ಆ್ಯಪ್ನಗರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್‌ ಬೇಗ್‌ಗೆ ಹಿನ್ನಡೆ..!

ರೋಷನ್‌ ಬೇಗ್‌ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಗಳಿಸಿದ್ದಾರೆಂದು ಆರೋಪಿಸಿ ಅಬ್ದುಲ್‌ ಹಕ್‌ ಸುರತಿ ಲೋಕಾಯುಕ್ತ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು. ಆಗ 2018ರಲ್ಲಿ ಕೋರ್ಟ್‌ಗೆ 'ಬಿ' ರಿಪೋರ್ಟ್‌ ಸಲ್ಲಿಸಿದ್ದ ತನಿಖಾಧಿಕಾರಿಗಳು ಬೇಗ್‌ ಮತ್ತವರ ಕುಟುಂಬ ಸದಸ್ಯರ ವಿರುದ್ಧದ ಆರೋಪ ಕೈಬಿಟ್ಟಿದ್ದರು. ಇದನ್ನು ದೂರುದಾರರು ಆಕ್ಷೇಪಿಸಿದ್ದರು.

Vijaya Karnataka Web 6 Nov 2020, 7:01 am
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್‌ ಬೇಗ್‌ ಮತ್ತು ಕುಟುಂಬದವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ವಿಚಾರಣೆ ಸಂಬಂಧ ಲೋಕಾಯುಕ್ತ ವಿಶೇಷ ನ್ಯಾಯಾಲಯವು 2018ರಲ್ಲಿ ನೀಡಿದ್ದ ಸಮನ್ಸ್‌ ರದ್ದು ಕೋರಿ ಬೇಗ್‌ ಕುಟುಂಬ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾ.ಜಾನ್‌ ಮೈಕೆಲ್‌ ಡಿ ಕುನ್ಹಾ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.
Vijaya Karnataka Web roshan baig


ಚರಂಡಿಯ ದುರಸ್ತಿ ಕಾಮಗಾರಿಗೆ ವೇಗ ನೀಡಲು ಬಿಬಿಎಂಪಿ ಆಡಳಿತಾಧಿಕಾರಿ ಸೂಚನೆ

ಬೇಗ್‌ ಮಾಜಿ ಶಾಸಕರಾದ್ದರಿಂದ ವಿಚಾರಣೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಅಗತ್ಯವಿಲ್ಲ. ಅರ್ಜಿದಾರರ ಅಕ್ರಮ ಆಸ್ತಿ ಉಲ್ಲೇಖಿಸಲಾಗಿದೆ. ಆಸ್ತಿಯ ಮೊತ್ತವು ಶೇ. 10ರಷ್ಟಿದೆ ಎಂಬ ಅಭಿಪ್ರಾಯದ ಆಧಾರದಲ್ಲಿ 'ಬಿ' ವರದಿ ಸಲ್ಲಿಸಲಾಗಿದೆ. ಆಸ್ತಿಯ ಮೌಲ್ಯ ಮತ್ತು ಸುಪ್ರೀಂ ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡು ತನಿಖಾಧಿಕಾರಿ 'ಬಿ' ವರದಿ ಸಲ್ಲಿಸಿದ್ದಾರೆ. 'ಬಿ' ವರದಿಯನ್ನು ವಿಚಾರಣಾ ನ್ಯಾಯಾಲಯ ಸಕಾರಣ ಇದ್ದರೆ ತಿರಸ್ಕರಿಸಬಹುದು. ಆದ್ದರಿಂದ ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಕೈಗೊಂಡ ಕ್ರಮ ಕಾನೂನಿನ ಪ್ರಕಾರವೇ ಇದೆ'' ಎಂದು ಆದೇಶದಲ್ಲಿ ಹೈಕೋರ್ಟ್‌ ತಿಳಿಸಿದೆ.

ಸಿಲಿಕಾನ್‌ ಸಿಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾಲಿಗೆ ಬಿಸಿತುಪ್ಪವಾದ ವಿದ್ಯುತ್‌ ದರ ಏರಿಕೆ..!

ರೋಷನ್‌ ಬೇಗ್‌ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಗಳಿಸಿದ್ದಾರೆಂದು ಆರೋಪಿಸಿ ಅಬ್ದುಲ್‌ ಹಕ್‌ ಸುರತಿ ಲೋಕಾಯುಕ್ತ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು. ಆಗ 2018ರಲ್ಲಿ ಕೋರ್ಟ್‌ಗೆ 'ಬಿ' ರಿಪೋರ್ಟ್‌ ಸಲ್ಲಿಸಿದ್ದ ತನಿಖಾಧಿಕಾರಿಗಳು ಬೇಗ್‌ ಮತ್ತವರ ಕುಟುಂಬ ಸದಸ್ಯರ ವಿರುದ್ಧದ ಆರೋಪ ಕೈಬಿಟ್ಟಿದ್ದರು. ಇದನ್ನು ದೂರುದಾರರು ಆಕ್ಷೇಪಿಸಿದ್ದರು.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ: ಮತ್ತೆ ಶುರುವಾಯ್ತು ವರುಣನ ಆರ್ಭಟ!

ನಾಲ್ಕು ವರ್ಷಗಳ ಬಳಿಕ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ್ದ ಲೋಕಾಯುಕ್ತ ನ್ಯಾಯಾಲಯ, ಬೇಗ್‌ ಮತ್ತವರ ಕುಟುಂಬ ಸದಸ್ಯರಿಗೆ ವಿಚಾರಣೆಗೆ ಹಾಜರಾಗುವಂತೆ 2019ರ ಮೇ 5ರಂದು ಸಮನ್ಸ್‌ ಜಾರಿಗೊಳಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ