ಆ್ಯಪ್ನಗರ

ಬೆಂಗಳೂರು: ಗೋ ಏರ್ ಏರ್ಲೈನ್ಸ್ ವಿರುದ್ಧ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ ಪ್ರಯಾಣಿಕರು

ತಾಂತ್ರಿಕ ಕಾರಣದಿಂದ ಸುಮಾರು 6 ತಾಸು ಕಾಲ ವಿಮಾನದೊಳಗೆ ಕುಳಿತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಗೋ ಏರ್ ಏರ್ಲೈನ್ಸ್ ವಿರುದ್ಧವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Vijaya Karnataka Web 24 Jan 2020, 12:41 pm
ಬೆಂಗಳೂರು: ತಾಂತ್ರಿಕ ಕಾರಣದಿಂದ ಸುಮಾರು 6 ತಾಸು ಕಾಲ ವಿಮಾನದೊಳಗೆ ಕುಳಿತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಗೋಏರ್ ಏರ್ಲೈನ್ಸ್ ವಿರುದ್ಧ ವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
Vijaya Karnataka Web goair


ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಫುಕೆಟ್ ತೆರಳುತ್ತಿದ್ದ ಗೋ ಏರ್ ವಿಮಾನ ತಾಂತ್ರಿಕ ಕಾರಣದಿಂದ ಬೆಂಗಳೂರಿಗೆ ಮರಳಿತು. ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಎಂಜಿನಿಯರ್ ಗಳ ತಂಡ ಮೂರ್ನಾಲ್ಕು ತಾಸು ತೆಗೆದುಕೊಂಡಿತ್ತು. ಅಷ್ಟರಲ್ಲೇ ವಿಮಾನದ ಪೈಲೆಟ್ ಸೇರಿದಂತೆ ಇನ್ನಿತರ ಸಿಬ್ಬಂದಿಯ ಪಾಳಿ ಮುಗಿದುಹೋಗಿತ್ತು. ಹೀಗಾಗಿ, ಪರ್ಯಾಯ ಸಿಬ್ಬಂದಿಯನ್ನು ಗೋಏರ್ ಕಲ್ಪಿಸಿದೆ.

ಆದರೆ, ಶುಕ್ರವಾರ ಬೆಳಗ್ಗೆ ಮಂಜು ಆವರಿಸಿದ ಕಾರಣ ವಿಮಾನ ಹಾರಾಟ ಮತ್ತಷ್ಟು ವಿಳಂಬವಾಯಿತು. ಇದರಿಂದಾಗಿ ವಿಮಾನದಲ್ಲಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಏರ್ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಂಜು ಮುಸುಕಿದ ವಾತಾವರಣ ತುಂಬಾ ಹೊತ್ತಿನವರೆಗೂ ಮುಂದುವರೆದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಈ ವೇಳೆ ಏರ್ಲೈನ್ಸ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

58 ವಿಮಾನಗಳ ಹಾರಾಟದಲ್ಲಿ ವಿಳಂಬ!

ಸೂಕ್ತ ಪರ್ಯಾಯ ವ್ಯವಸ್ಥೆ ಮಾಡದೆ, ಮಾಹಿತಿ ನೀಡದೆ ಗೋಏರ್ ಪ್ರಯಾಣಿಕರಿಗೆ ಅನಾನುಕೂಲ ಮಾಡಿದೆ ಎಂದು ಆರೋಪಿಸಿದರು. ಇನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು ಆವರಿಸಿದ್ದ ಕಾರಣ ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ