ಆ್ಯಪ್ನಗರ

ಭಾವುಕಳಾದ ವಿದ್ಯಾರ್ಥಿನಿಯನ್ನು ಸಂತೈಸಿದ ಸಿದ್ದರಾಮಯ್ಯ

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಸಿದ್ದರಾಮಯ್ಯ ಅವರು ಕೊಠಡಿ ಪ್ರವೇಶ ಮಾಡುತ್ತಿದ್ದಂತೆ ವಿದ್ಯಾರ್ಥಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇದೇ ವೇಳೆ ಬರವಣಿಗೆ ತರಬೇತಿ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ ಅವರು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Vijaya Karnataka Web 7 Jul 2019, 2:52 pm
ಬೆಂಗಳೂರು: ಹಿರಿಯ ಪತ್ರಕರ್ತರಾದ ರಾಜಾ ಶೈಲೇಶ ಚಂದ್ರಗುಪ್ತ ಅವರು ಪತ್ರಿಕೋದ್ಯಮದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಾಗೂ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಇಂದು ಸಿದ್ದರಾಮಯ್ಯ ಅವರು ಸಜ್ಜನ್ ರಾವ್ ವೃತ್ತದಲ್ಲಿರುವ ವಾಸವಿ ವಿದ್ಯಾನಿಕೇತನ ಶಾಲೆಗೆ ಭೇಟಿ ನೀಡಿದ್ದರು.
Vijaya Karnataka Web siddaramaiah student


ಕಾರ್ಯಕ್ರಮ ಮುಗಿಸಿ ಬರುವಾಗ ಸಭಾಂಗಣದ ಪಕ್ಕದಲ್ಲೇ ಇದ್ದ ಕೊಠಡಿಯಲ್ಲಿ ಬರವಣಿಗೆ ತರಬೇತಿ ತರಗತಿ ನಡೆಯುತ್ತಿತ್ತು. ಆ ಕೊಠಡಿಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿಗಳು ಒಕ್ಕೊರಲ ಮನವಿ ಮಾಡಿದರು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಸಿದ್ದರಾಮಯ್ಯ ಅವರು ಕೊಠಡಿ ಪ್ರವೇಶ ಮಾಡುತ್ತಿದ್ದಂತೆ ವಿದ್ಯಾರ್ಥಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇದೇ ವೇಳೆ ಬರವಣಿಗೆ ತರಬೇತಿ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ ಅವರು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು. ಸಿದ್ದರಾಮಯ್ಯ ಅವರಿಂದ ಅನಿರೀಕ್ಷಿತವಾಗಿ ಪ್ರಶಸ್ತಿ ಸ್ವೀಕಾರ ಮಾಡಿದ ವಿದ್ಯಾರ್ಥಿನಿಯೊಬ್ಬರು ಭಾವುಕರಾದರು. ಆ ವಿದ್ಯಾರ್ಥಿನಿಯನ್ನು ಸಂತೈಸಿ ಸಿದ್ದರಾಮಯ್ಯ ಅವರು ಶುಭ ಕೋರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ