ಆ್ಯಪ್ನಗರ

ಬೆಂಗಳೂರಿನಲ್ಲಿ ಫೈರಿಂಗ್! ಉದ್ಯಮಿ ಮೇಲೆ ಐವರ ತಂಡದಿಂದ ದಾಳಿ

ಬೆಂಗಳೂರಿನ ಕೆ.ಆರ್ ಪುರಂನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಐವರು ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. ಗುಂಡಿನ ದಾಳಿಗೆ ಒಳಗಾದ ಉದ್ಯಮಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Vijaya Karnataka Web 23 Aug 2020, 9:43 am
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ನಗರದ ಕೆ.ಆರ್‌ ಪುರಂ ಪೊಲೀಸ್ ಠಾಣೆಯ ರಸ್ತೆಯ ಬಳಿ ಉದ್ಯಮಿಯೊಬ್ಬರ ಮೇಲೆ ಐವರು ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದೆ.
Vijaya Karnataka Web firing


ರಿಯಲ್ ಎಸ್ಟೇಟ್‌ ಉದ್ಯಮಿ ಆಟೋ ಬಾಬು ಎಂಬುವವರ ಮೇಲೆ ಐವರು ದುಷ್ಕರ್ಮಿಗಳ ತಂಡ ಭಾನುವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದೆ. ದಾಳಿಯಿಂದ ಆಟೋ ಬಾಬು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

'ಪಿಂಚಣಿ ಕೊಡಿಸ್ತೀನಿ': ವೃದ್ಧೆಯರನ್ನು ವಂಚಿಸುತ್ತಿದ್ದ ಖದೀಮ ಅಂದರ್, ವಾಯುವಿಹಾದರವರೇ ಟಾರ್ಗೆಟ್‌!

ಘಟನೆಗೆ ಪ್ರಮುಖ ಕಾರಣ ಏನು ಎಂಬುವುದು ತಿಳಿದುಬಂದಿಲ್ಲ. ರಿಯಲ್ ಎಸ್ಟೇಟ್‌ ಉದ್ಯಮದ ಹಿನ್ನೆಲೆಯಲ್ಲಿ ವೈಯಕ್ತಿಕ ದ್ವೇಷದ ಕಾರಣದಿಂದ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಆಟೋ ಬಾಬು ಕೆ.ಆರ್‌ ಪುರಂ ಪೊಲೀಸ್ ಠಾಣೆಯ ರಸ್ತೆಯಲ್ಲಿ ಕಚೇರಿ ಹೊಂದಿದ್ದಾರೆ. ಕಚೇರಿಯಲ್ಲಿ ಇರುವಾಗಲೇ ಈ ದಾಳಿ ನಡೆದಿದೆ.

ಗುಂಡಿನ ದಾಳಿ ನಡೆಸಿರುವ ಆರೋಪಿಗಳು ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ದಾಳಿಗೆ ನೈಜ ಕಾರಣ ಏನು ಎಂಬುವುದು ತನಿಖೆಯ ಬಳಿಕಷ್ಟೇ ತಿಳಿದುಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ