ಆ್ಯಪ್ನಗರ

ಗುದ್ದೋಡು ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು

ತಮ್ಮ ವಿರುದ್ಧದ ಗುದ್ದೋಡು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಬಕಾರಿ ಉದ್ಯಮಿ ದಿ. ಆದಿಕೇಶವುಲು ಮೊಮ್ಮಗ ಗೀತಾವಿಷ್ಣು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

Vijaya Karnataka 31 Jul 2018, 5:00 am
ಬೆಂಗಳೂರು: ತಮ್ಮ ವಿರುದ್ಧದ ಗುದ್ದೋಡು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಬಕಾರಿ ಉದ್ಯಮಿ ದಿ. ಆದಿಕೇಶವುಲು ಮೊಮ್ಮಗ ಗೀತಾವಿಷ್ಣು ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web accident1


ಅವರ ಅರ್ಜಿಯನ್ನು ಆಲಿಸಿದ ನ್ಯಾ.ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ನ್ಯಾಯಪೀಠ ಸಿಸಿಬಿ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರು ''ಪ್ರಕರಣದಲ್ಲಿ ಅರ್ಜಿದಾರರ ತಪ್ಪೇನೂ ಇಲ್ಲ. ಆದೊಂದು ಅಚಾನಕ್‌ ಆಗಿ ನಡೆದ ಅಪಘಾತ. ಆ ಸಂದರ್ಭದಲ್ಲಿ ಭಯಗೊಂಡಿದ್ದರಿಂದ ಅವರು ತಪ್ಪಿಸಿಕೊಂಡಿದ್ದರಷ್ಟೆ'' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಕಳೆದ ಸೆ.27ರಂದು ಗೀತಾವಿಷ್ಣು ಐಷಾರಾಮಿ ಕಾರು ಓಡಿಸುತ್ತಿದ್ದಾಗ ಬೆಂಗಳೂರಿನ ಸೌತ್‌ ಎಂಡ್‌ ವೃತ್ತದ ಬಳಿ ಮಾರುತಿ ಓಮ್ನಿ ಕಾರಿಗೆ ಗುದ್ದಿದ್ದರು. ಆ ವೇಳೆ ಆತನ ಕಾರಿನಲ್ಲಿ 110 ಗ್ರಾಂ ಗಾಂಜಾ ದೊರೆತಿತ್ತೆಂದು ಪೊಲೀಸರು ತಿಳಿಸಿದ್ದರು. ಅಲ್ಲದೆ, ಜಯನಗರ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆತ ನಂತರ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಪ್ಪಿಸಿಕೊಂಡಿದ್ದನು. ಬಳಿಕ ಸಿಸಿಬಿ ಪೊಲೀಸರ ಎದುರು ಆತ ಶರಣಾಗಿದ್ದನು. ಆತನನ್ನು ವಿಚಾರಣೆಗೊಳಪಡಿಸಿ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ