ಬೆಂಗಳೂರು: ನಗರದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿಲ್ದಾಣದಲ್ಲಿ ಜನೌಷಧ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಬಸ್ ನಿಲ್ದಾಣದಲ್ಲಿ ಸುಮಾರು ಎರಡು ತಾಸುಗಳ ಕಾಲ ಪರಿಶೀಲನೆ ನಡೆಸಿದ ಅವರು, ಶಿಶು ಪೋಷಣಾ ಕೇಂದ್ರದಲ್ಲಿ ಶೌಚಾಲಯ, ತೊಟ್ಟಿಲು, ಸಣ್ಣದಾದ ಹೀಟರ್ ಮತ್ತು ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ನಿಲ್ದಾಣಗಳಲ್ಲಿ ಯಾವುದೇ ವಾಣಿಜ್ಯ ಮಳಿಗೆಗಳು ಖಾಲಿ ಇರದಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದರು.
''ಚಾಲಕ ಮತ್ತು ನಿರ್ವಾಹಕರ ವಿಶ್ರಾಂತಿಗಾಗಿ ನಿರ್ಮಿಸಿರುವ ಕೊಠಡಿಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಜಾಸ್ತಿ ಮಾಡಲಾಗುವುದು. ಪ್ರಯಾಣಿಕರ ಲಗೇಜು ಕೊಠಡಿಗಳಲ್ಲಿ ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾ, ಅಗ್ನಿ ಶಾಮಕ ಉಪಕರಣಗಳನ್ನು ಅಳವಡಿಸಲಾಗುವುದು. ಚಿಕ್ಕ ಲಾಲ್ಬಾಗ್ನಿಂದ ಟರ್ಮಿನಲ್ವೊಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಿ, ಡಾಂಬರೀಕರಣ ಮಾಡಲು ಉದ್ದೇಶಿಸಲಾಗಿದೆ,'' ಎಂದು ಅವರು ಈ ವೇಳೆ ತಿಳಿಸಿದರು.
''ಮೆಟ್ರೊ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿರುವ ಪಾದಚಾರಿ ಮಾರ್ಗಕ್ಕೆ ಚಾವಣಿ ಅಳವಡಿಸಲಾಗುವುದು. ಮೆಜೆಸ್ಟಿಕ್ ನಿಲ್ದಾಣವನ್ನು ಪ್ರಯಾಣಿಕ ಸ್ನೇಹಿಯನ್ನಾಗಿ ಮಾಡಲು ನೀಲನಕ್ಷೆ ತಯಾರಿಸಲಾಗುವುದು. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಲಾಗುವುದು. ವಿಶೇಷ ಚೇತನ ಪ್ರಯಾಣಿಕರಿಗಾಗಿ ವೀಲ್ಚೇರ್ ನೀಡಲಾಗುವುದು,'' ಎಂದು ಹೇಳಿದರು.
''ನೀರನ್ನು ಸಂಸ್ಕರಿಸಿ, ಮರುಬಳಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಿಲ್ದಾಣದಲ್ಲಿ ಜಿಪಿಎಸ್ ಆಧಾರಿತ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಪ್ರಯಾಣಿಕರಿಗೆ ಕಲ್ಪಿಸಿರುವ ಸಮಗ್ರ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲು ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗುವುದು. 3ನೇ ಟರ್ಮಿನಲ್ನಲ್ಲಿ ಬಸ್ಗಳ ದಟ್ಟಣೆ ಜಾಸ್ತಿ ಇದ್ದು, ಕೆಲವೊಂದು ಬಸ್ಗಳನ್ನು 2ನೇ ಟರ್ಮಿನಲ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ'' ಎಂದರು.
ಬಸ್ ನಿಲ್ದಾಣದಲ್ಲಿ ಸುಮಾರು ಎರಡು ತಾಸುಗಳ ಕಾಲ ಪರಿಶೀಲನೆ ನಡೆಸಿದ ಅವರು, ಶಿಶು ಪೋಷಣಾ ಕೇಂದ್ರದಲ್ಲಿ ಶೌಚಾಲಯ, ತೊಟ್ಟಿಲು, ಸಣ್ಣದಾದ ಹೀಟರ್ ಮತ್ತು ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ನಿಲ್ದಾಣಗಳಲ್ಲಿ ಯಾವುದೇ ವಾಣಿಜ್ಯ ಮಳಿಗೆಗಳು ಖಾಲಿ ಇರದಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದರು.
''ಚಾಲಕ ಮತ್ತು ನಿರ್ವಾಹಕರ ವಿಶ್ರಾಂತಿಗಾಗಿ ನಿರ್ಮಿಸಿರುವ ಕೊಠಡಿಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಜಾಸ್ತಿ ಮಾಡಲಾಗುವುದು. ಪ್ರಯಾಣಿಕರ ಲಗೇಜು ಕೊಠಡಿಗಳಲ್ಲಿ ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾ, ಅಗ್ನಿ ಶಾಮಕ ಉಪಕರಣಗಳನ್ನು ಅಳವಡಿಸಲಾಗುವುದು. ಚಿಕ್ಕ ಲಾಲ್ಬಾಗ್ನಿಂದ ಟರ್ಮಿನಲ್ವೊಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಿ, ಡಾಂಬರೀಕರಣ ಮಾಡಲು ಉದ್ದೇಶಿಸಲಾಗಿದೆ,'' ಎಂದು ಅವರು ಈ ವೇಳೆ ತಿಳಿಸಿದರು.
''ಮೆಟ್ರೊ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿರುವ ಪಾದಚಾರಿ ಮಾರ್ಗಕ್ಕೆ ಚಾವಣಿ ಅಳವಡಿಸಲಾಗುವುದು. ಮೆಜೆಸ್ಟಿಕ್ ನಿಲ್ದಾಣವನ್ನು ಪ್ರಯಾಣಿಕ ಸ್ನೇಹಿಯನ್ನಾಗಿ ಮಾಡಲು ನೀಲನಕ್ಷೆ ತಯಾರಿಸಲಾಗುವುದು. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಲಾಗುವುದು. ವಿಶೇಷ ಚೇತನ ಪ್ರಯಾಣಿಕರಿಗಾಗಿ ವೀಲ್ಚೇರ್ ನೀಡಲಾಗುವುದು,'' ಎಂದು ಹೇಳಿದರು.
''ನೀರನ್ನು ಸಂಸ್ಕರಿಸಿ, ಮರುಬಳಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಿಲ್ದಾಣದಲ್ಲಿ ಜಿಪಿಎಸ್ ಆಧಾರಿತ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಪ್ರಯಾಣಿಕರಿಗೆ ಕಲ್ಪಿಸಿರುವ ಸಮಗ್ರ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲು ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗುವುದು. 3ನೇ ಟರ್ಮಿನಲ್ನಲ್ಲಿ ಬಸ್ಗಳ ದಟ್ಟಣೆ ಜಾಸ್ತಿ ಇದ್ದು, ಕೆಲವೊಂದು ಬಸ್ಗಳನ್ನು 2ನೇ ಟರ್ಮಿನಲ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ'' ಎಂದರು.