ಆ್ಯಪ್ನಗರ

ಲಸಿಕೆಯಿಂದ ಮಾತ್ರ ಕೊರೊನಾಗೆ ಅಂತ್ಯ..! ಹೃದಯ ತಜ್ಞ ಡಾ.ಮಂಜುನಾಥ್‌ ಅಭಿಮತ

ಕೊರೊನಾ ವೈರಸ್‌ಗೆ ಲಸಿಕೆ ತೆಗೆದುಕೊಳ್ಳುವುದಕ್ಕೆ ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್‌ ಲಸಿಕೆ ತೆಗೆದುಕೊಂಡು ಇತರ ಆರೋಗ್ಯ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

Vijaya Karnataka Web 21 Jan 2021, 7:29 pm
ಬೆಂಗಳೂರು: ಲಸಿಕೆ ತೆಗೆದುಕೊಳ್ಳುವುದರಿಂದ ಮಾತ್ರ ಈ ಕೊರೊನಾ ವೈರಸ್‌ ಅನ್ನು ಅಂತ್ಯಗೊಳಿಸಬಹುದು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
Vijaya Karnataka Web Dr CN Manjunath
ಕೊರೊನಾ ವೈರಸ್‌ ಲಸಿಕೆ ಪಡೆದ ಡಾ.ಸಿ.ಎನ್‌.ಮಂಜುನಾಥ್‌


ಗುರುವಾರ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್‌ಗೆ ಲಸಿಕೆ ಮಾತ್ರ ಮದ್ದು. ನಾನು ಅದನ್ನು ತೆಗೆದುಕೊಂಡಿದ್ದೇನೆ, ಚೆನ್ನಾಗಿದ್ದೇನೆ. ಆರೋಗ್ಯ ಕಾರ್ಯಕರ್ತರು ಭಯ ಮತ್ತು ಆತಂಕವಿಲ್ಲದೆ ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಲಸಿಕೆ ಸುರಕ್ಷಿತವಾಗಿದೆ ಮತ್ತು ಯಾವುದೇ ಅಡ್ಡ ಪರಿಣಾಮ ಇಲ್ಲ. ಸ್ವಲ್ಪ ಜ್ವರ, ಇಂಜೆಕ್ಷನ್ ಹಾಕಿದ ಸ್ಥಳದಲ್ಲಿ ನೋವು ಮತ್ತು ಅಲರ್ಜಿ ಅಡ್ಡಪರಿಣಾಮಗಳಲ್ಲ. ಅವು ಲಸಿಕೆಯ ಪರಿಣಾಮಗಳು ಮಾತ್ರ. ಅದರಿಂದ ಏನು ಆಗುವುದಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆ ತೆಗೆದುಕೊಂಡು ಸುರಕ್ಷತೆಯ ಅಭಯ ನೀಡಲಿದ್ದಾರೆ ಪ್ರಧಾನಿ ಮೋದಿಹೆಚ್ಚಿನ ಜನರು ಲಸಿಕೆಯನ್ನು ತೆಗೆದುಕೊಳ್ಳಬೇಕು. ಇದರಿಂದ ಇನ್ನೂ ಕೆಲವರು ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಾರೆ. ಅದು ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸುತ್ತದೆ. ಇದರಿಂದ ನಾವು ನಿರೀಕ್ಷಿತ ಪ್ರಮಾಣದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು ಎಂದು ಹೇಳಿದ ಅವರು, ಲಸಿಕೆ ತೆಗೆದುಕೊಳ್ಳುವುದು ನಾಗರಿಕ ಜವಾಬ್ದಾರಿ ಎಂದು ತಿಳಿಸಿದ್ದಾರೆ.
ಕೊರೊನಾ ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮುಂಚೂಣಿ: ನಾಲ್ಕು ದಿನಗಳಲ್ಲಿ 80,696 ಜನರಿಗೆ ವ್ಯಾಕ್ಸಿನ್!ಜನವರಿ 16ರಿಂದ ದೇಶಾದ್ಯಂತ ಕೊರೊನಾ ವೈರಸ್‌ ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಆದರೆ, ಆರೋಗ್ಯ ಕಾರ್ಯಕರ್ತರು ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಲಸಿಕೆಯ ಅಡ್ಡಪರಿಣಾಮಗಳಿಗೆ ಹೆದರಿ ಆರೋಗ್ಯ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ