ಆ್ಯಪ್ನಗರ

ಸುಳ್ಳು ಆರೋಪದ ಟ್ಟೀಟ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ಸಮನ್ಸ್‌

ಲೋಕಸಭೆ ಚುನಾವಣೆ ಸಂದರ್ಭ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ರಿಜ್ವಾನ್‌ ಅರ್ಷದ್‌ ವಿರುದ್ಧ ಬಿಜೆಪಿ ಟ್ಟೀಟ್‌ ಮಾಡಿತ್ತು. ಈ ಟ್ಟೀಟ್‌ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರ ವಿರುದ್ಧ ರಿಜ್ವಾನ್ ಅರ್ಷದ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Vijaya Karnataka 24 Jan 2020, 7:26 pm
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಟ್ವೀಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಿಗೆ ಸಮನ್ಸ್‌ ಜಾರಿಯಾಗಿದೆ.
Vijaya Karnataka Web Nalin Kumar Kateel


ಲೋಕಸಭೆ ಚುನಾವಣೆ ಸಂದರ್ಭ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ರಿಜ್ವಾನ್‌ ಅರ್ಷದ್‌ ವಿರುದ್ಧ ಬಿಜೆಪಿ ಟ್ಟೀಟ್‌ ಮಾಡಿತ್ತು. ಕರ್ನಾಟಕ ಬಿಜೆಪಿ ಹ್ಯಾಂಡಲ್‌ನಿಂದ ಮಾಡಲಾಗಿದ್ದ ಟ್ಟೀಟ್‌ನಲ್ಲಿ, “ನಕಲಿ ವೋಟರ್‌ ಐಡಿ ಕಾರ್ಡ್‌ಗಳನ್ನು ಮುದ್ರಿಸುವ ವೇಳೆ ಯುವ ಕಾಂಗ್ರೆಸ್‌ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಂ ಕಲೀಲುಲ್ಲಾ ಅವರನ್ನು ಬಂಧಿಸಲಾಗಿದೆ. ನಕಲಿ ಮತದಾರರ ಚೀಟಿ ಮುದ್ರಣದಲ್ಲಿ ಪಾಲ್ಗೊಂಡಿದ್ದ 18 ಜನರನ್ನು ಬಂಧಿಸಲಾಗಿದೆ. ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಈ ದಂಧೆಯ ಹಿಂದಿದ್ದಾರೆ,” ಎಂಬುದಾಗಿ ಹೇಳಲಾಗಿತ್ತು. ಇದನ್ನು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಕೂಡ ರೀ ಟ್ಟೀಟ್‌ ಮಾಡಿದ್ದರು.

ಈ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರ ವಿರುದ್ಧ ರಿಜ್ವಾನ್ ಅರ್ಷದ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.


ಇದರ ವಿಚಾರಣೆಯನ್ನು ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ ಆರೋಪಿಗಳಾದ ನಳಿನ್ ಕುಮಾರ್ ಕಟೀಲ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಿಗೆ ಸಮನ್ಸ್ ಜಾರಿ ಮಾಡಿದೆ. ರಿಜ್ವಾನ್ ಅರ್ಷದ್ ಪರ ವಕೀಲರಾದ ಎಸ್ಎ ಅಹಮದ್, ಸಂಜಯ್ ಯಾದವ್, ಸೂರ್ಯ ಮುಕುಂದರಾಜ್ ವಾದಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ