ಆ್ಯಪ್ನಗರ

'ಬನ್ನೇರುಘಟ್ಟ ಇಎಸ್‌ಝಡ್‌ ರಕ್ಷಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ': ಸಿಎಂಗೆ ಸಿದ್ದರಾಮಯ್ಯ ಪತ್ರ

ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ 268 ಚ.ಕಿ.ಮೀ ವ್ಯಾಪ್ತಿಯ ಪರಿಸರ ಸೂಕ್ಷ್ಮ ವಲಯ(ಇಎಸ್‌ಝಡ್‌)ವನ್ನು ಉಳಿಸಿಕೊಳ್ಳಲು ಕೇಂದ್ರದ ಮೇಲೆ ಒತ್ತಡ ಹಾಕಿ ಎಂದಿದ್ದಾರೆ.

Vijaya Karnataka Web 17 Jun 2020, 12:31 am
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ 268 ಚ.ಕಿ.ಮೀ ವ್ಯಾಪ್ತಿಯ ಪರಿಸರ ಸೂಕ್ಷ್ಮ ವಲಯ(ಇಎಸ್‌ಝಡ್‌)ವನ್ನು ಉಳಿಸಿಕೊಳ್ಳುವ ಹೋರಾಟ ಮತ್ತೆ ಗರಿಗೆದರುತ್ತಿರುವ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಇಎಸ್‌ಝಡ್‌ ಉಳಿಸಿಕೊಳ್ಳುವ ದಿಕ್ಕಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿದ್ದಾರೆ.
Vijaya Karnataka Web siddaramaiah
ಮಾಜಿ ಸಿಎಂ ಸಿದ್ದರಾಮಯ್ಯ


ರಾಜ್ಯ ಸರಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರಕಾರ ಬನ್ನೇರುಘಟ್ಟ ವ್ಯಾಪ್ತಿಯ 268 ಚ.ಕಿ.ಮೀ ಪರಿಸರ ಸೂಕ್ಷ್ಮ ವಲಯವನ್ನು ಕೈ ಬಿಟ್ಟಿತ್ತು. ಇದನ್ನು ವಿರೋಧಿಸಿ ಪರಿಸರ ಸಂಘಟನೆಗಳು ಹೋರಾಟಕ್ಕೆ ಅಣಿಯಾಗುತ್ತಿದ್ದ ವೇಳೆಯಲ್ಲೇ ಕೊರೊನಾ ಕಂಟಕ ಕಾಣಿಸಿಕೊಂಡಿದ್ದರಿಂದ ಸಂಘಟನೆಗಳು ಹಿಂದೆ ಸರಿದಿದ್ದವು.

ಕೊರೊನಾ ರೀತಿಯ ವೈರಸ್‌ಗಳು ದಾಳಿ ಮಾಡುವುದಕ್ಕೂ ಪರಿಸರ ಮತ್ತು ಅರಣ್ಯ ನಾಶಕ್ಕೂ ನೇರಾನೇರ ಸಂಬಂಧವಿದೆ ಎಂದು ಪರಿಸರ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದು, ಲಾಕ್‌ಡೌನ್‌ ಪೂರ್ಣ ತೆರವುಗೊಂಡ ಬಳಿಕ ಹೋರಾಟದ ರೂಪುರೇಷೆ ಸಿದ್ಧಪಡಿಸುವುದಾಗಿ ಹೇಳುತ್ತಿದ್ದಾರೆ. ಇದೇ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂಗೆ ಪತ್ರ ಬರೆದಿದ್ದು, ತಕ್ಷಣ ಈ ಗಂಭೀರವಾದ ವಿಚಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ʼ

ಬನ್ನೇರುಘಟ್ಟ ಇಎಸ್‌ಝಡ್‌ 100 ಚ.ಕಿ.ಮೀ. ಕಡಿತ: ಪರಿಸರವಾದಿಗಳಿಂದ ವ್ಯಾಪಕ ವಿರೋಧ

ಪ್ರಾಜೆಕ್ಟ್ ವೃಕ್ಷಾ ಫೌಂಡೇಷನ್‌ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಇಎಸ್‌ಝಡ್‌ ಉಳಿಸಿಕೊಳ್ಳುವ ಮೂಲಕ ಬೆಂಗಳೂರಿನ ಆಮ್ಲಜನಕ ವಲಯವನ್ನು ಉಳಿಸಿಕೊಳ್ಳಲು ಮುಂದಾಗುವಂತೆ ವಿವರವಾದ ಪತ್ರ ಬರೆದಿದ್ದರು. ಈ ಪತ್ರದ ಆಧಾರದಲ್ಲಿ ಮುಖ್ಯಂತ್ರಿಗಳಿಗೆ ಸಿದ್ದರಾಮಯ್ಯ ಕೂಡ ಪತ್ರ ಬರೆದಿದ್ದು, ಕೇಂದ್ರಕ್ಕೆ ಪತ್ರ ಬರೆದು ಪರಿಸರ ಸೂಕ್ಷ್ಮ ವಲಯವನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನ ಪುನಾರಂಭ: 103 ವೀಕ್ಷಕರ ಭೇಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ