ಆ್ಯಪ್ನಗರ

ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ, ಬೆಂಗಳೂರು ಈಗ ಕೂಲ್ ಕೂಲ್!

ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಗಾಳಿ ಸಹಿತ ವರುಣರಾಯ ಅಬ್ಬರಿಸುತ್ತಿದ್ದಾನೆ. ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಾಗಿದ್ದ ಬೆಂಗಳೂರಿನಲ್ಲಿ ಇಂದು ಮುಂಜಾನೆ ಹಲವೆಡೆ ಸುರಿದ ಗುಡುಗು ಸಹಿತ ಭಾರೀ ಮಳೆಯು ಜನರಿಗೆ ತಂಪನ್ನು ನೀಡಿದೆ.

Vijaya Karnataka Web 24 Apr 2020, 8:18 am
ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ಮಳೆಯಾಗುತ್ತಿದ್ದು, ಉರಿ ಬಿಸಿಲಿನಿಂದ ಬೆಂದ ಜನರಿಗೆ ವರುಣ ತಂಪೆರಿದಿದ್ದಾನೆ. ಗುರುವಾರ ಸಂಜೆಯಿಂದಲೇ ಮಳೆಯ ಲಕ್ಷಣಗಳು ಕಂಡು ಬಂದಿದ್ದು, ಇಂದು ಮುಂಜಾನೆ ಬೆಂಗಳೂರಿನ ಎಲ್ಲೆಡೆ ಭಾರೀ ಮಳೆಯಾಗಿದೆ. ಇನ್ನೂ ಮೂರು-ನಾಲ್ಕು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.
Vijaya Karnataka Web rain

ಕೊರೊನಾ ವೈರಾಣು ಹರಡುವಿಕೆ ತಡೆಯುವುದಕ್ಕಾಗಿ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು, ಮನೆಯಲ್ಲೇ ಜನ ಬಿಸಿಲಿನ ತಾಪದಿಂದ ಸುಸ್ತಾಗಿದ್ದರು. ಇಂದು ಬೆಳ್ಳಂಬೆಳಗ್ಗೆ ಸುರಿದ ಮಳೆ ಜನರಿಗೆ ತಂಪನ್ನೇರೆದಿದೆ.

ಗುರುವಾರ ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನ ಕೆಲವೆಡೆ ರಾತ್ರಿ ಮಳೆ ಸುರಿದಿದೆ. ಮುಂಜಾನೆ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಗೆ ಮರಗಳು ರಸ್ತೆಗುರುಳಿವೆ.

ನಿಷೇಧಾಜ್ಞೆ ನಡುವೆಯೂ ಕೆಲವರು ಬೆಳ್ಳಂಬೆಳಗ್ಗೆ ಮನೆಯಿಂದ ಹೊರಬಂದವರು, ಮಳೆ ಬರುತ್ತಿದ್ದಂತೆ ವಾಪಸ್ಸದ ದೃಶ್ಯಗಳು ಕಂಡು ಬಂತು. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ವಾಹನಗಳ ಸಂಚಾರ ಹಾಗೂ ಜನರ ಓಡಾಟ ವಿರಳವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ