ಆ್ಯಪ್ನಗರ

ಗೌರಿ ಲಂಕೇಶ್‌ ನೇತ್ರದಾನ, ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ

ಮಂಗಳವಾರ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್‌ ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ

Vijaya Karnataka Web 6 Sep 2017, 10:21 am
ಬೆಂಗಳೂರು: ಮಂಗಳವಾರ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್‌ ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ಹೇಳಿದ್ದಾರೆ.
Vijaya Karnataka Web gauri lankesh cremation in chamarajpet
ಗೌರಿ ಲಂಕೇಶ್‌ ನೇತ್ರದಾನ, ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ


ಕಣ್ಣುಗಳನ್ನು ಅವರ ಇಚ್ಛೆಯಂತೆ ದಾನ ಮಾಡುತ್ತಿರುವುದಾಗಿ ಗೌರಿ ಅವರ ತಮ್ಮ ಇಂದ್ರಜಿತ್‌ ಲಂಕೇಶ್‌ ತಿಳಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರಂಭಗೊಂಡಿದೆ.

ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥಿವ ಶರೀರವನ್ನು ಸಂಸ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಇಂದ್ರಜಿತ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ