ಆ್ಯಪ್ನಗರ

ಬೈಯಪ್ಪನಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಜೂನ್‌ನೊಳಗೆ ಪೂರ್ಣಗೊಳಿಸಲು ಸೂಚನೆ

ಬೈಯಪ್ಪನಹಳ್ಳಿ ರಸ್ತೆ ಬಳಿ ಕೈಗೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು (ಆರ್‌ಒಬಿ) ಜೂನ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Vijaya Karnataka Web 16 Jan 2021, 2:18 pm
ಬೆಂಗಳೂರು: ಬಾಣಸವಾಡಿ ಮತ್ತು ಹಳೆ ಮದ್ರಾಸ್‌ ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಯಪ್ಪನಹಳ್ಳಿ ರಸ್ತೆ ಬಳಿ ಕೈಗೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು (ಆರ್‌ಒಬಿ) ಜೂನ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಆರ್‌ಒಬಿ ನಂತರ ಹಳೆ ಮದ್ರಾಸ್‌ ರಸ್ತೆ ಕಡೆಗಿನ ರಸ್ತೆಯು ಕಿರಿದಾಗಿದ್ದು, 4 ಪಥದ ರಸ್ತೆ ನಿರ್ಮಾಣಕ್ಕೆ ವಿನ್ಯಾಸ ಹಾಗೂ ಯೋಜನೆ ರೂಪಿಸಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web Baiyappanahalli


ಬೈಯಪ್ಪನಹಳ್ಳಿಯಲ್ಲಿ ಹೊಸದಾಗಿ ರೈಲ್ವೆ ಟರ್ಮಿನಲ್‌ ನಿರ್ಮಾಣವಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಬೈಯಪ್ಪನಹಳ್ಳಿ ರಸ್ತೆಯನ್ನು ಶುಕ್ರವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

''ನಗರದ ಕೆ.ಆರ್‌.ಪುರದ ಟಿನ್‌ ಫ್ಯಾಕ್ಟರಿ ಜಂಕ್ಷನ್‌ನಲ್ಲಿಮೆಟ್ರೊ ಕಾಮಗಾರಿ ಪ್ರಗತಿಯಲ್ಲಿದೆ. ಈ ಜಂಕ್ಷನ್‌ ಮೂಲಕ ನಿತ್ಯ 1500 ಬಸ್‌ಗಳು ಸಂಚರಿಸುತ್ತವೆ. ರಸ್ತೆಯಲ್ಲಿಬಸ್‌ಗಳು ನಿಲ್ಲುವುದರಿಂದ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ, ಜಂಕ್ಷನ್‌ ಬಳಿ ಇರುವ ಒಂದು ಎಕರೆ ಪಾಲಿಕೆ ಜಾಗದಲ್ಲಿ ಬಸ್‌ ಟರ್ಮಿನಲ್‌ ಮತ್ತು ರಸ್ತೆ ನಿರ್ಮಿಸಲು ಕ್ರಮ ವಹಿಸಲಾಗುವುದು,' ಎಂದು ಹೇಳಿದರು.

ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್‌. ಎಂ. ವಿಶ್ವೇಶ್ವರಯ್ಯ ಹೆಸರು ನಾಮಕರಣ: ರಾಜ್ಯ ಸರಕಾರ

''ಹೊಸಕೋಟೆ, ಹೊರವರ್ತುಲ ರಸ್ತೆ ಕಡೆಗೆ ಸಂಚರಿಸುವ ಬಸ್‌ಗಳಿಗೆ ಬಿಎಂಆರ್‌ಸಿಎಲ್‌ ಬಸ್‌ ಟರ್ಮಿನಲ್‌ ನಿರ್ಮಿಸಿಕೊಡಲಿದೆ. ಅಲ್ಲದೆ, ವಾಹನಗಳ ಸುಗಮ ಸಂಚಾರಕ್ಕಾಗಿ ಹೊಸದಾಗಿ ರಸ್ತೆ ನಿರ್ಮಿಸಲಾಗುವುದು. ಈ ಸಂಬಂಧ ನೀಲನಕ್ಷೆ ಕೂಡ ಸಿದ್ಧವಾಗಿದೆ. ಬಸ್‌ ಟರ್ಮಿನಲ್‌ ನಿರ್ಮಾಣಕ್ಕೆ ಪಾಲಿಕೆಯೇ ಜಾಗ ನೀಡಲಿದೆ. ವಾಹನಗಳ ಮಾರ್ಗ ಬದಲಾವಣೆ ಮಾಡಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಅನುವು ಮಾಡಿಕೊಡಬೇಕು,'' ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದರು.

ಬಿಎಂಟಿಸಿ-ಮೆಟ್ರೊ ಜಂಟಿ ಯೋಜನೆ: ಮೊಬಿಲಿಟಿ ಕಾರ್ಡ್‌ ಬಳಕೆಗೆ ಬೈಯ್ಯಪ್ಪನಹಳ್ಳಿ ನಿಲ್ದಾಣ ರೆಡಿ

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್‌, ಪಾಲಿಕೆಯ ಯೋಜನಾ ವಿಭಾಗದ ವಿಶೇಷ ಆಯುಕ್ತ ಮನೋಜ್‌ ಜೈನ್‌, ವಿಶೇಷ ಆಯುಕ್ತ ಡಿ.ರಂದೀಪ್‌, ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ರವಿಕಾಂತೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ