ಆ್ಯಪ್ನಗರ

ಗುರು ರಾಘವೇಂದ್ರ ಬ್ಯಾಂಕ್‌ ಹಗರಣ: ಸಿಬಿಐ ತನಿಖೆಗೆ ಠೇವಣಿದಾರರ ಆಗ್ರಹ..!

'ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಸುಮಾರು 120 ಸೊಸೈಟಿಗಳು ಠೇವಣಿ ಇಟ್ಟಿವೆ. ಡಿಐಸಿಜಿಸಿ ವಿಮೆಯ ಹಣ ಈ ಸಂಸ್ಥೆಗಳಿಗೆ ಸಿಗುವುದಿಲ್ಲ. ಈ ಸೊಸೈಟಿಗಳ ಠೇವಣಿದಾರರು ಯಾವುದೇ ಪರಿಹಾರ ಸಿಗದೆ ಕಂಗಾಲಾಗಿದ್ದಾರೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪಿತಸ್ಥರಿಗೆ ಶಿಕ್ಷೆ ಕೊಡಿಸುವುದರ ಜತೆಗೆ, ನೊಂದ ಠೇವಣಿದಾರರಿಗೆ ನ್ಯಾಯ ಕೊಡಿಸಬೇಕಿದೆ. ಅದಕ್ಕಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು' - ರಾಜ್ಯ ಸರ್ಕಾರಕ್ಕೆ ಡಾ. ಶಂಕರ ಗುಹಾ ದ್ವಾರಕನಾಥ್‌ ಬೆಳ್ಳೂರು ಅವರ ಆಗ್ರಹ.

Authored byದಿಲೀಪ್ ಡಿ. ಆರ್. | Vijaya Karnataka 16 Feb 2022, 8:44 pm

ಹೈಲೈಟ್ಸ್‌:

  • ಬ್ಯಾಂಕ್‌ನ ಅಧ್ಯಕ್ಷರ ಬಂಧನ ಹೋರಾಟಕ್ಕೆ ಸಂದ ಜಯ ಎಂದ ಹೂಡಿಕೆದಾರರು
  • ಬ್ಯಾಂಕ್‌ನ ಅಧ್ಯಕ್ಷ ರಾಮಕೃಷ್ಣ ಅವರ ಬಂಧನವಾಗಿದೆ
  • ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web guru raghavendra
ಗುರು ರಾಘವೇಂದ್ರ ಬ್ಯಾಂಕ್‌ ಹಗರಣ: ಸಿಬಿಐ ತನಿಖೆಗೆ ಠೇವಣಿದಾರರ ಆಗ್ರಹ..!
ಬೆಂಗಳೂರು: ಶ್ರೀ ಗುರು ರಾಘವೇಂದ್ರ ಕ್ರೆಡಿಟ್‌ ಕೋ - ಆಪರೇಟಿವ್‌ ಬ್ಯಾಂಕ್‌ ಮತ್ತು ಗುರು ಸಾರ್ವಭೌಮ ಸೌಹಾರ್ದ ಸೊಸೈಟಿ ಹಗರಣಗಳ ಸೂತ್ರಧಾರ ಹಾಗೂ ಬ್ಯಾಂಕ್‌ನ ಅಧ್ಯಕ್ಷ ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದರಿಂದ ನಮ್ಮ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಂತಾಗಿದೆ ಎಂದು ಶ್ರೀ ಗುರು ರಾಘವೇಂದ್ರ ಕೋ - ಆಪರೇಟಿವ್‌ ಬ್ಯಾಂಕ್‌ ಷೇರುದಾರರು ಹಾಗೂ ಠೇವಣಿದಾರರ ಹಿತರಕ್ಷಣಾ ವೇದಿಕೆ ಮುಖ್ಯ ಪೋಷಕರಾದ ಡಾ. ಶಂಕರ ಗುಹಾ ದ್ವಾರಕನಾಥ್‌ ಬೆಳ್ಳೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕರ್ನಾಟಕ ಪೊಲೀಸರ ಮೇಲೆ ನಮಗೆ ನಂಬಿಕೆ ಇತ್ತು. ಆದರೆ, ರಾಜಕೀಯ ಒತ್ತಡದಿಂದಾಗಿ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ಸ್ವಲ್ಪ ತಡವಾಗಿಯಾದರೂ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಷೇರುದಾರರಿಗೆ ಅನುಕೂಲವಾಗುತ್ತದೆ' ಎಂದರು.

ರಾಘವೇಂದ್ರ ಬ್ಯಾಂಕ್‌ ಹಗರಣ: ಇಡಿ ಅಧಿಕಾರಿಗಳಿಂದ ಬ್ಯಾಂಕ್ ಅಧ್ಯಕ್ಷ ರಾಮಕೃಷ್ಣ ಬಂಧನ !
'ಹಗರಣ ಬೆಳಕಿಗೆ ಬಂದು ಜನವರಿ 10ನೇ ತಾರೀಕಿಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬ್ಯಾಂಕ್‌ನ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ನಡೆಸಿದ್ದೆವು. ಅದರಲ್ಲಿ ಠೇವಣಿದಾರರ ಸಂಕಷ್ಟಗಳು, ಸ್ಥಳೀಯ ಶಾಸಕರು, ಸಂಸದರ ನಿರ್ಲಕ್ಷ್ಯ ಸೇರಿದಂತೆ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳನ್ನು ತಿಳಿಸಲಾಗಿತ್ತು. ಅದಾದ ಬಳಿಕ ಹಗರಣದ ಸೂತ್ರಧಾರ ಕೆ. ರಾಮಕೃಷ್ಣ ಅವರನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ' ಎಂದು ಹೇಳಿದರು.

'ಬಸವನಗುಡಿ ಶಾಸಕ ರವಿಸುಬ್ರಮಣ್ಯ ಅವರು ಅಧಿವೇಶನದ ವೇಳೆ ಸದನದಲ್ಲಿ ಮಾತನಾಡುತ್ತಾ ಹಗರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಆ 24 ಜನರ ಪೈಕಿ ಯಾರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಸಿಬಿಐ ತನಿಖೆಯಿಂದಷ್ಟೇ ಸತ್ಯ ಬಹಿರಂಗವಾಗಬೇಕಾಗಿದೆ' ಎಂದರು.

ಗುರು ರಾಘವೇಂದ್ರ ಬ್ಯಾಂಕ್‌ ಹಿತರಕ್ಷಣಾ ವೇದಿಕೆಯಿಂದ ವಿಕಾಸ ಸೌಧದಲ್ಲಿ ಪ್ರತಿಭಟನೆ..!
'ಗುರು ರಾಘವೇಂದ್ರ ಕೋ - ಆಪರೇಟಿವ್‌ ಬ್ಯಾಂಕಿನಲ್ಲಿ 2,400 ಕೋಟಿ ರೂ. ಹಗರಣ, ಗುರುಸಾರ್ವಭೌಮ ಸೊಸೈಟಿಯಲ್ಲಿ 270 ಕೋಟಿ ರೂ. ಹಗರಣ, ನಾಗರತ್ನ ಸೌಹಾರ್ದ ಸೊಸೈಟಿಯಲ್ಲಿ 150 ಕೋಟಿ ರೂ. ಹಗರಣ, ಕಣ್ವ ಸೌಹಾರ್ದ ಸೊಸೈಟಿಯಲ್ಲಿ ನೂರು ಕೋಟಿ ರೂ. ಹಗರಣ, ವಸಿಷ್ಠ ಸೌಹಾರ್ದ ಸೊಸೈಟಿಯಲ್ಲಿ ಸುಮಾರು 500 ಕೋಟಿ ರೂ. ಹಗರಣ ನಡೆದಿವೆ. ಆದರೂ ಸ್ಥಳೀಯ ಶಾಸಕರು ಮತ್ತು ಸಂಸದರು ಇದರ ಬಗ್ಗೆ ಮಾತನಾಡುತ್ತಿಲ್ಲ' ಎಂದು ಡಾ. ಶಂಕರ್‌ ಗುಹಾ ಆರೋಪಿಸಿದರು.

'ಇನ್ನೊಂದೆಡೆ, ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಸುಮಾರು 120 ಸೊಸೈಟಿಗಳು ಠೇವಣಿ ಇಟ್ಟಿವೆ. ಡಿಐಸಿಜಿಸಿ ವಿಮೆಯ ಹಣ ಈ ಸಂಸ್ಥೆಗಳಿಗೆ ಸಿಗುವುದಿಲ್ಲ. ಈ ಸೊಸೈಟಿಗಳ ಠೇವಣಿದಾರರು ಯಾವುದೇ ಪರಿಹಾರ ಸಿಗದೆ ಕಂಗಾಲಾಗಿದ್ದಾರೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪಿತಸ್ಥರಿಗೆ ಶಿಕ್ಷೆ ಕೊಡಿಸುವುದರ ಜತೆಗೆ, ನೊಂದ ಠೇವಣಿದಾರರಿಗೆ ನ್ಯಾಯ ಕೊಡಿಸಬೇಕಿದೆ. ಅದಕ್ಕಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು' ಎಂದು ಅವರು ಒತ್ತಾಯಿಸಿದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ