ಆ್ಯಪ್ನಗರ

ಆಸ್ತಿ ಪಾಲು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ ಮುತ್ತಪ್ಪ ರೈ ಪತ್ನಿ

ಇತ್ತೀಚೆಗೆ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ತಿಯಲ್ಲಿ ಪಾಲು ಕೋರಿ ಅವರ ಪತ್ನಿ ಅನುರಾಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 17 ಮಂದಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಆ.4ಕ್ಕೆ ಮುಂದೂಡಲಾಗಿದೆ.

Vijaya Karnataka Web 9 Jul 2020, 7:36 am
ಬೆಂಗಳೂರು: ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ತಿಯಲ್ಲಿ ಪಾಲು ಕೋರಿ ಅವರ ಪತ್ನಿ ಅನುರಾಧ ಮುತ್ತಪ್ಪ ರೈ ಅವರು ಸಿಟಿ ಸಿವಿಲ್‌ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
Vijaya Karnataka Web muttappa rai
ಮತ್ತಪ್ಪ ರೈ ಅವರ ಪತ್ನಿ ಅನುರಾಧ


ಅನುರಾಧ ಮುತ್ತಪ್ಪ ರೈ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪುತ್ರ ಸೇರಿ 17 ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ. ಮುತ್ತಪ್ಪ ರೈ ಅವರ ಮೊದಲ ಪತ್ನಿ ಮೃತಪಟ್ಟಿದ್ದು, ಅನುರಾಧ ಎರಡನೇ ಪತ್ನಿಯಾಗಿದ್ದಾರೆ. ಮುತ್ತಪ್ಪ ರೈ ಅವರು ತಮ್ಮ ಆಸ್ತಿ ವಿಚಾರವಾಗಿ ವಿಲ್‌ ಬರೆದಿದ್ದಾರೆಂದು ಹೇಳಲಾಗಿತ್ತು. ಆದರೆ, ಈ ವಿಷಯ ಯಾವುದೂ ತಮಗೆ ತಿಳಿದಿಲ್ಲ ಎಂದು ಅನುರಾಧ ಅವರ ಪರ ವಕೀಲರು ತಿಳಿಸಿದರು.

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಮೇ 15 ರಂದು ನಿಧನರಾಗಿದ್ದರು. ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಕಳೆದ ಒಂದು ವರ್ಷದ ಹಿಂದೆ ಕ್ಯಾನ್ಸರ್‌ ಗೆ ತುತ್ತಾಗಿದ್ದರು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಹೇಳಿಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ