ಆ್ಯಪ್ನಗರ

ಬೆಂಗಳೂರಿನಲ್ಲಿ ವರುಣನ ಆರ್ಭಟ: ಇನ್ನೂ 2 ದಿನ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಿನ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮಾರುತಿ ಮಂದಿರಲ್ಲಿ 25.5 ಮಿ.ಮೀ. ಮಳೆಯಾಗಿದೆ. ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijaya Karnataka Web 13 Sep 2020, 10:13 am
ಬೆಂಗಳೂರು: ನಗರದಲ್ಲಿ ಶನಿವಾರ ಹಗುರದಿಂದ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ.
Vijaya Karnataka Web ಮಳೆ
ಸಾಂದರ್ಭಿಕ ಚಿತ್ರ


ಎರಡೂ ದಿನವೂ ಮೋಡ ಮುಸುಕಿದ ವಾತಾವರಣ ಇರಲಿದೆ. ಹಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗಲಿದ್ದು, ಕೆಲವೆಡೆ ಗುಡುಗು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ

ಮಾರುತಿ ಮಂದಿರದಲ್ಲಿ ಹೆಚ್ಚು ಮಳೆ ದಾಖಲು
ಶನಿವಾರ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದ ಹಲವೆಡೆ ಹೆಚ್ಚು ಮಳೆಯಾಗಿದೆ. ಮಾರುತಿ ಮಂದಿರಲ್ಲಿ 25.5 ಮಿ.ಮೀ. ಮಳೆಯಾಗಿದೆ. ಹಂಪಿನಗರ 22, ಚಾಮರಾಜಪೇಟೆ, ವಿವಿ ಪುರಂ ತಲಾ 21.5, ಬಸವನಗುಡಿ 20.5, ಅಗ್ರಹಾರ ದಾಸರಹಳ್ಳಿ 19, ರಾಜಮಹಲ್‌ ಗುಟ್ಟಹಳ್ಳಿ 14.5 ಮಿ.ಮೀ.ನಷ್ಟು ಮಳೆಯಾಗಿದೆ.
ರಾಜ್ಯದಲ್ಲಿ ಮತ್ತೆ ಪ್ರವಾಹ ಭೀತಿ; ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಸಂಜೆ ಮಳೆ ಸುರಿದ ಬಳಿಕ ನಾನಾ ಮೇಲುರಸ್ತೆಗಳ ಅಪ್ ರ್ಯಾಂಪ್‌/ಡೌನ್‌ ರ್ಯಾಂಪ್ ಸ್ಥಳಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಕೆಲ ಸ್ಥಳಗಳಲ್ಲಿ ಮಳೆನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನೀರು ನಿಂತ ದೃಶ್ಯಗಳು ಕಂಡವು. ಬಿಬಿಎಂಪಿ ಪ್ರಹರಿ ಕಾರ್ಯಪಡೆಯ ಸಿಬ್ಬಂದಿಗಳು ಸಮಸ್ಯೆಯಾದ ಸ್ಥಳಕ್ಕೆ ಧಾವಿಸಿ ನೀರು ಹೊರಹಾಕುವಲ್ಲಿ ಶ್ರಮಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ