದಾಡುತ್ತಿದ್ದಾರೆ. ಹೀಗಿರುವಾಗ ಚುನಾವಣಾ ಕಾರ್ಯಕ್ಕೆ ಶುಶ್ರೂಷಕರು, ಪ್ರಯೋಗಾಲಯದ ತಂತ್ರಜ್ಞರನ್ನು ಬಳಸಿಕೊಂಡಲ್ಲಿ ತುರ್ತು ಚಿಕಿತ್ಸೆಗೆ ಸಿಬ್ಬಂದಿ ಇಲ್ಲದಂತಾಗುತ್ತದೆ. ಇದು ತಿಳಿದಿದ್ದರೂ, ಚುನಾವಣಾ ಆಯೋಗವು ಇವರನ್ನು ಬಳಸಿಕೊಳುತ್ತಿರುವುದಕ್ಕೆ ಆಸ್ಪತ್ರೆಗಳ ಮುಖ್ಯಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಮುನ್ನವೇ ನಾನಾ ಆಸ್ಪತ್ರೆಗಳ ಮುಖ್ಯಸ್ಥರು ಆಯೋಗಕ್ಕೆ ಮನವಿ ಮಾಡಿ ಪತ್ರ ಬರೆದಿದ್ದರು. ಇದಲ್ಲದೆ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಮುಖೇನ ಚುನಾವಣೆಯಲ್ಲಿ ಸರಕಾರಿ ವೈದ್ಯಾಧಿಕಾರಿಗಳು ಹಾಗೂ ಪಶುವೈದ್ಯರನ್ನು ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸದಂತೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ವಿನಾಯಿತಿ ನೀಡುವಂತೆ ಆಯೋಗವನ್ನು ಕೋರಲಾಗಿತ್ತು. ಆದರೆ ಇದನ್ನು ಪರಿಗಣಿಸದ ಆಯೋಗ ಆಸ್ಪತ್ರೆಗಳ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ತಾಕೀತು ಮಾಡಿದೆ.
ಸೇವೆಗೆ ಸಮಸ್ಯೆ: ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 110 ಮಂದಿ ಶುಶ್ರೂಷಕರಿದ್ದು, ಅವರಲ್ಲಿ 95 ಮಂದಿ, ನಾಲ್ವರು ಪ್ರಯೋಗಾಲಯದ ತಂತ್ರಜ್ಞರು ಸೇರಿದಂತೆ 143 ಮಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಆಸ್ಪತ್ರೆಗೆ ನಿತ್ಯ 800-1000 ಮಂದಿ ಹೊರ ರೋಗಿಗಳು ಆಗಮಿಸುತ್ತಾರೆ. ನೂರಾರು ಒಳ ರೋಗಿಗಳು ಸೇವೆ ಪಡೆಯುತ್ತಿದ್ದಾರೆ. ಹೀಗಿರುವಾಗ ಇಷ್ಟೊಂದು ಪ್ರಮಾಣದಲ್ಲಿ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡರೆ ಸೇವೆ ನೀಡುವುದಾದರೂ, ಹೇಗೆ? ಆದ್ದರಿಂದ ಸಿಬ್ಬಂದಿಯನ್ನು ನಿಯೋಜಿಸದಂತೆ ಕೋರಿ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎನ್ನುತ್ತಾರೆ ಆಸ್ಪತ್ರೆಯ ವೈದ್ಯ ್ಯಅಧೀಕ್ಷಕ ಡಾ. ಬಾನು ಮೂರ್ತಿ.
ಸಿಬ್ಬಂದಿ ಕೊರತೆ: ಮಿಂಟೋ ಕಣ್ಣಿನ ಆಸ್ಪತ್ರೆ ಸೌಲಭ್ಯಗಳನ್ನು ಹೊಂದಿದ್ದರೂ ಸಿಬ್ಬಂದಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಸೇವೆ ನೀಡಲು ಆಗುತ್ತಿಲ್ಲ. ಹೀಗಿರುವಾಗ 12 ಮಂದಿ ಶುಶ್ರೂಷಕರು ಸೇರಿದಂತೆ 28 ಮಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ನಿತ್ಯದ ಸೇವೆಯಲ್ಲಿ ಸಮಸ್ಯೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೇ ಹೆಚ್ಚುವರಿ 53 ಮಂದಿ ಸಿಬ್ಬಂದಿಯ ಅಗತ್ಯವಿದೆ. ಆಸ್ಪತ್ರೆಗೆ ನಿತ್ಯ 600 ರಿಂದ 800 ಹೊರ ರೋಗಿಗಳು ಆಗಮಿಸುತ್ತಾರೆ. ಆದ್ದರಿಂದ ಆಸ್ಪತ್ರೆ ಸಿಬ್ಬಂದಿಗೆ ವಿನಾಯಿತಿ ನೀಡುವಂತೆ ಕೋರಿ ಆಸ್ಪತ್ರೆ ವತಿಯಿಂದ ಆಯೋಗಕ್ಕೆ ಪತ್ರ ಬರೆಯಲಾಗಿದೆ.
ಹೀಗೆ ವಿಕ್ಟೋರಿಯಾ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಪ್ರಮುಖ ಸರಕಾರಿ ಆಸ್ಪತ್ರೆಗಳ ಸಿಬ್ಬಂದಿಯನ್ನು ಆಯೋಗ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದೆ. ಕೆಲ ಆಸ್ಪತ್ರೆಗಳಲ್ಲಿ ವೈದ್ಯ ಅಧೀಕ್ಷಕರ ಹಾಗೂ ನಿರ್ದೇಶಕರ ಗಮನಕ್ಕೆ ತರದೇ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥರು ಆಕ್ಷೇಪಿಸಿದ್ದಾರೆ.
ಚುನಾವಣಾ ಕಾರ್ಯಕ್ಕೆ ತುರ್ತು ಸೇವೆ ನೀಡುವವರನ್ನು ಬಳಸುವುದು ಸೂಕ್ತವಲ್ಲ. ವೈದ್ಯರು, ಶುಶ್ರೂಷಕರು, ತಂತ್ರಜ್ಞರು ಸೇರಿದಂತೆ ಯಾರೊಬ್ಬರನ್ನೂ ಚುನಾವಣಾ ಕಾರ್ಯಕ್ಕೆ ಕಳುಹಿಸಲು ಸಾಧ್ಯವಿಲ್ಲ. ವಿನಾಯಿತಿ ನೀಡುವಂತೆ ಆಯೋಗಕ್ಕೆ ಮನವಿ ಮಾಡಲಾಗುವುದು.
- ಡಾ. ಸಿ. ರಾಮಚಂದ್ರ, ನಿರ್ದೇಶಕರು, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ
ಇಂದು ಚುನಾವಣೆ ಅಧಿಕಾರಿಗೆ ಮನವಿ
ತುರ್ತು ಸೇವೆ ನೀಡುವ ಸರಕಾರಿ ಆಸ್ಪತ್ರೆಗಳ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಬಾರದು ಎಂದು ಕೋರಿ ವೈದ್ಯರ ನಿಯೋಗ ಶುಕ್ರವಾರ ರಾಜ್ಯ ಮುಖ್ಯ ಚುನಾವಣೆ ಅಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ.
ಲೋಕಸಭಾ ಚುನಾವಣೆ ಕಾರ್ಯಕ್ಕೆ ಸರಕಾರಿ ಆಸ್ಪತ್ರೆಗಳ ನರ್ಸ್ ಸಹಿತ ಸಿಬ್ಬಂದಿ ವರ್ಗದವರನ್ನು ನಿಯೋಜನೆ ಮಾಡಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.
ರಾಜ್ಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ನಿತ್ಯ ಪರದಾಡುತ್ತಿದ್ದಾರೆ. ಹೀಗಿರುವಾಗ ಚುನಾವಣಾ ಕಾರ್ಯಕ್ಕೆ ಶುಶ್ರೂಷಕರು, ಪ್ರಯೋಗಾಲಯದ ತಂತ್ರಜ್ಞರನ್ನು ಬಳಸಿಕೊಂಡಲ್ಲಿ ತುರ್ತು ಚಿಕಿತ್ಸೆಗೆ ಸಿಬ್ಬಂದಿ ಇಲ್ಲದಂತಾಗುತ್ತದೆ. ಇದು ತಿಳಿದಿದ್ದರೂ, ಚುನಾವಣಾ ಆಯೋಗವು ಇವರನ್ನು ಬಳಸಿಕೊಳುತ್ತಿರುವುದಕ್ಕೆ ಆಸ್ಪತ್ರೆಗಳ ಮುಖ್ಯಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಮುನ್ನವೇ ನಾನಾ ಆಸ್ಪತ್ರೆಗಳ ಮುಖ್ಯಸ್ಥರು ಆಯೋಗಕ್ಕೆ ಮನವಿ ಮಾಡಿ ಪತ್ರ ಬರೆದಿದ್ದರು. ಇದಲ್ಲದೆ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಮುಖೇನ ಚುನಾವಣೆಯಲ್ಲಿ ಸರಕಾರಿ ವೈದ್ಯಾಧಿಕಾರಿಗಳು ಹಾಗೂ ಪಶುವೈದ್ಯರನ್ನು ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸದಂತೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ವಿನಾಯಿತಿ ನೀಡುವಂತೆ ಆಯೋಗವನ್ನು ಕೋರಲಾಗಿತ್ತು. ಆದರೆ ಇದನ್ನು ಪರಿಗಣಿಸದ ಆಯೋಗ ಆಸ್ಪತ್ರೆಗಳ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ತಾಕೀತು ಮಾಡಿದೆ.
ಸೇವೆಗೆ ಸಮಸ್ಯೆ: ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 110 ಮಂದಿ ಶುಶ್ರೂಷಕರಿದ್ದು, ಅವರಲ್ಲಿ 95 ಮಂದಿ, ನಾಲ್ವರು ಪ್ರಯೋಗಾಲಯದ ತಂತ್ರಜ್ಞರು ಸೇರಿದಂತೆ 143 ಮಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಆಸ್ಪತ್ರೆಗೆ ನಿತ್ಯ 800-1000 ಮಂದಿ ಹೊರ ರೋಗಿಗಳು ಆಗಮಿಸುತ್ತಾರೆ. ನೂರಾರು ಒಳ ರೋಗಿಗಳು ಸೇವೆ ಪಡೆಯುತ್ತಿದ್ದಾರೆ. ಹೀಗಿರುವಾಗ ಇಷ್ಟೊಂದು ಪ್ರಮಾಣದಲ್ಲಿ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡರೆ ಸೇವೆ ನೀಡುವುದಾದರೂ, ಹೇಗೆ? ಆದ್ದರಿಂದ ಸಿಬ್ಬಂದಿಯನ್ನು ನಿಯೋಜಿಸದಂತೆ ಕೋರಿ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎನ್ನುತ್ತಾರೆ ಆಸ್ಪತ್ರೆಯ ವೈದ್ಯ ್ಯಅಧೀಕ್ಷಕ ಡಾ. ಬಾನು ಮೂರ್ತಿ.
ಸಿಬ್ಬಂದಿ ಕೊರತೆ: ಮಿಂಟೋ ಕಣ್ಣಿನ ಆಸ್ಪತ್ರೆ ಸೌಲಭ್ಯಗಳನ್ನು ಹೊಂದಿದ್ದರೂ ಸಿಬ್ಬಂದಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಸೇವೆ ನೀಡಲು ಆಗುತ್ತಿಲ್ಲ. ಹೀಗಿರುವಾಗ 12 ಮಂದಿ ಶುಶ್ರೂಷಕರು ಸೇರಿದಂತೆ 28 ಮಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ನಿತ್ಯದ ಸೇವೆಯಲ್ಲಿ ಸಮಸ್ಯೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೇ ಹೆಚ್ಚುವರಿ 53 ಮಂದಿ ಸಿಬ್ಬಂದಿಯ ಅಗತ್ಯವಿದೆ. ಆಸ್ಪತ್ರೆಗೆ ನಿತ್ಯ 600 ರಿಂದ 800 ಹೊರ ರೋಗಿಗಳು ಆಗಮಿಸುತ್ತಾರೆ. ಆದ್ದರಿಂದ ಆಸ್ಪತ್ರೆ ಸಿಬ್ಬಂದಿಗೆ ವಿನಾಯಿತಿ ನೀಡುವಂತೆ ಕೋರಿ ಆಸ್ಪತ್ರೆ ವತಿಯಿಂದ ಆಯೋಗಕ್ಕೆ ಪತ್ರ ಬರೆಯಲಾಗಿದೆ.
ಹೀಗೆ ವಿಕ್ಟೋರಿಯಾ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಪ್ರಮುಖ ಸರಕಾರಿ ಆಸ್ಪತ್ರೆಗಳ ಸಿಬ್ಬಂದಿಯನ್ನು ಆಯೋಗ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದೆ. ಕೆಲ ಆಸ್ಪತ್ರೆಗಳಲ್ಲಿ ವೈದ್ಯ ಅಧೀಕ್ಷಕರ ಹಾಗೂ ನಿರ್ದೇಶಕರ ಗಮನಕ್ಕೆ ತರದೇ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥರು ಆಕ್ಷೇಪಿಸಿದ್ದಾರೆ.
ಚುನಾವಣಾ ಕಾರ್ಯಕ್ಕೆ ತುರ್ತು ಸೇವೆ ನೀಡುವವರನ್ನು ಬಳಸುವುದು ಸೂಕ್ತವಲ್ಲ. ವೈದ್ಯರು, ಶುಶ್ರೂಷಕರು, ತಂತ್ರಜ್ಞರು ಸೇರಿದಂತೆ ಯಾರೊಬ್ಬರನ್ನೂ ಚುನಾವಣಾ ಕಾರ್ಯಕ್ಕೆ ಕಳುಹಿಸಲು ಸಾಧ್ಯವಿಲ್ಲ. ವಿನಾಯಿತಿ ನೀಡುವಂತೆ ಆಯೋಗಕ್ಕೆ ಮನವಿ ಮಾಡಲಾಗುವುದು.
- ಡಾ. ಸಿ. ರಾಮಚಂದ್ರ, ನಿರ್ದೇಶಕರು, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ
ಇಂದು ಚುನಾವಣೆ ಅಧಿಕಾರಿಗೆ ಮನವಿ
ತುರ್ತು ಸೇವೆ ನೀಡುವ ಸರಕಾರಿ ಆಸ್ಪತ್ರೆಗಳ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಬಾರದು ಎಂದು ಕೋರಿ ವೈದ್ಯರ ನಿಯೋಗ ಶುಕ್ರವಾರ ರಾಜ್ಯ ಮುಖ್ಯ ಚುನಾವಣೆ ಅಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ.