ಆ್ಯಪ್ನಗರ

ಬೆಂಗಳೂರು: ತಡರಾತ್ರಿ ಬೆಂಕಿ ಅವಘಢ, ಹೊತ್ತಿ ಉರಿದ ಪೀಠೋಪಕರಣ ಗೋದಾಮು

ಪೀಠೋಪಕರಣಗಳನ್ನು ತುಂಬಿಟ್ಟಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮು ಹೊತ್ತಿ​ ಉರಿದಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ.

Vijaya Karnataka Web 14 Feb 2020, 12:35 pm
ಬೆಂಗಳೂರು: ಪೀಠೋಪಕರಣಗಳನ್ನು ತುಂಬಿಟ್ಟಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
Vijaya Karnataka Web fire accident in bengaluru.


ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಘಟನೆಯಲ್ಲಿ ದಾಮೋದರ್ ಎಂಬುವವರಿಗೆ ಸೇರಿದ ಶ್ರೀರಂಗ ಫರ್ನೀಚರ್ಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ 12 ಮಂದಿ ಕೆಲಸಗಾರರು ಗೋದಾಮಿನಲ್ಲಿ ಮಲಗಿದ್ದರು ಹೇಳಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ 2 ಗಂಟೆ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅರಿವಿಗೆ ಬಂದ ಕೂಡಲೇ ಕಾರ್ಮಿಕರು ಗೋದಾಮಿನಿಂದ ಹೊರಬಂದಿದ್ಧಾರೆ ಎನ್ನಲಾಗಿದೆ. ಅಗ್ನಿಶಾಮಕ ವಾಹನಗಳು ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿ ನಂದಿದೆ. ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ