ಆ್ಯಪ್ನಗರ

ಕಣ್ವ ಸಹಕಾರಿ ಬ್ಯಾಂಕ್‌ಗೆ ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್‌ ಸಲಹೆ

ಠೇವಣಿದಾರರ ಹಿತಾಸಕ್ತಿ ರಕ್ಷಿಸುವುದು ಅಗತ್ಯ. ಹಾಗಾಗಿ, ಸೊಸೈಟಿಯ ನಿರ್ವಹಣೆಗಾಗಿ ನಿವೃತ್ತ ಬ್ಯಾಂಕ್‌ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸುವುದು ಸೂಕ್ತ. ಈ ಕುರಿತು ನಿಲುವು ತಿಳಿಸಬೇಕು ಹಾಗೂ ಪ್ರಕರಣದ ತನಿಖಾ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

Vijaya Karnataka Web 27 Nov 2020, 6:49 am
ಬೆಂಗಳೂರು: ಶ್ರೀ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ನಿವೃತ್ತ ಬ್ಯಾಂಕ್‌ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಬಹುದು ಎಂದು ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಸಲಹೆ ನೀಡಿದೆ.
Vijaya Karnataka Web karnataka high court


ಶ್ರೀ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ಕೋಟ್ಯಂತರ ರೂ. ಹಣ ಅವ್ಯವಹಾರ ನಡೆಸಿದ್ದು, ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ ಎಂದು ಕೆ.ಎಸ್‌. ರಮೇಶ್‌ ಮತ್ತಿತರರು ಸಲ್ಲಿಸಿರುವ ಪಿಐಎಲ್‌ ಅನ್ನು ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಜಕ್ಕೂರು ವಾಯುನೆಲೆ ಬಳಿ ಮೆಟ್ರೊ ಮಾರ್ಗ; ನಿಯಮ ಉಲ್ಲಂಘನೆ ಕುರಿತು ಮಾಹಿತಿ

ಠೇವಣಿದಾರರ ಹಿತಾಸಕ್ತಿ ರಕ್ಷಿಸುವುದು ಅಗತ್ಯ. ಹಾಗಾಗಿ, ಸೊಸೈಟಿಯ ನಿರ್ವಹಣೆಗಾಗಿ ನಿವೃತ್ತ ಬ್ಯಾಂಕ್‌ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸುವುದು ಸೂಕ್ತ. ಈ ಕುರಿತು ನಿಲುವು ತಿಳಿಸಬೇಕು ಹಾಗೂ ಪ್ರಕರಣದ ತನಿಖಾ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ, ಇದೇ ವಿಷಯದ ಬಗ್ಗೆ ಹೊಸಕೋಟೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನೂ ಸಿಐಡಿಯೇ ನಡೆಸುವುದು ಸೂಕ್ತ ಎಂದು ನ್ಯಾಯಪೀಠ ಹೇಳಿತು.

ಬೆಂಗಳೂರಿನಲ್ಲಿ ಪತ್ತೆಯಾಗಿರೋ 3 ಕೋಟಿ ರೂ. ಮೌಲ್ಯದ 6 ಕೆ.ಜಿ ಚಿನ್ನಕ್ಕೆ ವಾರಸುದಾರರೇ ಇಲ್ಲ..!

ಸೊಸೈಟಿಯು ತನ್ನ ಸದಸ್ಯರು ಮತ್ತು ಸಾರ್ವಜನಿಕರಿಂದ 2019ರ ಮಾರ್ಚ್‌ವರೆಗೂ ಒಟ್ಟು 642.31 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಅದರಲ್ಲಿ ಕೆಲ ಕಂಪನಿಗಳಿಗೆ 416 ಕೋಟಿ ರೂ. ಸಾಲ ನೀಡಿದೆ. ಆದರೆ, ಕೊಟ್ಟಿರುವ ಸಾಲ ವಸೂಲಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಮಂಡಳಿ ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಡೀ ವಹಿವಾಟಿನ ಬಗ್ಗೆ ಫೋರೆನ್ಸಿಕ್‌ ಆಡಿಟ್‌ ಆಗಬೇಕು. ಈ ಕುರಿತು ಆದೇಶ ಹೊರಡಿಸುವಂತೆ ನ್ಯಾಯಪೀಠಕ್ಕೆ ಅರ್ಜಿದಾರರು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ