ಆ್ಯಪ್ನಗರ

ಬೆಂಗಳೂರಿನಲ್ಲಿ ಭಾರಿ ಮಳೆ; ಟ್ರಾಫಿಕ್ ಜಾಮ್; ಮೆಟ್ರೋಗೂ ಕೈಕೊಟ್ಟ ವಿದ್ಯುತ್

ಉದ್ಯಾನನಗರಿ ಬೆಂಗಳೂರಿನ ಹಲವೆಡೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಏಜೆನ್ಸೀಸ್ 20 May 2017, 10:45 pm
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಹಲವೆಡೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
Vijaya Karnataka Web heavy rain cuuses traffic jams in bengaluru
ಬೆಂಗಳೂರಿನಲ್ಲಿ ಭಾರಿ ಮಳೆ; ಟ್ರಾಫಿಕ್ ಜಾಮ್; ಮೆಟ್ರೋಗೂ ಕೈಕೊಟ್ಟ ವಿದ್ಯುತ್


ಶನಿವಾರ ಸಂಜೆಯ ಹೊತ್ತಿಗೆ ಮತ್ತೆ ಧಾರಾಕಾರವಾಗಿ ಮಳೆ ಸುರಿಯಲು ಆರಂಭಿಸಿರುವುದರಿಂದ ಹಲವೆಡೆ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ಇನ್ನು ಯಲಹಂಕ, ಹೆಬ್ಬಾಳ ಪ್ರದೇಶಗಳಲ್ಲಿ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆಗಳಲ್ಲೇ ನೀರು ಹರಿಯುತ್ತಿದ್ದು, ಒಳ ಚರಂಡಿ ವ್ಯವಸ್ಥೆಯು ಸಮರ್ಪಕವಾಗಿಲ್ಲ.

ಮಳೆಯಿಂದಾಗಿ ಮರಗಳು ರಸ್ತೆಗೆ ಉರುಳಿರುವ ಬಗ್ಗೆಯೂ ಮಾಹಿತಿಗಳು ಬಂದಿವೆ. ಕೆ.ಎಚ್. ರಸ್ತೆ ಹಾಗೂ ಆನಂದ್ ರಾವ್ ಸರ್ಕಲ್ ಸೇರದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಮೆಟ್ರೋಗೂ ಕೈಕೊಟ್ಟ ವಿದ್ಯುತ್...
ಕಳೆದ ಹಲವಾರು ದಿನಗಳಲ್ಲಿ ಬೆಂಗಳೂರು ನಗರದ್ಯಾಂತ ಸುರಿಸುತ್ತಿರುವ ಮಳೆಯಿಂದಾಗಿ ವಿದ್ಯುತ್‌ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಬೆಂಗಳೂರಿನ ಜನರು ಕತ್ತಲೆಯಲ್ಲೇ ದಿನ ದೂಡಬೇಕಾಗಿದೆ.

ಅತ್ತ ಭಾರಿ ಮಳೆಯಿಂದಾಗಿ ನಮ್ಮ ಬೆಂಗಳೂರು ಮೆಟ್ರೋಗೂ ವಿದ್ಯುತ್ ಕೈಕೊಟ್ಟಿದೆ. ಇದರಿಂದಾಗಿ ಬೈಯಪ್ಪನಹಳ್ಳಿ ರೈಲುಗಳೂ ಮೈಸೂರು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ