ಆ್ಯಪ್ನಗರ

ವರಮಹಾಲಕ್ಷ್ಮಿ ಹಬ್ಬಕ್ಕೆ ಗೊರವನಹಳ್ಳಿ ಲಕ್ಷ್ಮಿ ದೇವಾಲಯ ಬಂದ್‌

''ಕುಂಕುಮಾರ್ಚನೆ, ಹೋಮ, ಅಷ್ಟಾವಧಾನ ಸೇವೆ, ತ್ರಿಕಾಲ ಪೂಜೆಗಳಿಗೆ ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳುವ ಜತೆಗೆ ಆನ್‌ಲೈನ್‌ನಲ್ಲಿಭಾಗಿಯಾಗುವ ಅವಕಾಶ ಕಲ್ಪಿಸಲಾಗುವುದು' ಎಂದು ದೇವಸ್ಥಾನದ ಆಡಳಿತ ವಿಭಾಗದ ಸಿಬ್ಬಂದಿ ತಿಳಿಸಿದರು.

Vijaya Karnataka Web 25 Jul 2020, 5:03 pm
ಬೆಂಗಳೂರು: ಪ್ರತಿ ವರ್ಷ ವರಮಹಾಲಕ್ಷ್ಮಿ ಹಬ್ಬದಂದು ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಮಂದಿಯನ್ನು ಬರಮಾಡಿಕೊಳ್ಳುತ್ತಿದ್ದ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನವನ್ನು ಇದೇ ಮೊದಲ ಬಾರಿಗೆ ವರಮಹಾಲಕ್ಷ್ಮಿ ಹಬ್ಬದಂದು ಬಂದ್‌ ಮಾಡಲಾಗುಧಿತ್ತಿದೆ. ಈ ಸಂಗತಿ ಭಕ್ತ ಸಮೂಹಕ್ಕೆ ಭಾರಿ ಬೇಸರ ಉಂಟು ಮಾಡಿದೆ.
Vijaya Karnataka Web ಗೊರವನಹಳ್ಳಿ ಲಕ್ಷ್ಮಿ ದೇವಾಲಯ
ಗೊರವನಹಳ್ಳಿ ಲಕ್ಷ್ಮಿ ದೇವಾಲಯ


ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಸ್ಥಾನವಿದ್ದು, ಕಳೆದ ವಾರ ದೇವಾಲಯದ ಸಿಬ್ಬಂದಿಗೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಆ.5ರವರೆಗೆ ದೇವಾಲಯವನ್ನು ಬಂದ್‌ ಮಾಡಲಾಗಿದೆ. ಶುಕ್ರವಾರ, ಮಂಗಳವಾರ, ಭಾನುವಾರ ದೇವಾಲಯದಲ್ಲಿ ವಿಶೇಷ ಪೂಜೆ ನಡೆದರೂ ಶುಕ್ರವಾರ ಹೆಚ್ಚಿನ ಭಕ್ತರು ಆಗಮಿಸುತ್ತಾರೆ.

ಆನ್‌ಲೈನ್‌ ಪೂಜಾ ಸೇವೆಗೆ ಚಿಂತನೆ

ಕೊರೊನಾ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸಲು ದೇಗುಲ ಆಡಳಿತ ಮಂಡಳಿಯು ದೇವಾಲಯದ ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕವೂ ಒದಗಿಸಲು ಚಿಂತನೆ ನಡೆದಿದೆ.

''ಕುಂಕುಮಾರ್ಚನೆ, ಹೋಮ, ಅಷ್ಟಾವಧಾನ ಸೇವೆ, ತ್ರಿಕಾಲ ಪೂಜೆಗಳಿಗೆ ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳುವ ಜತೆಗೆ ಆನ್‌ಲೈನ್‌ನಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗುವುದು' ಎಂದು ದೇವಸ್ಥಾನದ ಆಡಳಿತ ವಿಭಾಗದ ಸಿಬ್ಬಂದಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ