ಆ್ಯಪ್ನಗರ

ವೈಟ್‌ಟಾಪಿಂಗ್‌, ಟೆಂಡರ್‌ಶ್ಯೂರ್‌ ಅಕ್ರಮ : ತನಿಖೆಗೆ ತಜ್ಞರ ಸಮಿತಿ ರಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಒಂದು ಮತ್ತು ಎರಡನೇ ಹಂತದ ವೈಟ್‌ಟಾಪಿಂಗ್‌ ಹಾಗೂ ಟೆಂಡರ್‌ಶ್ಯೂರ್‌ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿ ಗುರುವಾರ ಆದೇಶ ಹೊರಡಿಸಿದೆ.

Vijaya Karnataka 23 Aug 2019, 5:00 am
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಒಂದು ಮತ್ತು ಎರಡನೇ ಹಂತದ ವೈಟ್‌ಟಾಪಿಂಗ್‌ ಹಾಗೂ ಟೆಂಡರ್‌ಶ್ಯೂರ್‌ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿ ಗುರುವಾರ ಆದೇಶ ಹೊರಡಿಸಿದೆ.
Vijaya Karnataka Web expert committee formed
ವೈಟ್‌ಟಾಪಿಂಗ್‌, ಟೆಂಡರ್‌ಶ್ಯೂರ್‌ ಅಕ್ರಮ : ತನಿಖೆಗೆ ತಜ್ಞರ ಸಮಿತಿ ರಚನೆ


ಅಕ್ರಮದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಆ. 14ರಂದು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಯುಐಡಿಎಫ್‌ಸಿ ಮುಖ್ಯ ಎಂಜಿನಿಯರ್‌ ಕ್ಯಾಪ್ಟನ್‌ ಆರ್‌.ಆರ್‌.ದೊಡ್ಡಿಹಾಳ್‌ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ.

ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್‌, ಕೆಯುಐಡಿಎಫ್‌ಸಿಯ ಹಾಲಿ ಮುಖ್ಯ ಎಂಜಿನಿಯರ್‌ ಕ್ಯಾಪ್ಟನ್‌ ಆರ್‌.ಆರ್‌.ದೊಡ್ಡಿಹಾಳ್‌ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಅಸೋಸಿಯೇಷನ್‌ ಆಫ್‌ ಕನ್ಸಲ್ಟಿಂಗ್‌ ಎಂಜಿನಿಯರ್ಸ್‌ನ ಅಧ್ಯಕ್ಷ, ಬಿಐಟಿ ಪ್ರಾಂಶುಪಾಲ ಡಾ. ಎಂ.ಯು.ಅಶ್ವತ್ಥ್‌, ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಧ್ಯಾಪಕ ಡಾ. ಎಚ್‌.ಎಸ್‌.ಜಗದೀಶ್‌, ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯ ನಿರ್ವಾಹಕ ಎಂಜಿನಿಯರ್‌ ಬಸವರಾಜ ಎನ್‌.ಸಂಶಿಮಠ, ನಿವೃತ್ತ ಅಧೀಕ್ಷಕ ಎಂಜಿನಿಯರ್‌ ಎ.ನಾಗೇಂದ್ರ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಟೆಂಡರ್‌ಶ್ಯೂರ್‌ ಮತ್ತು ವೈಟ್‌ಟಾಪಿಂಗ್‌ ಯೋಜನೆಗಳ ವಿನ್ಯಾಸ, ಅಂದಾಜು ವೆಚ್ಚಗಳ ಬಗ್ಗೆ ಪರಿಶೀಲಿಸಿ, ಅನುದಾನ ದುರುಪಯೋಗವಾಗಿದೆಯೇ ಎಂಬುದರ ಕುರಿತು ತನಿಖಾ ವರದಿ ಸಲ್ಲಿಸಬೇಕು. ಈ ಎರಡೂ ಯೋಜನೆಗಳನ್ನು ವಿನ್ಯಾಸ, ಅಂದಾಜುಗಳಂತೆ ಅನುಷ್ಠಾನ ಮಾಡಲಾಗಿದೆಯೇ? ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಈ ಎರಡೂ ಕಾಮಗಾರಿಗಳು ನಗರಕ್ಕೆ ಪ್ರಸ್ತುತವೇ? ಇವುಗಳಿಗೆ ಪರ್ಯಾಯ ಮಾರ್ಗಗಳಿದ್ದಲ್ಲಿ ಸಲಹೆ ನೀಡಬೇಕು. ಯೋಜನಾ ವೆಚ್ಚ ತಗ್ಗಿಸಲು ಹಾಗೂ ಕಾಮಗಾರಿಯ ಗುಣನಿಯಂತ್ರಣಕ್ಕೆ ಮಾರ್ಗೋಪಾಯಗಳನ್ನು ಸೂಚಿಸಲು ತಜ್ಞರ ಸಮಿತಿಗೆ ಆದೇಶಿಸಲಾಗಿದೆ.

ಸಮಿತಿ ಅಧ್ಯಕ್ಷರು, ಸದಸ್ಯರಿಗೆ ಕಚೇರಿ, ಪ್ರಯಾಣ ಮತ್ತು ತಂಗಲು ಸೂಕ್ತ ವ್ಯವಸ್ಥೆ ಮಾಡಲು, ಗೌರವಧನ ನಿಗದಿಪಡಿಸಿ ಬಿಡುಗಡೆ ಮಾಡಲು ಪಾಲಿಕೆಗೆ ಸೂಚಿಸಲಾಗಿದೆ. ತನಿಖೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಒದಗಿಸಲು ಯೋಜನೆ ವಿಭಾಗದ ಮುಖ್ಯ ಎಂಜಿನಿಯರ್‌ ಎನ್‌.ರಮೇಶ್‌ ಅವರಿಗೆ ನಿರ್ದೇಶನ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ