ಆ್ಯಪ್ನಗರ

ನಿವಾರ್‌ ಚಂಡಮಾರುತದ ಎಫೆಕ್ಟ್‌: ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆ

ನಿವಾರ್‌ ಚಂಡಮಾರುತ ಅಪ್ಪಳಿಸುವ ಪರಿಣಾಮ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿತ್ತು, ವಾಹನಗಳು ರಸ್ತೆಗಳ ನೀರಿನಲ್ಲಿ ಆಟಿಕೆಗಳಂತೆ ತೇಲಿ ಹೋಗುತ್ತಿದ್ದವು.

Vijaya Karnataka Web 25 Nov 2020, 7:26 am
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿವಾರ್‌ ಚಂಡಮಾರುತ ಎಂಟ್ರಿ ಕೊಡುವ ವೇಳೆ ಬರೋಬ್ಬರಿ ಗಂಟೆಗೆ 100ಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.
Vijaya Karnataka Web Nivar Cyclone​


ಹೀಗಾಗಿ ಭಾರೀ ಸುರಕ್ಷತಾ ಕ್ರಮಗಳನ್ನು ಎನ್‌ಡಿಆರ್‌ಎಫ್‌ ಕೈಗೊಂಡಿದೆ. ಇನ್ನು ಚಂಡಮಾರುತದ ಎಫೆಕ್ಟ್‌ ಕೇವಲ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಗೆ ಮಾತ್ರವಲ್ಲದೇ ಬೆಂಗಳೂರಿಗೂ ತಟ್ಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ ಎಂದು ತಿಳಿಸಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿತ್ತು, ವಾಹನಗಳು ರಸ್ತೆಗಳ ನೀರಿನಲ್ಲಿ ಆಟಿಕೆಗಳಂತೆ ತೇಲಿ ಹೋಗುತ್ತಿದ್ದವು.

ಇನ್ನು ನಿವಾರ್‌ ಚಂಡಮಾರುತ ಪರಿಣಾಮದಿಂದ ಬೆಂಗಳೂರಿನಲ್ಲಿ ನ. 25 ರಿಂದ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಬೆಂಗಳೂರು ಸೇರಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.ಇನ್ನು ಈ ಹಿನ್ನೆಲೆ ಬಿಬಿಎಂಪಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಸದ್ಯ ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಯತ್ತ ನಿವಾರ್‌ ಚಂಡಮಾರುತ ಎಂಟ್ರಿಕೊಡಲಿದ್ದು ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.

ಸೋನಿಯಾ ಗಾಂಧಿ ಆಪ್ತರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್‌ ಇನ್ನಿಲ್ಲ..!

ಪುದುಕೋಟೈ, ತಂಜಾವೂರು, ತಿರುವರೂರು, ಕಾರೈಕಲ್, ನಾಗಪಟ್ಟಣಂ, ಕಡಲೂರು, ಅರಿಯಲೂರು ಮತ್ತು ಪೆರಬಾಲು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಸ್ತೆಗಳಿಗೆ, ಕೃಷಿಗೆ, ಸಾರ್ವಜನಿಕ ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ 22 ಎನ್‌ಡಿಆರ್‌ಎಫ್‌ ತಂಡಗಳನ್ನು ರಕ್ಷಣೆ ಹಿನ್ನೆಲೆ ನಿಯೋಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ