ಆ್ಯಪ್ನಗರ

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ, ಲಗ್ಗೆರೆಯ ಪ್ರೀತಿ ನಗರದಲ್ಲಿ ರಸ್ತೆ ಕುಸಿತ!

ಇಂದು ಬೆಳ್ಳಂಬೆಳಗ್ಗೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿದ್ದು, ಲಗ್ಗೆರೆಯ ಪ್ರೀತಿ ನಗರದಲ್ಲಿ ರಸ್ತೆ ಕುಸಿತ ಸಂಭವಿಸಿದೆ.

Vijaya Karnataka Web 24 Apr 2020, 12:00 pm
Vijaya Karnataka Web road collapse
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಲಗ್ಗೆರೆಯ ಪ್ರೀತಿ ನಗರದಲ್ಲಿ ರಸ್ತೆ ಕುಸಿತ ಸಂಭವಿಸಿದೆ. ಮುಂಜಾನೆ ಸುರಿದ ಭಾರೀ ಮಳೆಗೆ ರಸ್ತೆ ಚರಂಡಿಗಳ ಪೈಪ್ ಒಡೆದಿದ್ದು ಇದರಿಂದ ರಸ್ತೆ ಕುಸಿತ ಉಂಟಾಗಿದೆ.


ವರುಣನ ಆರ್ಭಟದಲ್ಲಿ ಸಂಭವಿಸಿದ ಈ ರಸ್ತೆ ಕುಸಿತದಲ್ಲಿ ಕಾರು, ಬೈಕ್, ಆಟೋ ಸೇರಿ ನೂರಾರು ವಾಹನಗಳು ಸಿಲುಕಿಕೊಂಡಿದೆ. ಇದ್ದಕ್ಕಿದ್ದಂತೆ ರಸ್ತೆ ಕುಸಿದಿದ್ದರಿಂದ, ಬಾಯ್ಬಿಟ್ಟ ರಸ್ತೆಯನ್ನು ನೋಡಲು ಸಾವಿರಾರು ಜನರು ಬರುತ್ತಿದ್ದು, ಲಾಕ್ ಡೌನ್ ಉಲ್ಲಂಘನೆಯಾಗುತ್ತಿದೆ.

ಗುರುವಾರ ಸಂಜೆಯಿಂದಲೇ ಮಳೆಯ ಲಕ್ಷಣಗಳು ಕಂಡು ಬಂದಿದ್ದು, ಇಂದು ಮುಂಜಾನೆ ಬೆಂಗಳೂರಿನ ಎಲ್ಲೆಡೆ ಭಾರೀ ಮಳೆಯಾಗಿದೆ. ಇನ್ನೂ ಮೂರು-ನಾಲ್ಕು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ, ಬೆಂಗಳೂರು ಈಗ ಕೂಲ್ ಕೂಲ್!
ನಿನ್ನೆ ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನ ಕೆಲವೆಡೆ ರಾತ್ರಿ ಮಳೆ ಸುರಿದಿದೆ. ಇಂದು ಮುಂಜಾನೆ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಗೆ ಮರಗಳು ರಸ್ತೆಗುರುಳಿವೆ. ರಸ್ತೆ ಕುಸಿತ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ