ಆ್ಯಪ್ನಗರ

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌: ನಮ್ಮ ಹಣ ನಮಗೆ ಕೊಡಿಸಿ, ಗ್ರಾಹಕರ ಅಹವಾಲು

ಕಳೆದ ಒಂದು ವರ್ಷದಿಂದ ಗ್ರಾಹಕರಿಗೆ ಕೇವಲ ವಾರ್ಷಿಕ 1 ಲಕ್ಷ ರೂ.ವರೆಗೆ ಮಾತ್ರ ಹಣ ಡ್ರಾ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಆರ್‌ಬಿಐ 2021ರ ಜ.10ರ ಒಳಗೆ ಲೆಕ್ಕಪರಿಶೋಧನೆಯನ್ನು ಪೂರ್ಣಗೊಳಿಸಿ, ಆಡಿಟ್‌ ವರದಿ ನೀಡಬೇಕು ಮತ್ತು ಅವಶ್ಯಕತೆಗನುಗುಣವಾಗಿ ಹೆಚ್ಚಿನ ಮೊತ್ತದ ಹಣ ಡ್ರಾ ಮಾಡಲು ಗ್ರಾಹಕರಿಗೆ ಅವಕಾಶ ಕಲ್ಪಿಸಬೇಕು

Vijaya Karnataka Web 21 Dec 2020, 11:51 pm
ಬೆಂಗಳೂರು: ಬ್ಯಾಂಕ್‌ನ ಲೆಕ್ಕಪರಿಶೋಧನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿ ಹಾಗೂ ಬೇರೊಂದು ಬ್ಯಾಂಕ್‌ ಜತೆಗೆ ವಿಲೀನಗೊಳಿಸುವ ಮೂಲಕ ಠೇವಣಿದಾರರ ಹಿತರಕ್ಷಿಸುವಂತೆ ಆಗ್ರಹಿಸಿ ನಗರದ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮುಂದೆ ಠೇವಣಿದಾರರ ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌


ಲೆಕ್ಕಪರಿಶೋಧನೆ ತಡ ಮಾಡುತ್ತಿರುವ ಮತ್ತು ಬ್ಯಾಂಕ್‌ ವಹಿವಾಟಿಗೆ ನಿರ್ಬಂಧ ವಿಧಿಸಿರುವ ಆರ್‌ಬಿಐ ಕ್ರಮದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಠೇವಣಿದಾರರ ಸಂಘದ ಅಧ್ಯಕ್ಷೆ ಪ್ರತಿಮಾ ಮುದ್ದರಾಜ್‌, ‘‘ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಿಂದಾಗಿ ಅಮಾಯಕ ಗ್ರಾಹಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಆರ್‌ಬಿಐ, ಬ್ಯಾಂಕ್‌ನ ಸಂಪೂರ್ಣ ಲೆಕ್ಕ ಪರಿಶೋಧನೆ ನಡೆಸದೆ ವಿಳಂಬ ಎಸಗುತ್ತಿದೆ. ಕಳೆದ ಒಂದು ವರ್ಷದಿಂದ ಗ್ರಾಹಕರಿಗೆ ಕೇವಲ ವಾರ್ಷಿಕ 1 ಲಕ್ಷ ರೂ.ವರೆಗೆ ಮಾತ್ರ ಹಣ ಡ್ರಾ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಆರ್‌ಬಿಐ 2021ರ ಜ.10ರ ಒಳಗೆ ಲೆಕ್ಕಪರಿಶೋಧನೆಯನ್ನು ಪೂರ್ಣಗೊಳಿಸಿ, ಆಡಿಟ್‌ ವರದಿ ನೀಡಬೇಕು ಮತ್ತು ಅವಶ್ಯಕತೆಗನುಗುಣವಾಗಿ ಹೆಚ್ಚಿನ ಮೊತ್ತದ ಹಣ ಡ್ರಾ ಮಾಡಲು ಗ್ರಾಹಕರಿಗೆ ಅವಕಾಶ ಕಲ್ಪಿಸಬೇಕು’’ ಎಂದು ಒತ್ತಾಯಿಸಿದರು.

ಬ್ಯಾಂಕ್‌ನಲ್ಲಿಸಾವಿರಾರು ಮಂದಿ ಹಿರಿಯ ನಾಗರಿಕರು ಲಕ್ಷಾಂತರ ರೂ.ಗಳನ್ನು ಹೂಡಿಕೆ ಮಾಡಿದ್ದು, ಇಳಿ ವಯಸ್ಸಿನಲ್ಲಿಅವರಿಗೆ ಭವಿಷ್ಯವೇ ಇಲ್ಲದಂತಾಗಿದೆ. ಆಡಳಿತ ಮಂಡಳಿಯ ಅವ್ಯವಹಾರದಿಂದಾಗಿ ಗಂಭೀರ ಸಮಸ್ಯೆಗೆ ಸಿಲುಕಿದ್ದು, ಈ ಬ್ಯಾಂಕ್‌ಗೆ ಭವಿಷ್ಯವಿಲ್ಲದಂತಾಗಿದೆ. ಆದ್ದರಿಂದ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕ್‌ನೊಂದಿಗೆ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅನ್ನು ವಿಲೀನಗೊಳಿಸುವ ಮೂಲಕ ಠೇವಣಿದಾರರ ಹಿತ ರಕ್ಷಣೆ ಮಾಡಬೇಕು. ತಮ್ಮ ಬೇಡಿಕೆಗಳನ್ನು ಜ.10ರ ಒಳಗೆ ಈಡೇರಿಸದೇ ಇದ್ದರೆ, ಬ್ಯಾಂಕ್‌ನ ಎಲ್ಲಾ41 ಸಾವಿರ ಠೇವಣಿದಾರರು ಹಾಗೂ ಅವರ ಕುಟುಂಬ ವರ್ಗದವರು ಬ್ಯಾಂಕ್‌ ಮುಂದೆ ಉಪವಾಸ ಸತ್ಯಾಗ್ರಹ ಸೇರಿದಂತೆ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ’’ ಎಂದು ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ