ಆ್ಯಪ್ನಗರ

ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಮಾಜಿ ಸಚಿವ ಬಂಡಾಯ, ಎಂಆರ್‌ ಸೀತಾರಾಂ ಮುಂದಿನ ನಡೆ ಏನು?

ಒಂದು ವೇಳೆ ಎಂಆರ್‌ ಸೀತಾರಾಂ ಪಕ್ಷ ತೊರೆಯುವ ನಿರ್ಧಾರ ಕೈಗೊಂಡರೆ ಅವರ ಪುತ್ರ ರಕ್ಷಾ ರಾಮಯ್ಯ ಅವರು ಯಾವ ನಿಲುವು ತಾಳುತ್ತಾರೆ ಎಂಬ ಕುತೂಹಲವೂ ಕೆರಳಿದೆ. ರಕ್ಷಾ ರಾಮಯ್ಯ ಅವರಿಗೆ ಈಗಾಗಲೇ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

Vijaya Karnataka Web 24 Jun 2022, 6:52 pm
ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಸಚಿವ ಎಂ.ಆರ್ ಸೀತಾರಾಂ ಅವರ ಮುಂದಿನ ನಡೆ ಏನು ಎಂಬುವುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ.
Vijaya Karnataka Web ಎಂಆರ್‌ ಸೀತಾರಾಂ
ಎಂಆರ್‌ ಸೀತಾರಾಂ


ಕೈತಪ್ಪಿದ ಎಂಎಲ್‌ಸಿ ಸ್ಥಾನ, ಪುತ್ರ ರಕ್ಷಾ ರಾಮಯ್ಯಗೆ ಸಿಗದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಪಟ್ಟದ ಪರಿಣಾಮ ಪಕ್ಷದ ನಾಯಕತ್ವದ ಬಗ್ಗೆ ಎಂಆರ್‌ ಸೀತಾರಾಂ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸಹಜವಾಗಿ ಎಂಆರ್‌ ಸೀತಾರಾಂ ಅವರ ಮುಂದಿನ ನಡೆ ಏನು ಎಂಬುವುದು ಕುತೂಹಲ ಕೆರಳಿಸಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ ಮಾಜಿ ಸಚಿವ ಎಂ.ಆರ್. ಸೀತಾರಾಂ

ಕಾಂಗ್ರೆಸ್ ತೊರೆಯುತ್ತಾರಾ ಸೀತಾರಾಂ?

ಕಾಂಗ್ರೆಸ್‌ನಲ್ಲಿ ಎಂಎಲ್‌ಸಿ ಸ್ಥಾನ ಕೈತಪ್ಪಿದ ಕಾರಣದಿಂದಾಗಿ ಸೀತಾರಾಂ ಅಸಮಾಧಾನಗೊಂಡಿದ್ದಾರೆ. ಈ ನಡುವೆ ಪಕ್ಷ ತೊರೆಯುವ ಮುನ್ಸೂಚನೆಯನ್ನು ನೀಡಿದ್ದಾರೆ. ಈ ಬೆಳವಣಿಗೆಗಳ ನಡುವೆ ಮುಂದಿನ ಅಂದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವ ಕುರಿತು ಎಂಆರ್ ಸೀತಾರಾಂ ಅವರಿಗೆ ಬಿಜೆಪಿ ಭರವಸೆ ನೀಡಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಸೀತಾರಾಂ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.

ರಕ್ಷಾ ರಾಮಯ್ಯ ನಡೆಯೂ ಕುತೂಹಲ!

ಒಂದು ವೇಳೆ ಎಂಆರ್‌ ಸೀತಾರಾಂ ಪಕ್ಷ ತೊರೆಯುವ ನಿರ್ಧಾರ ಕೈಗೊಂಡರೆ ಅವರ ಪುತ್ರ ರಕ್ಷಾ ರಾಮಯ್ಯ ಅವರು ಯಾವ ನಿಲುವು ತಾಳುತ್ತಾರೆ ಎಂಬ ಕುತೂಹಲವೂ ಕೆರಳಿದೆ. ರಕ್ಷಾ ರಾಮಯ್ಯ ಅವರಿಗೆ ಈಗಾಗಲೇ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಪಕ್ಷದಿಂದ ನೇಮಕ ಮಾಡಲಾಗಿದೆ. ಸೀತಾರಾಂ ಬಂಡಾಯ ಶಮನ ಮಾಡುವ ನಿಟ್ಟಿನಲ್ಲೇ ಈ ನಿರ್ಧಾರ ಮಾಡಲಾಗಿದೆ ಎಂಬುವುದು ಸ್ಪಷ್ಟ. ಆದರೆ ಇದೀಗ ಬೆಂಬಲಿಗರ ಸಭೆ ನಡೆಸಿರುವ ಸೀತಾರಾಂ ಪಕ್ಷದ ನಾಯಕತ್ವದ ಬಗ್ಗೆಯೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ತಂದೆ ಹಾಗೂ ಮಗನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ವಿರುದ್ಧ ಹರಿಹಾಯ್ದ ಬಿ.ಕೆ. ಹರಿಪ್ರಸಾದ್: ಟಿಪ್ಪುಸುಲ್ತಾನ್ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಎಂದು ವಾಗ್ದಾಳಿ
ಆಷಾಢದ ಬಳಿಕ ಮುಂದಿನ ನಿರ್ಧಾರ!

ಶುಕ್ರವಾರ ನಡೆದ ಸಭೆಯಲ್ಲಿ ಸೀತಾರಾಂ ಅವರು ಪಕ್ಷ ತೊರೆಯುವ ಬಗ್ಗೆ ಭಿನ್ನವಾದ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವು ಬೆಂಬಲಿಗರು ಪಕ್ಷ ತೊರೆಯುವುದು ಬೇಡ ಎಂದು ಹೇಳಿದರೆ ಮತ್ತೆ ಕೆಲವರು ಯಾವುದೇ ನಿರ್ಧಾರಕ್ಕೂ ಬೆಂಬಲಿಸುತ್ತೇವೆ ಎಂದಿದ್ದಾರಂತೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳು ಮತ್ತೊಂದು ಸುತ್ತಿನ ಸಭೆ ನಡೆಸಲು ಸೀತಾರಾಂ ತೀರ್ಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ಈಗಾಗಲೇ ಎಂಆರ್‌ ಸೀತಾರಾಂ ಜೊತೆ ಮಾತುಕತೆ ನಡೆಸಿದ್ದ ಪಕ್ಷ ತೊರೆಯದಂತೆ ಮನವೋಲಿಕೆ ಮಾಡಿದ್ದಾರೆ ಎನ್ನುತ್ತಿವೆ ಸೀತಾರಾಂ ಅವರ ಆಪ್ತ ವಲಯಗಳು. ಈ ನಿಟ್ಟಿನಲ್ಲಿ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳದೆ ಆಷಾಢದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲು ಸೀತಾರಾಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ